ಬ್ರೇಕಿಂಗ್ ನ್ಯೂಸ್
06-10-20 12:26 pm Headline Karnataka News Network ದೇಶ - ವಿದೇಶ
ವಿಳ್ಳುಪುರಂ, ಅಕ್ಟೋಬರ್ 06: ಕಲ್ಲಕುರಿಚಿ ಶಾಸಕ ತಮ್ಮ ಮನೆಯಲ್ಲಿ ಪ್ರೇಯಸಿಯನ್ನು ವಿವಾಹವಾಗುವ ಮೂಲಕ ಸೋಮವಾರ ವಿವಾದಕ್ಕೀಡಾಗಿದ್ದಾರೆ.
ಪುತ್ರಿಯನ್ನು ಅಪಹರಿಸಲಾಗಿದೆ ಎಂದು ಆಪಾದಿಸಿ ಯುವತಿಯ ತಂದೆ ಶಾಸಕನ ಮನೆ ಮುಂದೆಯೇ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಘಟನೆಯೂ ನಡೆದಿದೆ. ಆ ಬಳಿಕ ನೂತನ ದಂಪತಿ ಮನೆಯಿಂದ ಹೊರಬಂದು "ನಾವು ಪರಸ್ಪರ ಪ್ರೇಮಿಸುತ್ತಿದ್ದೆವು, ಇದೀಗ ಸ್ವ ಇಚ್ಛೆಯಿಂದ ವಿವಾಹ ಬಂಧನಕ್ಕೊಳಗಾಗಿದ್ದೇವೆ" ಎಂದು ತಿಳಿಸಿದರು.
ತಿಯಾಗದುರುಗಂ ನಿವಾಸಿ, ಕಲ್ಲಕುರಿಚಿ ಕ್ಷೇತ್ರವನ್ನು ಪ್ರತಿನಿಧಿಸುವ ಎಐಎಡಿಎಂ ಶಾಸಕ ಎ. ಪ್ರಭು (35), ಅದೇ ಪಟ್ಟಣದ ಸೌಂದರ್ಯ (19) ಎಂಬಾಕೆಯನ್ನು ಸೋಮವಾರ ಮುಂಜಾನೆ ಮನೆಯಲ್ಲೇ ವಿವಾಹವಾದರು. ಈ ವಿಚಾರ ತಿಳಿದ ಯುವತಿಯ ತಂದೆ ಸಾಮಿನಾಥನ್ (48) ಶಾಸಕರ ಮನೆಗೆ ಧಾವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಅವರನ್ನು ತಡೆದಿದ್ದರು. ಬಳಿಕ ಸಾಮಿನಾಥನ್ ಅವರನ್ನು ಬಂಧಿಸಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 309ರ ಅನ್ವಯ ಆತ್ಮಹತ್ಯೆಗೆ ಪ್ರಯತ್ನಿಸಿದ ಪ್ರಕರಣ ದಾಖಲಿಸಲಾಗಿದೆ.
ಇದಕ್ಕೂ ಮುನ್ನ ರವಿವಾರ ಸಂಜೆ ಸಾಮಿನಾಥನ್ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ, ತಿರುಚಂಗೋಡಿನ ಖಾಸಗಿ ಕಲಾ ಕಾಲೇಜಿನಲ್ಲಿ ಎರಡನೇ ವರ್ಷದ ಪದವಿ ವಿದ್ಯಾರ್ಥಿನಿಯಾಗಿರುವ ತಮ್ಮ ಹಿರಿಯ ಮಗಳನ್ನು ಶಾಸಕ ಪ್ರಭು ಅಪಹರಿಸಿದ್ದಾರೆ ಎಂದು ಆಪಾದಿಸಿದ್ದರು. ಈ ವಿಚಾರವನ್ನು ಪೊಲೀಸರ ಗಮನಕ್ಕೆ ತಾರದಂತೆ ಪ್ರಭು ಬೆಂಬಗಲಿಗರು ದೂರವಾಣಿ ಮೂಲಕ ಬೆದರಿಕೆ ಒಡ್ಡಿದ್ದಾರೆ ಎಂದು ಅವರು ದೂರಿದ್ದರು.
ಕಳೆದ ನಾಲ್ಕು ವರ್ಷಗಳಿಂದ ತಮ್ಮ ನಡುವೆ ಪ್ರೇಮಸಂಬಂಧ ಇತ್ತು ಎಂದು ನೂತನ ದಂಪತಿ ಬಿಡುಗಡೆ ಮಾಡಿರುವ ವೀಡಿಯೊದಲ್ಲಿ ದೃಢಪಡಿಸಿದ್ದಾರೆ. ಸೌಂದರ್ಯ ವಿವಾಹದ ಬಗ್ಗೆ ಪೋಷಕರ ಜತೆ ಮಾತುಕತೆ ನಡೆಸಿದ್ದಾಗಿ ಪ್ರಭು ಹೇಳಿಕೊಂಡಿದ್ದಾರೆ. ಇದಕ್ಕೆ ಅವರು ಒಪ್ಪದಿದ್ದಾಗ ಸೌಂದರ್ಯ ಮನೆ ಬಿಟ್ಟು ಬಂದಿದ್ದಾಗಿ ಅವರು ಹೇಳಿದ್ದಾರೆ.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 06:59 pm
HK News Desk
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
05-08-25 08:22 pm
Mangalore Correspondent
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm