ಬ್ರೇಕಿಂಗ್ ನ್ಯೂಸ್
01-09-22 12:31 pm HK News Desk ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 1: ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರ 91.5 ರೂಪಾಯಿ ಇಳಿದಿದೆ. ಈ ಹಿಂದೆ 1,976 ರೂ. ಇದ್ದ ಸಿಲಿಂಡರ್ ಬೆಲೆ ಈಗ 1,885 ಕ್ಕೆ ಲಭ್ಯವಿದೆ.
ಸೆಪ್ಟೆಂಬರ್ 1 ರಂದು ಇಂಡಿಯನ್ ಆಯಿಲ್ ಬಿಡುಗಡೆ ಮಾಡಿರುವ ಬೆಲೆಯ ಪ್ರಕಾರ, ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ ಇಳಿಕೆ ಮಾಡಲಾಗಿದೆ. ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.
ಮೇ ತಿಂಗಳಲ್ಲಿ 19 ಕೆಜಿ ಸಿಲಿಂಡರ್ನ ಬೆಲೆ ಸಾರ್ವಕಾಲಿಕ ಗರಿಷ್ಠ 2,354 ರೂ.ಗೆ ತಲುಪಿತ್ತು. ಆದರೆ ಈಗ ದೆಹಲಿಯಲ್ಲಿ 1,885 ರೂ. ಕೋಲ್ಕತ್ತಾ, ಮುಂಬೈ ಮತ್ತು ಚೆನ್ನೈ ಪ್ರಮುಖ ನಗರಗಳಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಕುಸಿದಿದೆ.
ಕೋಲ್ಕತ್ತಾದಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 2,095 ರೂ.ನಿಂದ 1,995 ರೂ.ಗೆ ಇಳಿಕೆಯಾಗಿದೆ. ಅದೇ ರೀತಿ ಮುಂಬೈನಲ್ಲಿ 1,936 ರೂ. ಬದಲಿಗೆ 1,844 ರೂ., ಮತ್ತು ಚೆನ್ನೈನಲ್ಲಿ 2,141 ರೂ. ಬದಲಿಗೆ 2,045 ರೂ., ದೆಹಲಿಯಲ್ಲಿ 14.2 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆ 1053 ರೂ. ಇದೆ. ಆದರೆ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಬದಲಾಗಿಲ್ಲ.
ವಾಣಿಜ್ಯ ಅನಿಲ ಸಿಲಿಂಡರ್ಗಳ ಬೆಲೆ ಸತತ ಐದು ತಿಂಗಳಿಂದ ಕಡಿಮೆಯಾಗಿದೆ. ಮೇ 19, 2022 ರಂದು ಗರಿಷ್ಠ 2,354 ರೂ.ಗೆ ತಲುಪಿದ್ದ ಗ್ಯಾಸ್ ಸಿಲಿಂಡರ್ ಬೆಲೆ ಜೂನ್ 1 ರಂದು 2,219 ರೂ.ಗಳಷ್ಟಾಗಿತ್ತು. ಒಂದು ತಿಂಗಳ ನಂತರ ಸಿಲಿಂಡರ್ ಬೆಲೆ 98 ರೂ.ನಷ್ಟು ಕುಸಿದು 2,021 ರೂ.ಗೆ ಇಳಿದಿತ್ತು. ಈ ಸಿಲಿಂಡರ್ ಬೆಲೆಯನ್ನು ತೈಲ ಕಂಪನಿಗಳು ಜುಲೈ 6 ರಂದು 2,012 ರೂ.ಗೆ ಇಳಿಸಿವೆ. ಆಗಸ್ಟ್ನಿಂದ ಸಿಲಿಂಡರ್ ಬೆಲೆ 1976 ರೂ. ಇತ್ತು.
ಪ್ರತಿ ತಿಂಗಳ ಮೊದಲ ದಿನದಂದು ಕೆಲವು ಹೊಸ ಮತ್ತು ಕೆಲವು ಪರಿಷ್ಕೃತ ನಿಯಮಗಳು ಜಾರಿಗೆ ಬರುತ್ತವೆ. ಇವುಗಳಲ್ಲಿ ಎಲ್ಪಿಜಿ ಮತ್ತು ಇಂಧನ ದರಗಳಲ್ಲಿ ಪರಿಷ್ಕರಣೆಯೂ ಒಳಗೊಂಡಿದ್ದು, ಇದೀಗ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರವನ್ನು ಇಳಿಕೆ ಮಾಡಲಾಗಿದೆ.
Oil marketing companies have reduced the price per unit of commercial LPG cylinders by ₹ 91.50 with immediate effect. With this latest price revision, a 19 kg commercial LPG cylinder will cost ₹ 1,885 instead of ₹ 1,976 in Delhi.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm