ಬ್ರೇಕಿಂಗ್ ನ್ಯೂಸ್
31-08-22 08:06 pm HK News Desk ದೇಶ - ವಿದೇಶ
ನವದೆಹಲಿ, ಆ 31: ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತಾಯಿ ವಿಧಿವಶರಾದರು. ಇಟಲಿಯಲ್ಲಿನ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಸೋನಿಯಾ ಗಾಂಧಿ ತಾಯಿ, ಸಂಸದ ರಾಹುಲ್ ಗಾಂಧಿ ಅಜ್ಜಿ ಪಾವೊಲಾ ಮೈನೋ ಆಗಸ್ಟ್ 27ರಂದು ನಿಧನರಾಗಿದ್ದಾರೆ. ಮಂಗಳವಾರ ಅಂತ್ಯಕ್ರಿಯೆ ನಡೆದಿದೆ.ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಸಂವಹನ ವಿಭಾಗದ ಉಸ್ತುವಾರಿ ಜೈರಾಮ್ ರಮೇಶ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ವೈದ್ಯಕೀಯ ಪರೀಕ್ಷೆಗಾಗಿ ಸೋನಿಯಾ ಗಾಂಧಿ ವಿದೇಶಕ್ಕೆ ತೆರಳಿದ್ದು, ರಾಹುಲ್ ಗಾಂಧಿ ಸಹ ಅವರ ಜೊತೆ ಇದ್ದಾರೆ.

ತಮ್ಮ ಟ್ವೀಟ್ನಲ್ಲಿ ಜೈರಾಮ್ ರಮೇಶ್, 'ಶ್ರೀಮತಿ ಸೋನಿಯಾ ಗಾಂಧಿಯವರ ತಾಯಿ, ಶ್ರೀಮತಿ ಪಾವೊಲಾ ಮೈನೋ ಅವರು 27 ಆಗಸ್ಟ್ 2022 ರಂದು ಶನಿವಾರ ಇಟಲಿಯಲ್ಲಿ ತಮ್ಮ ಮನೆಯಲ್ಲಿ ನಿಧನರಾದರು. ಅಂತ್ಯಕ್ರಿಯೆ ನಿನ್ನೆ ನಡೆಯಿತು' ಎಂದು ಮಾಹಿತಿ ನೀಡಿದ್ದಾರೆ.

ವಿದೇಶದಲ್ಲಿರುವ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಎಂದು ನವದೆಹಲಿಗೆ ವಾಪಸ್ ಆಗಲಿದ್ದಾರೆ? ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ ದೆಹಲಿಯಲ್ಲಿ ಸೆಪ್ಟೆಂಬರ್ 4ರಂದು ನಡೆಯಲಿರುವ 'ಮೆಹೆಂಗೈ ಪರ್ ಹಲ್ಲಾ ಬೋಲ್' ಜಾಥಾ ಉದ್ದೇಶಿಸಿ ಅವರು ಮಾತನಾಡಲಿದ್ದಾರೆ ಎಂಬ ಮಾಹಿತಿ ಇದೆ.
ಭಾನುವಾರ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಬಗ್ಗೆ ಚರ್ಚಿಸಲು ಸಭೆ ನಡೆದಿತ್ತು. ಸೋನಿಯಾ ಗಾಂಧಿ ವಿದೇಶದಿಂದಲೇ ಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು. ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಅಗತ್ಯವಿದ್ದರೆ ಅಕ್ಟೋಬರ್ 19ರಂದು ಮತ ಎಣಿಕೆ ನಡೆಯಲಿದೆ.
ಕಾಂಗ್ರೆಸ್ ಪಕ್ಷ ಕಾಶ್ಮೀರದಿಂದ ಕನ್ಯಾಕುಮಾರಿ ತನಕ 'ಭಾರತ್ ಜೋಡೋ' ಯಾತ್ರೆಗೆ ತಯಾರಿ ನಡೆಸಿದೆ. ಸೆಪ್ಟೆಂಬರ್ 7ರಂದು ಈ ಯಾತ್ರೆಗೆ ಚಾಲನೆ ಸಿಗಲಿದೆ. 3500 ಕಿ. ಮೀ.ಗಳ ದೊಡ್ಡ ಪಾದಯಾತ್ರೆ ಇದಾಗಿದೆ. ಸುಮಾರು 150 ದಿನಗಳ ಕಾಲ ನಡೆಯುವ ಬೃಹತ್ ಪಾದಯಾತ್ರೆ ನಡೆಯಲಿದೆ.
Congress president Sonia Gandhi’s mother, Paola Maino, died on August 27 and her funeral was held on Tuesday. Sonia Gandhi had left last week to meet her mother. This was part of her trip abroad for medical check-ups, where her son Rahul Gandhi and daughter Priyanka Gandhi Vadra went with her.Jairam Ramesh, Congress general secretary of communications, has tweeted the news of the death of Sonia Gandhi’s mother.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm