ಬ್ರೇಕಿಂಗ್ ನ್ಯೂಸ್
12-09-22 04:08 pm HK News Desk ದೇಶ - ವಿದೇಶ
ವಾರಣಾಸಿ, ಸೆ.11: ಗ್ಯಾನ್ವಾಪಿ ಮಸೀದಿ ಆವರಣದ ಹೊರ ಗೋಡೆಗಳಲ್ಲಿ ಇರುವ ಶೃಂಗಾರ ಗೌರಿ ಮೂರ್ತಿಗಳ ಪೂಜೆಗೆ ಅನುಮತಿ ನೀಡಬೇಕೆಂದು ಕೋರಿ ಐವರು ಹಿಂದೂ ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ವಾರಣಾಸಿ ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ. ಈ ಮೂಲಕ ಹಿಂದೂಗಳ ಬೇಡಿಕೆಗೆ ಆರಂಭಿಕ ಗೆಲುವು ಲಭ್ಯವಾಗಿದೆ.
ವಾರಣಾಸಿ ಜಿಲ್ಲಾ ನ್ಯಾಯಾಧೀಶ ಎ. ಕೆ. ವಿಶ್ವೇಶ ಅವರು 1991ರ ಪೂಜಾ ಸ್ಥಳ ಕಾಯ್ದೆ ಇಲ್ಲಿ ಅನ್ವಯ ಆಗೋದಿಲ್ಲ ಎಂದಿದ್ದಾರೆ. ಈ ಮೂಲಕ, ಮುಸ್ಲಿ ಅರ್ಜಿದಾರರಿಗೆ ಭಾರೀ ಹಿನ್ನೆಡೆಯಾಗಿದೆ. ಹಿಂದೂ ಅರ್ಜಿದಾರರ ಅರ್ಜಿಯನ್ನು ವಜಾಗೊಳಿಸುವಂತೆ ಮುಸ್ಲಿಂ ಅರ್ಜಿದಾರರು ಮನವಿ ಮಾಡಿದ್ದರು. ಆದ್ರೆ, ನ್ಯಾಯಾಲಯ ಹಿಂದೂಗಳ ಪರ ತೀರ್ಪು ನೀಡಿದೆ. ಮುಸ್ಲಿಮರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ.

ಏನಿದು ಪ್ರಕರಣ? ;
ಗ್ಯಾನ್ವಾಪಿ ಮಸೀದಿಯಲ್ಲಿ ಇರುವ ಶೃಂಗಾರ ಗೌರಿ ಪೂಜೆಗೆ ಅನುಮತಿ ನೀಡುವಂತೆ ಐವರು ಹಿಂದೂ ಮಹಿಳೆಯರು ವಾರಣಾಸಿ ಸಿವಿಲ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯ ಗ್ಯಾನ್ವಾಪಿ ಮಸೀದಿಯ ವಿಡಿಯೋ ಸರ್ವೆಗೆ ಆದೇಶ ನೀಡಿತ್ತು. ವಿಡಿಯೋ ಸರ್ವೆ ಸಂದರ್ಭದಲ್ಲಿ ಮಸೀದಿಯ ಬಾವಿಯಲ್ಲಿ ಶಿವಲಿಂಗ ಪತ್ತೆಯಾಗಿತ್ತು. ಆದರೆ, ಶಿವಲಿಂಗವನ್ನು ಕೇವಲ ಕಾರಂಜಿ ಎಂದು ಮುಸ್ಲಿಂ ಪರ ವಕೀಲರು ವಾದಿಸಿದ್ದರು. ಅಷ್ಟೇ ಅಲ್ಲ, 1991ರ ಪೂಜಾ ಸ್ಥಳ ಕಾಯ್ದೆ ಅನ್ವಯ ಮಹಿಳೆಯರ ಅರ್ಜಿ ವಜಾಗೊಳಿಸುವಂತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಈ ವಿಚಾರವಾಗಿ ಸಿವಿಲ್ ಕೋರ್ಟ್ನಲ್ಲಿ ವಿಚಾರಣೆ ಬೇಡ, ವಾರಣಾಸಿ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿ ಎಂದು ನಿರ್ದೇಶನ ನೀಡಿತ್ತು. ಮೊದಲಿಗೆ ನ್ಯಾಯಾಲಯವು ಈ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಬೇಕೇ? ಬೇಡವೇ ಎಂಬ ಅರ್ಜಿಯನ್ನು ಇತ್ಯರ್ಥಪಡಿಸಿದೆ. ಹಿಂದೂ ಅರ್ಜಿದಾರ ಮಹಿಳೆಯರ ಅರ್ಜಿಯನ್ನು ನ್ಯಾಯಾಲಯದಲ್ಲಿ ವಿಚಾರಣೆಗೆ ಸ್ವೀಕರಿಸಲು ತೀರ್ಮಾನಿಸಿದೆ. ಈ ಪ್ರಕರಣ ವಿಚಾರಣೆಗೆ ಅರ್ಹ ಎಂದಿದೆ. ಇದೇ ಸೆಪ್ಟೆಂಬರ್ 22 ರಿಂದ ಅರ್ಜಿ ವಿಚಾರಣೆ ಆರಂಭ ಆಗಲಿದೆ ಎಂದೂ ನ್ಯಾಯಾಲಯ ತಿಳಿಸಿದೆ. ಈ ಮೂಲಕ, ಹಿಂದೂಗಳಿಗೆ ಆರಂಭಿಕ ಗೆಲುವು ಲಭ್ಯವಾಗಿದೆ.
ಈ ನಡುವೆ ಹಿಂದೂ ಪರ ವಕೀಲರು ಗ್ಯಾನ್ವಾಪಿ ಮಸೀದಿಯಲ್ಲಿ ಸಿಕ್ಕಿರುವ ಶಿವಲಿಂಗದ ಕಾರ್ಬನ್ ಡೇಟಿಂಗ್ ಪರೀಕ್ಷೆಗೆ ಒಳಪಡಿಸುವಂತೆ ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಅಷ್ಟೇ ಅಲ್ಲ, ಪುರಾತತ್ವ ಸರ್ವೆಗೆ ಆದೇಶಿಸಲು ನ್ಯಾಯಾಲಯಕ್ಕೆ ಮನವಿ ಸಲ್ಲಿಸುವುದಾಗಿಯೂ ಹೇಳಿದ್ದಾರೆ.
Varanasi's seniormost judge is expected to decide today whether the court should continue hearing a case filed by five Hindu women seeking the right to worship inside the city's Gyanvapi mosque, located next to the famous Kashi Viswanath temple.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm