ಬ್ರೇಕಿಂಗ್ ನ್ಯೂಸ್
19-08-22 09:41 pm HK News Desk ದೇಶ - ವಿದೇಶ
ಶ್ರೀನಗರ, ಆಗಸ್ಟ್ 19: ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಸಲು ತಯಾರಿ ನಡೆಯುತ್ತಿದ್ದು, ಮತದಾರ ಪಟ್ಟಿಗೆ ನೋಂದಣಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಇದೇ ವೇಳೆ, ಚುನಾವಣಾ ಆಯೋಗದ ಅಧಿಕಾರಿಗಳು ಹೊಸ ಘೋಷಣೆ ಹೊರಡಿಸಿದ್ದು, ಸ್ಥಳೀಯರಲ್ಲದವರಿಗೂ ಮತದಾನದ ಹಕ್ಕನ್ನು ನೀಡುವುದಾಗಿ ತಿಳಿಸಿದ್ದಾರೆ. ವಲಸಿಗ ಕಾರ್ಮಿಕರು, ಬೇರೆ ಬೇರೆ ಕರ್ತವ್ಯಕ್ಕಾಗಿ ಬಂದು ಉಳಿದುಕೊಂಡವರು, ಸೇನಾ ಪಡೆಯ ಯೋಧರು, ಇತರೇ ಉದ್ಯೋಗಸ್ಥರು ಸೇರಿದಂತೆ ಸ್ಥಳೀಯ ನಿವಾಸಿಗಳಲ್ಲದವರಿಗೂ ಮತದಾನದ ಹಕ್ಕನ್ನು ನೀಡಲಾಗಿದೆ.
ಆದರೆ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಹರ್ದೇಶ್ ಕುಮಾರ್ ಮಾಡಿರುವ ಈ ಘೋಷಣೆಗೆ ಜಮ್ಮು ಕಾಶ್ಮೀರದ ರಾಜಕೀಯ ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಅವರ ಪ್ರಕಾರ, ಯಾವುದೇ ಭಾರತದ ನಾಗರಿಕನಿಗೆ ಜಮ್ಮು ಕಾಶ್ಮೀರದಲ್ಲಿ ಮತದ ಹಕ್ಕು ನೀಡಲಾಗುವುದು. ಯಾವುದೇ ಕಡೆಯ ನಿವಾಸಿಯಾದ್ರೂ ಆತ ಉದ್ಯೋಗದ ನಿಮಿತ್ತ ಜಮ್ಮು ಕಾಶ್ಮೀರದಲ್ಲಿ ಉಳಿದುಕೊಂಡಿದ್ದರೆ, ಆತ ಮತ್ತು ಆತನ ಕುಟುಂಬಕ್ಕೆ ಮತದ ಹಕ್ಕನ್ನು ಚಲಾಯಿಸಬಹುದು. ಮತದಾರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಸ್ಥಳೀಯಾಡಳಿತ ಚುನಾವಣೆಯಲ್ಲಿ ಮತ ಚಲಾವಣೆ ಮಾಡಬಹುದು ಎಂದು ಹೇಳಿದ್ದಾರೆ.
ಆದರೆ ಸ್ಥಳೀಯ ನಿವಾಸಿಗಳಲ್ಲದವರಿಗೂ ಮತದ ಹಕ್ಕು ನೀಡುವುದಕ್ಕೆ ಕೆಲವು ರಾಷ್ಟ್ರೀಯ ಪಕ್ಷಗಳು ಸೇರಿದಂತೆ ರಾಜಕೀಯ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಚುನಾವಣಾ ಫಲಿತಾಂಶ ಏರುಪೇರಾಗಲು ಕಾರಣವಾಗುತ್ತದೆ ಎಂದು ಹೇಳಿದ್ದಾರೆ. ಆದರೆ, ಮತದ ಹಕ್ಕು ಅನ್ನುವುದು ಎಲ್ಲಿಗೂ ಸೀಮಿತವಾಗಿಲ್ಲ. ಭಾರತದ ನಾಗರಿಕನಿಗೆ ಎಲ್ಲಿಯೂ ಮತ ಚಲಾಯಿಸಲು ಹಕ್ಕು ಇದೆ. ಮತದಾರ ಪಟ್ಟಿಗೆ ಸೇರ್ಪಡೆ ಆಗಬೇಕಾಗಿದ್ದಲ್ಲಿ ತನ್ನ ಮೂಲ ಮತದಾನ ಪಟ್ಟಿಯಿಂದ ತೆಗೆದು ಹಾಕಿರುವುದನ್ನು ತೋರಿಸಬೇಕಾಗುತ್ತದೆ. ಅದನ್ನು ಪರಿಶೀಲನೆ ಮಾಡಿಕೊಂಡೇ ಮತದಾರ ಪಟ್ಟಿಗೆ ಸೇರಿಸಲಾಗುವುದು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
Jammu and Kashmir's Chief Electoral Officer (CEO) Hirdesh Kumar’s announcement about non-locals, including employees, students, labourers, or anyone from outside who is living ordinarily in Jammu and Kashmir, being able to register their names in the voting list and vote in the J&K elections has created a buzz across states.CEO Hirdesh Kumar had said any Indian citizen, including non-locals living or working in Jammu and Kashmir, can enlist their names on the voting list and cast a vote in the assembly and local body elections in the union territory.
21-08-25 02:03 pm
HK News Desk
Mangalore Electric Auto, High Court: ಮಂಗಳೂರಿನ...
21-08-25 12:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
21-08-25 12:54 pm
HK News Desk
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
21-08-25 03:44 pm
Mangalore Correspondent
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm