ಬ್ರೇಕಿಂಗ್ ನ್ಯೂಸ್
04-09-22 06:28 pm HK News Desk ದೇಶ - ವಿದೇಶ
ಮುಂಬೈ, ಸೆ.4: ಟಾಟಾ ಸಮೂಹ ಸಂಸ್ಥೆಯಲ್ಲಿ ಚೇರ್ಮನ್ ಆಗಿ ಆಡಳಿತ ಕಮಿಟಿ ಸದಸ್ಯರಿಂದಲೇ ಉಚ್ಛಾಟನೆಗೊಂಡಿದ್ದ ಹೆಸರಾಂತ ಉದ್ಯಮಿ ಸೈರಸ್ ಮಿಸ್ತ್ರಿ (54) ಮುಂಬೈ ಬಳಿಯ ಪಾಲ್ಘಾರ್ ಜಿಲ್ಲೆಯಲ್ಲಿ ರಸ್ತೆ ಅಪಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.
ಸೈರಸ್ ಮಿಸ್ತ್ರಿಯವರು ಗುಜರಾತಿನ ಅಹ್ಮದಾಬಾದ್ ನಿಂದ ಮುಂಬೈಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿ ಸೈರಸ್ ಅವರಲ್ಲದೆ ಇತರ ನಾಲ್ವರಿದ್ದರು. ಪಾಲ್ಘಾರ್ ಜಿಲ್ಲೆಯಲ್ಲಿ ಬರುತ್ತಿದ್ದಾಗ ಕಾರು ಡಿವೈಡರ್ ಡಿಕ್ಕಿಯಾಗಿ ಪಲ್ಟಿಯಾಗಿದ್ದು ಸೈರಸ್ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವು ಕಂಡಿದ್ದಾರೆ.

ಸೈರಸ್ ಮಿಸ್ತ್ರಿಯವರು ಪ್ರತಿಷ್ಠಿತ ಶಪೂರ್ ಜೀ ಪಲ್ಲೊಂಜಿ ಮಿಸ್ತ್ರಿ ಕುಟುಂಬದವರು. ಸ್ವಾತಂತ್ರ್ಯಕ್ಕೂ ಮೊದಲೇ ಇವರ ಕುಟುಂಬ ನಿರ್ಮಾಣ ಚಟುವಟಿಕೆಯಲ್ಲಿ ನಿರತವಾಗಿತ್ತು. 1930ರಲ್ಲೇ ಟಾಟಾ ಸನ್ಸ್ ಕಂಪನಿಯಲ್ಲಿ ಶಪೂರ್ ಜೀ ಮಿಸ್ತ್ರಿ ಪಾಲುದಾರಿಕೆ ಹೊಂದಿದ್ದರು. ಪಲ್ಲೊಂಜಿ ಮಿಸ್ತ್ರಿಯವರ ಪುತ್ರರಾಗಿದ್ದ ಸೈರಸ್ ಮಿಸ್ತ್ರಿ ಕುಟುಂಬದಿಂದ ಬಂದ ಕಂಪನಿಯನ್ನು ಮುನ್ನಡೆಸುತ್ತಿದ್ದರು. 2018ರ ವೇಳೆಗೆ, ಸೈರಸ್ ಮಿಸ್ತ್ರಿ ಕಂಪನಿಯ ಆಸ್ತಿ ಮೌಲ್ಯ ಹತ್ತು ಬಿಲಿಯನ್ ಡಾಲರ್ ಆಗಿತ್ತು.

ಮಿಸ್ತ್ರಿ ಮತ್ತು ಟಾಟಾ ಕುಟುಂಬಸ್ಥರ ಸುದೀರ್ಘ ಮೈತ್ರಿಯ ಕಾರಣದಿಂದ 2012ರಲ್ಲಿ ಸೈರಸ್ ಮಿಸ್ತ್ರಿ ಅವರನ್ನು ಟಾಟಾ ಸಮೂಹ ಸಂಸ್ಥೆಗಳ ಚೇರ್ಮನ್ ಮಾಡಲಾಗಿತ್ತು. ಟಾಟಾ ಕಂಪನಿಯ ಆರನೇ ಅಧ್ಯಕ್ಷರಾಗಿ ನೇಮಕ ಆಗಿದ್ದರು. ಆದರೆ ಟಾಟಾ ಕುಟುಂಬಕ್ಕೂ ಸೈರಸ್ ಮಿಸ್ತ್ರಿಗೂ ಸರಿ ಹೋಗಿರಲಿಲ್ಲ. ಹೀಗಾಗಿ ಮಿಸ್ತ್ರಿ ಅವರನ್ನು ಸ್ವಯಂ ಆಗಿ ಅಧ್ಯಕ್ಷ ಹುದ್ದೆಯಿಂದ ನಿರ್ಗಮಿಸಲು ಸೂಚಿಸಲಾಗಿತ್ತು. ಆದರೆ ಮಿಸ್ತ್ರಿ ಟಾಟಾ ಕುಟುಂಬದ ಮಾತನ್ನು ಕೇಳಿರಲಿಲ್ಲ.

ಕೊನೆಗೆ 2016ರಲ್ಲಿ ಟಾಟಾ ಸಮೂಹ ಸಂಸ್ಥೆಯ ಆಡಳಿತ ಕಮಿಟಿಯ ಸದಸ್ಯರು ವಿರುದ್ಧವಾಗಿ ಮತ ಹಾಕಿ ಮಿಸ್ತ್ರಿ ಅವರನ್ನು ಪದಚ್ಯುತಿ ಮಾಡಿದ್ದರು. ತನ್ನನ್ನು ಪದಚ್ಯುತಿ ಮಾಡಿದ್ದನ್ನು ಸೈರಸ್ ಮಿಸ್ತ್ರಿಯವರು ರಾಷ್ಟ್ರೀಯ ಕಂಪನಿ ಕಾನೂನು ಪ್ರಾಧಿಕಾರದಲ್ಲಿ ಪ್ರಶ್ನೆ ಮಾಡಿದ್ದರು. 2021ರಲ್ಲಿ ಲಾ ಟ್ರಿಬ್ಯುನಲ್ ನಡೆಗೆ ಸುಪ್ರೀಂ ಕೋರ್ಟ್ ತಡೆ ಹೇರಿದ್ದು ಮಿಸ್ತ್ರಿ ಅವರಿಗೆ ಹಿನ್ನಡೆ ಮಾಡಿತ್ತು. ಟಾಟಾ ಮತ್ತು ಮಿಸ್ತ್ರಿ ಕುಟುಂಬದ ಜಟಾಪಟಿಯ ನಡುವಲ್ಲೇ ಸೈರಸ್ ಮಿಸ್ತ್ರಿಯವರು ರಸ್ತೆ ಅಪಘಾತದಲ್ಲಿ ತೀರಿಕೊಂಡಿದ್ದಾರೆ.
Cyrus Mistry, former executive chairman of Tata Sons, died in an accident on Sunday. Cyrus Mistry, 54, was travelling in a car with three others when the vehicle met with an accident near Maharashtra's Palghar district, neighbouring Mumbai.Mahindra Group chairman Anand Mahindra and RPG Enterprises chairman Harsh Goenka mourned Cyrus Mistry's death, describing him as someone destined for greatness and a man of substance.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am