ಬ್ರೇಕಿಂಗ್ ನ್ಯೂಸ್
18-08-22 02:33 pm HK News Desk ದೇಶ - ವಿದೇಶ
ಮುಂಬೈ, ಆಗಸ್ಟ್ 18: ದೇಶಾದ್ಯಂತ ತೀವ್ರ ವಿರೋಧ ಹಾಗೂ ಬಾಯ್ಕಾಟ್ ಟ್ರೆಂಡಿಂಗ್ ಆದ ಪರಿಣಾಮ ಆಮಿರ್ ಖಾನ್ ಮತ್ತು ಕರೀನಾ ಕಪೂರ್ ಅಭಿನಯದ ಲಾಲ್ ಸಿಂಗ್ ಚಡ್ಡಾ ಸಿನಿಮಾಕ್ಕೆ ಪ್ರೇಕ್ಷಕರ ನೀರಸ ಪ್ರತಿಕ್ರಿಯೆಯಿಂದ ಬಾಕ್ಸಾಫೀಸ್ ನಲ್ಲಿ ದಯನೀಯ ಸೋಲು ಕಂಡಿದೆ.
ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಿಡುಗಡೆಯಾಗಿ ಒಂದು ವಾರ ಕಳೆದಿದೆ. ಆದರೆ ಬಾಕ್ಸಾಫೀಸ್ ನಲ್ಲಿ 50 ಕೋಟಿ ರೂಪಾಯಿ ಗಳಿಸಲು ವಿಫಲವಾಗಿದೆ. ಪಿಂಕ್ ವಿಲ್ಲಾ ಮಾಹಿತಿ ಪ್ರಕಾರ, ಆಮಿರ್ ಖಾನ್ ಲಾಲ್ ಸಿಂಗ್ ಚಡ್ಡಾ 7ನೇ ದಿನ ಗಳಿಸಿದ್ದು ಕೇವಲ 1.55 ಕೋಟಿ ರೂಪಾಯಿ. ಆಗಸ್ಟ್ 17ರಂದು ಚಿತ್ರದ ಒಟ್ಟು ಕಲೆಕ್ಷನ್ 49.23 ಕೋಟಿ ರೂಪಾಯಿ ಎಂದು ತಿಳಿಸಿದೆ.
ಹಾಲಿವುಡ್ ನ ಕ್ಲಾಸಿಕ್ ಸಿನಿಮಾವಾದ ಫಾರೆಸ್ಟ್ ಗಂಪ್ ನ ರಿಮೇಕ್ ಆಗಿರುವ ಲಾಲ್ ಸಿಂಗ್ ಚಡ್ಡಾ ಚಿತ್ರವನ್ನು ಅದ್ವೈತ್ ಚಂದನ್ ನಿರ್ದೇಶಿಸಿದ್ದು, ಸುಮಾರು 180 ಕೋಟಿ ರೂಪಾಯಿ ಬಜೆಟ್ ನಲ್ಲಿ ಸಿನಿಮಾ ಚಿತ್ರೀಕರಣಗೊಂಡಿತ್ತು.
ಕಳೆದ ಗುರುವಾರ ಬಿಡುಗಡೆಗೊಂಡಿದ್ದ ಲಾಲ್ ಸಿಂಗ್ ಚಡ್ಡಾ ಮೊದಲ ದಿನ 11.70 ಕೋಟಿ ರೂಪಾಯಿ ಗಳಿಕೆ ಕಂಡಿತ್ತು. ಸಿನಿಮಾ ವಾರಾಂತ್ಯದ ರಜೆಯಲ್ಲಿ ಭರ್ಜರಿ ಗಳಿಕೆ ಕಾಣಲಿದೆ ಎಂಬುದು ಚಿತ್ರತಂಡದ ನಿರೀಕ್ಷೆಯಾಗಿತ್ತು. ಆದರೆ Boycott ಲಾಲ್ ಸಿಂಗ್ ಚಡ್ಡಾ ಟ್ರೆಂಡಿಂಗ್, ಕರಿನಾ ಕಪೂರ್ ಹೇಳಿಕೆ ಇದೀಗ ಮುಳುವಾದಂತಾಗಿದೆ.
ಏಳು ದಿನಗಳಲ್ಲಿಯೂ ಲಾಲ್ ಸಿಂಗ್ ಚಡ್ಡಾ ಬಾಕ್ಸಾಫೀಸ್ ನಲ್ಲಿ 50 ಕೋಟಿ ರೂಪಾಯಿ ಗಳಿಸಲು ಹೆಣಗಾಡುವಂತಾಗಿದೆ. ಈ ನಿಟ್ಟಿನಲ್ಲಿ ಆಮಿರ್ ಅವರ ಸಿನಿ ಪಯಣದಲ್ಲಿ ಕಳಪೆ ಪ್ರದರ್ಶನ ಕಂಡ ಕೆಲವು ಸಿನಿಮಾಗಳ ಪಟ್ಟಿಗೆ ಲಾಲ್ ಸಿಂಗ್ ಚಡ್ಡಾ ಕೂಡಾ ಸೇರಿದಂತಾಗಿದೆ ಎಂದು ವರದಿ ತಿಳಿಸಿದೆ.
Aamir Khan and Kareena Kapoor Khan starrer Laal Singh Chaddha, which opened in theatres on August 11, Thursday, has received a rather underwhelming response from the audience. The Hindi remake of Tom Hanks’ Forrest Gump has failed to strike a chord with the masses as its box office collection has been way below expectations.The Advait Chandan directorial faced a boycott trend on social media, which proved to be a major roadblock for the comedy-drama at the ticket windows.
21-08-25 12:58 pm
Bangalore Correspondent
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
21-08-25 12:54 pm
HK News Desk
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
21-08-25 11:57 am
Mangalore Correspondent
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm