ಬ್ರೇಕಿಂಗ್ ನ್ಯೂಸ್
17-08-22 02:12 pm HK News Desk ದೇಶ - ವಿದೇಶ
ಶ್ರೀನಗರ, ಆಗಸ್ಟ್ 17 : ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಛೋಟಿಪುರದಲ್ಲಿ ಕಾಶ್ಮೀರಿ ಪಂಡಿತ ಸಮುದಾಯದ ಸುನೀಲ್ ಕುಮಾರ್ ಅವರನ್ನು ಉಗ್ರರು ಗುಂಡಿಟ್ಟು ಹತ್ಯೆಗೈದ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಜಮ್ಮು-ಕಾಶ್ಮೀರ ಸರ್ಕಾರ ಮುಂದಾಗಿದೆ.
ಕಾಶ್ಮೀರಿ ಪಂಡಿತ ಸುನೀಲ್ ಕುಮಾರ್ ಭಟ್ ಅವರ ಹತ್ಯೆ ಪ್ರಕರಣದಲ್ಲಿ ಶಾಮೀಲಾಗಿರುವ ಉಗ್ರ ಅದಿಲ್ ವಾನಿಯ ಮನೆಯನ್ನು ಜಪ್ತಿ ಮಾಡುವ ಪ್ರಕ್ರಿಯೆಯನ್ನು ಪೊಲೀಸರು ಆರಂಭಿಸಿದ್ದಾರೆ. ಮಂಗಳವಾರ ಶೋಪಿಯಾನ್ ನಲ್ಲಿ ತಮ್ಮ ಸೇಬಿನ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸುನೀಲ್ ಕುಮಾರ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದರು. ಅವರ ಸಹೋದರ ಪಿಂಟು ಕುಮಾರ್ ಘಟನೆಯಲ್ಲಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕಾಶ್ಮೀರಿ ಪಂಡಿತರ ಮೇಲಿನ ದಾಳಿಯನ್ನು ಖಂಡಿಸಿ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಜಮ್ಮು ಕಾಶ್ಮೀರ ಪೊಲೀಸರು ಭಯೋತ್ಪಾದಕ ಅದಿಲ್ ವಾನಿಯ ತಂದೆ ಮತ್ತು ಆತನ ಮೂವರು ಸಹೋದರರನ್ನು ಬಂಧಿಸಿದ್ದಾರೆ.
ಕಾಶ್ಮೀರಿ ಪಂಡಿತರ ಮೇಲೆ ದಾಳಿ ನಡೆಸಿದ ನಂತರ ವಾನಿ ಕುಟಾಪೋರಾ ಪ್ರದೇಶದ ಮನೆಯಲ್ಲಿ ಆಶ್ರಯ ಪಡೆದಿದ್ದ. ಈ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆ ಶೋಧ ಕಾರ್ಯ ನಡೆಸುತ್ತಿದ್ದ ಸಂದರ್ಭದಲ್ಲಿ ವಾನಿ ಭದ್ರತಾ ಪಡೆ ಮೇಲೆ ಗ್ರೆನೇಡ್ ಎಸೆದು ಪರಾರಿಯಾಗಿರುವುದಾಗಿ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಸುದ್ದಿಸಂಸ್ಥೆ ವರದಿ ಮಾಡಿದೆ.
The latest targeted killing of a Kashmir Pandit by militants in south Kashmir’s Shopian district on Tuesday has sparked a fresh wave of fears among the minority community members in the Kashmiri Valley, who feel increasingly scared and insecure. Sunil Kumar Nath, 45, and his brother Pintoo Kumar, 43, were shot at by motor-cycle borne militants when they were working in their orchard in Chotigam village of Shopian. While Nath died on the spot, Kumar is in hospital with critical bullet wounds.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am