ಬ್ರೇಕಿಂಗ್ ನ್ಯೂಸ್
06-10-20 12:26 pm Headline Karnataka News Network ದೇಶ - ವಿದೇಶ
ವಿಳ್ಳುಪುರಂ, ಅಕ್ಟೋಬರ್ 06: ಕಲ್ಲಕುರಿಚಿ ಶಾಸಕ ತಮ್ಮ ಮನೆಯಲ್ಲಿ ಪ್ರೇಯಸಿಯನ್ನು ವಿವಾಹವಾಗುವ ಮೂಲಕ ಸೋಮವಾರ ವಿವಾದಕ್ಕೀಡಾಗಿದ್ದಾರೆ.
ಪುತ್ರಿಯನ್ನು ಅಪಹರಿಸಲಾಗಿದೆ ಎಂದು ಆಪಾದಿಸಿ ಯುವತಿಯ ತಂದೆ ಶಾಸಕನ ಮನೆ ಮುಂದೆಯೇ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಘಟನೆಯೂ ನಡೆದಿದೆ. ಆ ಬಳಿಕ ನೂತನ ದಂಪತಿ ಮನೆಯಿಂದ ಹೊರಬಂದು "ನಾವು ಪರಸ್ಪರ ಪ್ರೇಮಿಸುತ್ತಿದ್ದೆವು, ಇದೀಗ ಸ್ವ ಇಚ್ಛೆಯಿಂದ ವಿವಾಹ ಬಂಧನಕ್ಕೊಳಗಾಗಿದ್ದೇವೆ" ಎಂದು ತಿಳಿಸಿದರು.

ತಿಯಾಗದುರುಗಂ ನಿವಾಸಿ, ಕಲ್ಲಕುರಿಚಿ ಕ್ಷೇತ್ರವನ್ನು ಪ್ರತಿನಿಧಿಸುವ ಎಐಎಡಿಎಂ ಶಾಸಕ ಎ. ಪ್ರಭು (35), ಅದೇ ಪಟ್ಟಣದ ಸೌಂದರ್ಯ (19) ಎಂಬಾಕೆಯನ್ನು ಸೋಮವಾರ ಮುಂಜಾನೆ ಮನೆಯಲ್ಲೇ ವಿವಾಹವಾದರು. ಈ ವಿಚಾರ ತಿಳಿದ ಯುವತಿಯ ತಂದೆ ಸಾಮಿನಾಥನ್ (48) ಶಾಸಕರ ಮನೆಗೆ ಧಾವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಅವರನ್ನು ತಡೆದಿದ್ದರು. ಬಳಿಕ ಸಾಮಿನಾಥನ್ ಅವರನ್ನು ಬಂಧಿಸಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 309ರ ಅನ್ವಯ ಆತ್ಮಹತ್ಯೆಗೆ ಪ್ರಯತ್ನಿಸಿದ ಪ್ರಕರಣ ದಾಖಲಿಸಲಾಗಿದೆ.
ಇದಕ್ಕೂ ಮುನ್ನ ರವಿವಾರ ಸಂಜೆ ಸಾಮಿನಾಥನ್ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ, ತಿರುಚಂಗೋಡಿನ ಖಾಸಗಿ ಕಲಾ ಕಾಲೇಜಿನಲ್ಲಿ ಎರಡನೇ ವರ್ಷದ ಪದವಿ ವಿದ್ಯಾರ್ಥಿನಿಯಾಗಿರುವ ತಮ್ಮ ಹಿರಿಯ ಮಗಳನ್ನು ಶಾಸಕ ಪ್ರಭು ಅಪಹರಿಸಿದ್ದಾರೆ ಎಂದು ಆಪಾದಿಸಿದ್ದರು. ಈ ವಿಚಾರವನ್ನು ಪೊಲೀಸರ ಗಮನಕ್ಕೆ ತಾರದಂತೆ ಪ್ರಭು ಬೆಂಬಗಲಿಗರು ದೂರವಾಣಿ ಮೂಲಕ ಬೆದರಿಕೆ ಒಡ್ಡಿದ್ದಾರೆ ಎಂದು ಅವರು ದೂರಿದ್ದರು.
ಕಳೆದ ನಾಲ್ಕು ವರ್ಷಗಳಿಂದ ತಮ್ಮ ನಡುವೆ ಪ್ರೇಮಸಂಬಂಧ ಇತ್ತು ಎಂದು ನೂತನ ದಂಪತಿ ಬಿಡುಗಡೆ ಮಾಡಿರುವ ವೀಡಿಯೊದಲ್ಲಿ ದೃಢಪಡಿಸಿದ್ದಾರೆ. ಸೌಂದರ್ಯ ವಿವಾಹದ ಬಗ್ಗೆ ಪೋಷಕರ ಜತೆ ಮಾತುಕತೆ ನಡೆಸಿದ್ದಾಗಿ ಪ್ರಭು ಹೇಳಿಕೊಂಡಿದ್ದಾರೆ. ಇದಕ್ಕೆ ಅವರು ಒಪ್ಪದಿದ್ದಾಗ ಸೌಂದರ್ಯ ಮನೆ ಬಿಟ್ಟು ಬಂದಿದ್ದಾಗಿ ಅವರು ಹೇಳಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm