ಬ್ರೇಕಿಂಗ್ ನ್ಯೂಸ್
17-08-22 05:30 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 17: ಬಿಜೆಪಿಯ ಉನ್ನತ ಮಟ್ಟದ ನಿರ್ಧಾರಗಳನ್ನು ತೀರ್ಮಾನಿಸುವ ಪಕ್ಷದ ಸಂಸದೀಯ ಮಂಡಳಿಯಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕೈಬಿಡಲಾಗಿದ್ದು, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಸರ್ಬಾನಂದ ಸೋನಾವಾಲ್ ಅವರನ್ನು ಸೇರ್ಪಡೆ ಮಾಡಲಾಗಿದೆ.
ಉಳಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ, ರಾಜನಾಥ್ ಸಿಂಗ್, ಕೆ.ಲಕ್ಷ್ಮಣ್, ಇಕ್ಬಾಲ್ ಸಿಂಗ್ ಲಾಲ್ ಪುರ, ಸುಧಾ ಯಾದವ್, ಸತ್ಯನಾರಾಯಣ್ ಜತಿಯಾ ಮತ್ತು ಪಕ್ಷದ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಈ ಸಮಿತಿಯಲ್ಲಿದ್ದಾರೆ. ಇದೇ ವೇಳೆ, ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿಯ ಪಟ್ಟಿಯನ್ನೂ ಬಿಡುಗಡೆ ಮಾಡಿದ್ದು, ಮಹಾರಾಷ್ಟ್ರದ ಡಿಸಿಎಂ ದೇವೇಂದ್ರ ಫಡ್ನವಿಸ್ ಸ್ಥಾನ ಪಡೆದಿದ್ದಾರೆ.


ಫಡ್ನವಿಸ್ ಮತ್ತು ಕೆ.ಲಕ್ಷ್ಮಣ್ ಅವರನ್ನು ರಾಷ್ಟ್ರ ಮಟ್ಟದಲ್ಲಿ ಗುರುತಿಸಲು ಪಕ್ಷದ ಕೇಂದ್ರ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ. ಫಡ್ನವಿಸ್ ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಏಕನಾಥ ಶಿಂಧೆ ಜೊತೆ ಸೇರಿ ಬಿಜೆಪಿ ಮೈತ್ರಿ ಸರಕಾರ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಓಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿರುವ ಕೆ.ಲಕ್ಷ್ಮಣ್, ತೆಲಂಗಾಣದಲ್ಲಿ ಪಕ್ಷವನ್ನು ಮೇಲೆತ್ತಲು ಶ್ರಮಿಸುತ್ತಿದ್ದಾರೆ. ಈ ಕಾರಣಕ್ಕಾಗಿ ಇವರಿಗೆ ಕೇಂದ್ರ ಸಮಿತಿಯಲ್ಲಿ ಸ್ಥಾನ ಸಿಕ್ಕಿದೆ ಎನ್ನಲಾಗುತ್ತಿದೆ.
![]()
ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ ಅಮಿತ್ ಷಾ, ಯಡಿಯೂರಪ್ಪ ಅವರನ್ನು ಭೇಟಿಯಾಗಿ ಖಾಸಗಿಯಾಗಿ ಮಾತುಕತೆ ನಡೆಸಿದ್ದರು. ಪಕ್ಷದಲ್ಲಿ ಪ್ರಮುಖ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎನ್ನುವ ಇರಾದೆಯನ್ನೂ ಅಮಿತ್ ಷಾ ವ್ಯಕ್ತಪಡಿಸಿದ್ದರು ಎನ್ನಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಪಕ್ಷದ ಪ್ರಮುಖ ಜವಾಬ್ದಾರಿಯನ್ನು ನಿರ್ವಹಿಸುವ ಕೇಂದ್ರ ಮಂಡಳಿಯಲ್ಲಿ ಯಡಿಯೂರಪ್ಪ ಅವರಿಗೆ ಸ್ಥಾನ ನೀಡಿದ್ದಾರೆ. ಸಂಸದೀಯ ಮಂಡಳಿ ಅನ್ನುವುದು ಬಿಜೆಪಿಯ ಪ್ರಮುಖ ಹೊಣೆಗಾರಿಕೆಯನ್ನು ನಿರ್ವಹಿಸುವ ಕಮಿಟಿಯಾಗಿದೆ. ರಾಷ್ಟ್ರೀಯ ನೆಲೆಯಲ್ಲಿ ಪಕ್ಷದ ಯಾವುದೇ ತೀರ್ಮಾನಗಳನ್ನು ಅಂತಿಮವಾಗಿ ತೆಗೆದುಕೊಳ್ಳುವುದು ಈ ಸಮಿತಿ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಸೇರಿ ಹತ್ತು ಮಂದಿ ಕಾರ್ಯಕಾರಿ ಸದಸ್ಯರು ಮೊದಲ ಹಂತದಲ್ಲಿ, ಆನಂತರದ ಸ್ಥಾನದಲ್ಲಿ ಸಂಸದೀಯ ಮಂಡಳಿ ಇರುತ್ತದೆ.
Union Minister Nitin Gadkari and Madhya Pradesh Chief Minister Shivraj Chouhan were dropped from the BJP's highest decision-making body today in an organisational shake-up that saw Devendra Fadnavis and BS Yediyurappa score after recent setbacks.Uttar Pradesh Chief Minister Yogi Adityanath, who led the BJP to an unprecedented second term in the state, is a glaring exclusion after buzz that he would be rewarded with a seat at the decision-making table.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm