ಬ್ರೇಕಿಂಗ್ ನ್ಯೂಸ್
21-08-22 10:36 pm HK News Desk ದೇಶ - ವಿದೇಶ
ಭೋಪಾಲ್,ಆಗಸ್ಟ್ 21: ತಲೆಗೆ ಗಾಯಗೊಂಡು ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗೆ ಮೊರೆನಾ ಜಿಲ್ಲಾಸ್ಪತ್ರೆಗೆ ಬಂದಿದ್ದ ಮಹಿಳೆಯ ಬ್ಯಾಂಡೇಜ್ ತೆರೆದಾಗ ಅಲ್ಲಿದ್ದ ಕಾಂಡೋಮ್ ರ್ಯಾಪರ್ ನೋಡಿದ ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರು ಆಶ್ಚರ್ಯಗೊಂಡಿದ್ದಾರೆ.
ಆಸ್ಪತ್ರೆಗಳಲ್ಲಿ ಅವ್ಯವಸ್ಥೆ:
ಮೊರೆನಾ ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಪ್ರಾಥಮಿಕ, ಉಪ ಆರೋಗ್ಯ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳನ್ನು ಹೊಂದಿರುವ ಸಿವಿಲ್ ಆಸ್ಪತ್ರೆ ಇದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸೇವೆಗಳ ಸ್ಥಿತಿ ಹದಗೆಟ್ಟಿದ್ದು, ಸಾಮಾನ್ಯ ಪ್ರಕರಣಗಳಲ್ಲಿಯೂ ಚಿಕಿತ್ಸೆ ನೀಡದೆ ನೇರವಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗುತ್ತದೆ. ಈ ಮಹಿಳೆಗೂ ಅದೇ ರೀತಿ ಆಗಿದೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಹಿಳೆಯ ತಲೆಗೆ ಹೊಲಿಗೆಗಳನ್ನು ಹಾಕದೆ ಬ್ಯಾಂಡೇಜ್ ಅಷ್ಟೇ ಹಾಕಿ ಜಿಲ್ಲಾಸ್ಪತ್ರೆಗೆ ಹೋಗುವಂತೆ ಹೇಳಿದ್ದಾರೆ.

ಕಾಂಡೋಮ್ ರ್ಯಾಪರ್ ಇಟ್ಟು ಗಾಯಕ್ಕೆ ಬ್ಯಾಂಡೇಜ್
ಮಹಿಳೆ ಆಸ್ಪತ್ರೆಗೆ ಬಂದಾಗ ಬ್ಯಾಂಡೇಜ್ ಸರಿಯಾಗದೆ ರಕ್ತ ಸೋರಿಕೆಯಾಗುತ್ತಿತ್ತು. ಗಾಯ ಸ್ವಚ್ಛಗೊಳಿಸಿ ಹೊಲಿಗೆ ಹಾಕಲು ಜಿಲ್ಲಾಸ್ಪತ್ರೆಯ ವೈದ್ಯರು ಬ್ಯಾಂಡೇಜ್ ತೆಗೆದು ನೋಡಿದಾಗ ಹತ್ತಿ ಇಡಬೇಕಾದಲ್ಲಿ ಕಾಂಡೋಮ್ ರ್ಯಾಪರ್ ಇಟ್ಟು ಬ್ಯಾಂಡೇಜ್ ಮಾಡಿರುವುದು ಬೆಳಕಿಗೆ ಬಂದಿದೆ. ಆದರೆ ಶುಕ್ರವಾರ ರಾತ್ರಿ ನಡೆದ ಈ ಘಟನೆಯನ್ನು ಲಘುವಾಗಿ ಪರಿಗಣಿಸಲಾಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ ಈ ಕುರಿತು ತನಿಖೆ ನಡೆಸುವಂತೆ ಆದೇಶಿಸಿದೆ.
ಕ್ರಮಕ್ಕೆ ಸೂಚನೆ ನೀಡಿದ ಸಿಎಂಎಚ್ಒ:
ಮುಖ್ಯ ವೈದ್ಯಕೀಯ ಮತ್ತು ಆರೋಗ್ಯಾಧಿಕಾರಿ ಡಾ ರಾಕೇಶ್ ಶರ್ಮಾ ಅವರು ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವಂತೆ ಬ್ಲಾಕ್ ವೈದ್ಯಾಧಿಕಾರಿ ಪೊರ್ಸಾ, ಡಾ.ಪುಷ್ಪೇಂದ್ರ ದಂಡೋತಿಯಾ ಅವರಿಗೆ ಸೂಚಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಿಎಂಎಚ್ಒ ಡಾ.ರಾಕೇಶ್ ಶರ್ಮಾ, ಮಹಿಳೆಯ ತಲೆಗೆ ಹತ್ತಿಯ ಬದಲು ಕಾಂಡೋಮ್ ರ್ಯಾಪರ್ ಕಟ್ಟಿರುವುದು ಗಂಭೀರ ವಿಚಾರವಾಗಿದ್ದು, ಈ ರೀತಿ ಬೇಜವಾಬ್ದಾರಿ ತೋರಿದ ಸಿಬ್ಬಂದಿಯನ್ನು ವಜಾ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Poor quality healthcare system, non-availability of hearse or pregnant women being taken to the hospital on cots are frequently reported from different parts of Madhya Pradesh.Now yet another glaring example of medical negligence has come to light, wherein the head wound of a woman was dressed with a condom wrapper.The shocking incident took place in Morena district, where a condom wrapper was used as a temporary bandage to stop bleeding from a head injury sustained by a woman named Reshma Bai.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm