ಬ್ರೇಕಿಂಗ್ ನ್ಯೂಸ್
06-10-20 12:26 pm Headline Karnataka News Network ದೇಶ - ವಿದೇಶ
ವಿಳ್ಳುಪುರಂ, ಅಕ್ಟೋಬರ್ 06: ಕಲ್ಲಕುರಿಚಿ ಶಾಸಕ ತಮ್ಮ ಮನೆಯಲ್ಲಿ ಪ್ರೇಯಸಿಯನ್ನು ವಿವಾಹವಾಗುವ ಮೂಲಕ ಸೋಮವಾರ ವಿವಾದಕ್ಕೀಡಾಗಿದ್ದಾರೆ.
ಪುತ್ರಿಯನ್ನು ಅಪಹರಿಸಲಾಗಿದೆ ಎಂದು ಆಪಾದಿಸಿ ಯುವತಿಯ ತಂದೆ ಶಾಸಕನ ಮನೆ ಮುಂದೆಯೇ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಘಟನೆಯೂ ನಡೆದಿದೆ. ಆ ಬಳಿಕ ನೂತನ ದಂಪತಿ ಮನೆಯಿಂದ ಹೊರಬಂದು "ನಾವು ಪರಸ್ಪರ ಪ್ರೇಮಿಸುತ್ತಿದ್ದೆವು, ಇದೀಗ ಸ್ವ ಇಚ್ಛೆಯಿಂದ ವಿವಾಹ ಬಂಧನಕ್ಕೊಳಗಾಗಿದ್ದೇವೆ" ಎಂದು ತಿಳಿಸಿದರು.

ತಿಯಾಗದುರುಗಂ ನಿವಾಸಿ, ಕಲ್ಲಕುರಿಚಿ ಕ್ಷೇತ್ರವನ್ನು ಪ್ರತಿನಿಧಿಸುವ ಎಐಎಡಿಎಂ ಶಾಸಕ ಎ. ಪ್ರಭು (35), ಅದೇ ಪಟ್ಟಣದ ಸೌಂದರ್ಯ (19) ಎಂಬಾಕೆಯನ್ನು ಸೋಮವಾರ ಮುಂಜಾನೆ ಮನೆಯಲ್ಲೇ ವಿವಾಹವಾದರು. ಈ ವಿಚಾರ ತಿಳಿದ ಯುವತಿಯ ತಂದೆ ಸಾಮಿನಾಥನ್ (48) ಶಾಸಕರ ಮನೆಗೆ ಧಾವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಅವರನ್ನು ತಡೆದಿದ್ದರು. ಬಳಿಕ ಸಾಮಿನಾಥನ್ ಅವರನ್ನು ಬಂಧಿಸಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 309ರ ಅನ್ವಯ ಆತ್ಮಹತ್ಯೆಗೆ ಪ್ರಯತ್ನಿಸಿದ ಪ್ರಕರಣ ದಾಖಲಿಸಲಾಗಿದೆ.
ಇದಕ್ಕೂ ಮುನ್ನ ರವಿವಾರ ಸಂಜೆ ಸಾಮಿನಾಥನ್ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ, ತಿರುಚಂಗೋಡಿನ ಖಾಸಗಿ ಕಲಾ ಕಾಲೇಜಿನಲ್ಲಿ ಎರಡನೇ ವರ್ಷದ ಪದವಿ ವಿದ್ಯಾರ್ಥಿನಿಯಾಗಿರುವ ತಮ್ಮ ಹಿರಿಯ ಮಗಳನ್ನು ಶಾಸಕ ಪ್ರಭು ಅಪಹರಿಸಿದ್ದಾರೆ ಎಂದು ಆಪಾದಿಸಿದ್ದರು. ಈ ವಿಚಾರವನ್ನು ಪೊಲೀಸರ ಗಮನಕ್ಕೆ ತಾರದಂತೆ ಪ್ರಭು ಬೆಂಬಗಲಿಗರು ದೂರವಾಣಿ ಮೂಲಕ ಬೆದರಿಕೆ ಒಡ್ಡಿದ್ದಾರೆ ಎಂದು ಅವರು ದೂರಿದ್ದರು.
ಕಳೆದ ನಾಲ್ಕು ವರ್ಷಗಳಿಂದ ತಮ್ಮ ನಡುವೆ ಪ್ರೇಮಸಂಬಂಧ ಇತ್ತು ಎಂದು ನೂತನ ದಂಪತಿ ಬಿಡುಗಡೆ ಮಾಡಿರುವ ವೀಡಿಯೊದಲ್ಲಿ ದೃಢಪಡಿಸಿದ್ದಾರೆ. ಸೌಂದರ್ಯ ವಿವಾಹದ ಬಗ್ಗೆ ಪೋಷಕರ ಜತೆ ಮಾತುಕತೆ ನಡೆಸಿದ್ದಾಗಿ ಪ್ರಭು ಹೇಳಿಕೊಂಡಿದ್ದಾರೆ. ಇದಕ್ಕೆ ಅವರು ಒಪ್ಪದಿದ್ದಾಗ ಸೌಂದರ್ಯ ಮನೆ ಬಿಟ್ಟು ಬಂದಿದ್ದಾಗಿ ಅವರು ಹೇಳಿದ್ದಾರೆ.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm