ಬ್ರೇಕಿಂಗ್ ನ್ಯೂಸ್
26-08-22 03:36 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 26: ಕಾಂಗ್ರೆಸ್ ನಾಯಕತ್ವದ ವಿರುದ್ಧ ಮುನಿಸಿಕೊಂಡಿದ್ದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಕೊನೆಗೂ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ. ರಾಹುಲ್ ಗಾಂಧಿಯನ್ನು ಅಪ್ರಬುದ್ಧ ಎಂದು ಜರೆದಿರುವ ಆಜಾದ್ ಅವರು, ಸೋನಿಯಾ ಗಾಂಧಿಗೆ ಬರೆದ ರಾಜಿನಾಮೆ ಪತ್ರದಲ್ಲಿ ಅನುಭವ ರಹಿತರಿಗೆ ಪಕ್ಷದಲ್ಲಿ ಆದ್ಯತೆ ಕೊಟ್ಟಿರುವುದನ್ನು ಟೀಕಿಸಿದ್ದಾರೆ. ತಾನು ಪಕ್ಷದಿಂದ ಹೊರ ನಡೆಯುತ್ತಿರುವುದಕ್ಕೆ ಇದೇ ಕಾರಣ ಎಂದು ಉಲ್ಲೇಖಿಸಿದ್ದಾರೆ.
ಇತ್ತೀಚೆಗೆ ಆಗಸ್ಟ್ 16ರಂದು ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಮುಖ್ಯಸ್ಥನಾಗಿ ತಮ್ಮನ್ನು ನೇಮಿಸಿದ್ದನ್ನು ಗುಲಾಂ ನಬಿ ನಿರಾಕರಿಸಿದ್ದರು. ಇದರ ಬೆನ್ನಲ್ಲೇ ರಾಜಿನಾಮೆ ಪತ್ರ ಬರೆದಿದ್ದು, ರಾಹುಲ್ ಗಾಂಧಿಯನ್ನು ಅಪ್ರಬುದ್ಧ. ರಾಹುಲ್ ಕಾರಣದಿಂದಾಗಿಯೇ ಪ್ರತಿ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸ್ಥಿತಿಗೆ ತಲುಪುತ್ತಿದೆ ಎಂದು ಟೀಕಿಸಿದ್ದಾರೆ. ಸರಕಾರದ ಸುಗ್ರೀವಾಜ್ಞೆಯನ್ನು ಮಾಧ್ಯಮಗಳ ಮುಂದೆ ಹರಿದು ಹಾಕಿದ್ದು ರಾಹುಲ್ ಗಾಂಧಿಯ ಅಪ್ರಬುದ್ಧ ಮತ್ತು ಬಾಲಿಶಃ ನಡೆಯನ್ನು ತೋರಿಸುತ್ತದೆ. ತಮ್ಮ ಬಾಲಿಶ ವರ್ತನೆಗಳೇ ಕಾಂಗ್ರೆಸ್ ನೆಲಕಚ್ಚಲು ಕಾರಣವಾಗುತ್ತಿವೆ. 2014ರ ನಂತರ ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಾಣುತ್ತಿರುವುದು, ಅಸೆಂಬ್ಲಿ ಚುನಾವಣೆಯಲ್ಲೂ ಹಿನ್ನಡೆ ಅನುಭವಿಸುತ್ತಿರುವುದಕ್ಕೆ ಈ ರೀತಿಯ ವರ್ತನೆಗಳೇ ಕಾರಣ ಎಂದು ದೂರಿದ್ದಾರೆ.
ರಿಮೋಟ್ ಕಂಟ್ರೋಲ್ ಮೋಡೆಲ್ ನಡೆಯೇ ಯುಪಿಎ ಒಕ್ಕೂಟವನ್ನು ಹಾಳು ಮಾಡಿತ್ತು. ಈಗ ಭಾರತೀಯ ರಾಷ್ಟ್ರೀಯ ಕಾಂಗ್ರೆಸನ್ನೂ ಅದೇ ನಡೆಗಳು ಹಾಳು ಮಾಡುತ್ತಿವೆ. ಎಲ್ಲ ನಿರ್ಧಾರಗಳನ್ನು ಒಂದೋ ರಾಹುಲ್ ಗಾಂಧಿ ಅಥವಾ ಆತನ ಹಿಂಬಾಲಕರು, ಸೆಕ್ಯುರಿಟಿ ಗಾರ್ಡ್, ಪಿಎಗಳು ತೆಗೆದುಕೊಳ್ಳುತ್ತಿದ್ದಾರೆ. ಸೋನಿಯಾ ಗಾಂಧಿ ಕೇವಲ ನಾಮಕೇವಾಸ್ತೆ ಇದ್ದಾರೆ ಎಂದು ಆಜಾದ್ ಟೀಕಿಸಿದ್ದಾರೆ.
ಒಂದು ವರ್ಷದ ಹಿಂದೆ ಕಾಂಗ್ರೆಸ್ ನಾಯಕತ್ವದ ಬಗ್ಗೆ ಬಹಿರಂಗ ಅಸಮಾಧಾನ ಹೊರಹಾಕಿದ್ದ 23 ಮಂದಿ ರಾಷ್ಟ್ರೀಯ ನಾಯಕರಲ್ಲಿ ಗುಲಾಂ ನಬಿ ಕೂಡ ಒಬ್ಬರು. ಇನ್ನೊಬ್ಬ ಕಪಿಲ್ ಸಿಬಲ್ ಇತ್ತೀಚೆಗಷ್ಟೇ ರಾಜ್ಯಸಭೆ ಚುನಾವಣೆ ಸಂದರ್ಭ ಸದ್ದಿಲ್ಲದೇ ಪಕ್ಷದಿಂದ ಹೊರ ನಡೆದು ಬಿಎಸ್ಪಿ ಬೆಂಬಲದಲ್ಲಿ ಮತ್ತೆ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಇದೀಗ ಗುಲಾಂ ನಬಿ ಕಾಲು ಹೊರಗಿಟ್ಟಿದ್ದು, ಜಮ್ಮು ಕಾಶ್ಮೀರದಲ್ಲಿ ಬಿಜೆಪಿಯನ್ನು ಬಲಪಡಿಸಲು ಮುಂದಾಗುತ್ತಾರೆಯೇ ಅನ್ನುವ ಕುತೂಹಲ ಇದೆ, ಯಾಕಂದ್ರೆ ಗುಲಾಂ ನಬಿ ಅವರಿಗೆ ಪ್ರಧಾನಿ ಮೋದಿ ಜೊತೆ ಹತ್ತಿರದ ಸಂಬಂಧ ಇದೆ.
In a fresh jolt to the Congress, senior leader Ghulam Nabi Azad resigned from the party with sharp jabs at the Gandhis and the organisational leadership.In a letter addressed to Congress president Sonia Gandhi, Azad cited the sidelining of senior leaders and the increasing sway of a "coterie of inexperienced sycophants" as the reasons behind his exit from the party.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
12-10-25 06:53 pm
Mangalore Correspondent
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
ಅಫ್ಘಾನ್ ಸಚಿವನಿಂದ ಭಾರತದಲ್ಲಿ ಮಹಿಳೆಯರಿಗೆ ಅವಮಾನ ;...
12-10-25 05:02 pm
Girish Mattannavar Mocks Dr. Mahabala Shetty:...
11-10-25 10:24 pm
Malayalam actor Jayakrishnan Arrest, Mangalor...
11-10-25 07:18 pm
12-10-25 03:52 pm
Mangalore Correspondent
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm