ಬ್ರೇಕಿಂಗ್ ನ್ಯೂಸ್
16-08-22 10:20 pm HK News Desk ದೇಶ - ವಿದೇಶ
ಶ್ರೀನಗರ, ಆಗಸ್ಟ್ 16: ಕಾಶ್ಮೀರದಲ್ಲಿ ಉಗ್ರರು ಪಂಡಿತರ ಮೇಲಿನ ದಾಳಿ ಮುಂದುವರಿಸಿದ್ದು, ಮಂಗಳವಾರ ಇಬ್ಬರು ಸಹೋದರರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಶೋಪಿಯಾನ್ ಕಣಿವೆ ಭಾಗದಲ್ಲಿ ಘಟನೆ ನಡೆದಿದ್ದು, ಒಬ್ಬರು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಇನ್ನೊಬ್ಬ ತೀವ್ರ ಗಾಯಗೊಂಡಿದ್ದಾರೆ.
ಮೂರು ತಿಂಗಳ ಹಿಂದೆ ಬುದ್ಗಾಮ್ ನಲ್ಲಿ ಸರಕಾರಿ ಕಚೇರಿಗೆ ದಾಳಿ ನಡೆಸಿ ಸರಕಾರಿ ಕೆಲಸದಲ್ಲಿದ್ದ ಪಂಡಿತ ಸಮುದಾಯದ ವ್ಯಕ್ತಿಯನ್ನು ಕೊಂದ ಬಳಿಕ ಈಗ ಮತ್ತೆ ದಾಳಿ ನಡೆಸಲಾಗಿದೆ. ಆನಂತರ 5 ಸಾವಿರಕ್ಕೂ ಹೆಚ್ಚು ಕಾಶ್ಮೀರಿ ಪಂಡಿತ ಸಮುದಾಯದ ಉದ್ಯೋಗಿಗಳು ಕಣಿವೆ ಭಾಗದಲ್ಲಿ ನಿಯೋಜಿತ ಕೆಲಸಕ್ಕೆ ಹಾಜರಾಗಿರಲಿಲ್ಲ. ಉಗ್ರರ ಭೀತಿಯಿಂದಾಗಿ ಭಾರೀ ಪ್ರತಿಭಟನೆಯನ್ನೂ ನಡೆಸಿದ್ದರು. ಆನಂತರ, ಇದೀಗ ಮತ್ತೆ ದಾಳಿ ನಡೆದಿದ್ದು, ಶೋಪಿಯಾನ್ ಜಿಲ್ಲೆಯ ಛೋಟಿಪೋರ ಎಂಬಲ್ಲಿ ಸಾಮಾನ್ಯ ಪ್ರಜೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಮೃತರನ್ನು ಸುನಿಲ್ ಕುಮಾರ್ ಎಂದು ಗುರುತಿಸಲಾಗಿದೆ. ಆತನ ಸೋದರ ಪಿಂಟು ಕುಮಾರ್ ತೀವ್ರ ಗಾಯಗೊಂಡಿದ್ದಾರೆ.

ಕಳೆದ ಮೇ ತಿಂಗಳಲ್ಲಿ ಬುದ್ಗಾಮ್ ನಲ್ಲಿ ತಹಸೀಲ್ದಾರ್ ಕಚೇರಿಗೆ ದಾಳಿ ನಡೆಸಲಾಗಿತ್ತು. ಅಲ್ಲಿ ಹೊಸತಾಗಿ ಸರಕಾರಿ ಉದ್ಯೋಗಕ್ಕೆ ನಿಯೋಜನೆಯಾಗಿದ್ದ ರಾಹುಲ್ ಭಟ್ ಎಂಬ ಪಂಡಿತ ವ್ಯಕ್ತಿಯನ್ನು ಉಗ್ರರು ಗುಂಡಿಟ್ಟು ಸಾಯಿಸಿದ್ದರು. ಇದರ ಬೆನ್ನಲ್ಲೇ ಭಾರೀ ಸಂಖ್ಯೆಯಲ್ಲಿ ಪಂಡಿತ ಸಮುದಾಯದ ಜನರು ಪ್ರತಿಭಟನೆ ನಡೆಸಿದ್ದರು. ಕೇಂದ್ರ ಸರಕಾರ ಮತ್ತೆ ಕಾಶ್ಮೀರಿ ಪಂಡಿತರನ್ನು ಕಾಶ್ಮೀರದಲ್ಲೇ ನೆಲೆಸುವಂತೆ ವಿಶೇಷ ಯೋಜನೆ ಪ್ರಕಟಿಸಿದ್ದು, ಅದರಂತೆ ದೆಹಲಿ ಇನ್ನಿತರ ಪ್ರದೇಶಗಳಲ್ಲಿ ಬೀಡು ಬಿಟ್ಟಿದ್ದವರು ಮತ್ತೆ ಬಂದು ನೆಲೆ ಕಂಡುಕೊಳ್ಳುತ್ತಿದ್ದಾರೆ. ಇದನ್ನು ಬಹಿರಂಗವಾಗಿಯೇ ವಿರೋಧಿಸಿರುವ ಉಗ್ರರು ಕಾಶ್ಮೀರಿ ಪಂಡಿತರಿಗೆ ಅವಕಾಶ ಕೊಟ್ಟರೆ ನಾವು ಅವಕಾಶ ಕೊಡಲ್ಲ ಎಂದು ಎಚ್ಚರಿಕೆ ನೀಡಿದ್ದರು.

ಕಳೆದ ಅಕ್ಟೋಬರ್ ತಿಂಗಳ ಬಳಿಕ ಪಂಡಿತರನ್ನು ಗುರಿಯಾಗಿಸಿ ಕೊಲ್ಲುವ ಕೃತ್ಯಗಳು ನಡೆಯುತ್ತಿದ್ದು, ಪಂಡಿತ ಸಮುದಾಯ ಮತ್ತೆ ಭೀತಿಗೆ ಒಳಗಾಗಿವೆ. 90ರ ದಶಕದಲ್ಲಾದ ಕಾಶ್ಮೀರ್ ಫೈಲ್ಸ್ ಚಿತ್ರದ ಚಿತ್ರಣ ಮತ್ತೆ ಮರುಕಳಿಸುತ್ತಿವೆಯಾ ಅನ್ನುವ ಭೀತಿ ಅಲ್ಲಿನ ಜನರಲ್ಲಿ ಮಡುಗಟ್ಟಿದೆ.
A Kashmiri Pandit was shot dead by terrorists at an apple orchard in Shopian district today. His brother was injured in the firing, police said.This comes about three months after the killing of a Kashmiri Pandit at a government office in Budgam sparked widespread protests by the community. Since then, over 5000 Kashmiri Pandit employees are not attending their duties, fearing targeted attacks. They are demanding relocation to Jammu till the time situation in the Valley improves.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm