ಬ್ರೇಕಿಂಗ್ ನ್ಯೂಸ್
13-09-22 12:37 pm HK News Desk ದೇಶ - ವಿದೇಶ
ಹೈದರಾಬಾದ್, ಸೆ.13: ಎಲೆಕ್ಟ್ರಿಕ್ ಬೈಕ್ ಶೋರೂಮ್ ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಸಿಕಂದರಾಬಾದ್ ನಲ್ಲಿ ಸಂಭವಿಸಿದೆ.
ನಾಲ್ಕು ಅಂತಸ್ತಿನ ಕಟ್ಟಡದ ನೆಲಮಾಳಿಗೆಯಲ್ಲಿ ಎಲೆಕ್ಟ್ರಿಕ್ ಬೈಕ್ ಶೋರೂಮ್ ಇದ್ದು ಇಲ್ಲಿ ಅಗ್ನಿ ಅವಘಡ ಸಂಭವಿಸಿ ಇಡೀ ಕಟ್ಟಡಕ್ಕೆ ಬೆಂಕಿ ಆವರಿಸಿಕೊಂಡಿದೆ ಅಲ್ಲದೆ ಕಟ್ಟಡದ ಮೊದಲ ಮಹಡಿಯಲ್ಲಿ ಹೋಟೆಲ್ ಇದ್ದು ಅಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಇದ್ದುದರಿಂದ ಸಾವು ನೋವು ಸಂಭವಿಸಿದೆ.
ಹೈದರಾಬಾದ್ ನಗರ ಪೊಲೀಸ್ ಆಯುಕ್ತ ಸಿ.ವಿ ಆನಂದ್ ಹೇಳಿಕೆಯಂತೆ ಈ ದುರ್ಘಟನೆಯಲ್ಲಿ ಇದುವರೆಗೂ ಮಹಿಳೆಯರು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಹಲವು ಮಂದಿ ಗಾಯಗೊಂಡಿದ್ದು ಅವರನ್ನು ಗಾಂಧಿ ಆಸ್ಪತ್ರೆ ಮತ್ತು ಇತರ ಹತ್ತಿರದ ಖಾಸಗಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಹೇಳಿದ್ದಾರೆ.
ಹೊಟೇಲ್ ನಲ್ಲಿದ್ದ ಅತಿಥಿಗಳಿಗೆ ದಟ್ಟ ಹೊಗೆ ಆವರಿಸಿದ್ದರಿಂದ ಹೆಚ್ಚಿನವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಕೆಲವರು ಕಿಟಕಿಯ ಗಾಜುಗಳನ್ನು ಒಡೆದು ಕೆಳಗೆ ಹಾರಿದ್ದಾರೆ, ಅವರಲ್ಲಿ ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಇನ್ನು ಕೆಲವರು ಕೊಠಡಿಗಳಲ್ಲಿ ಸಿಲುಕಿದ್ದರು ಅವರನ್ನು ರಕ್ಷಿಸಲಾಗಿದೆ ಎಂದು ಮಾಹಿತಿ ನೀಡಿದರು.
ಘಟನೆ ಸಂಭವಿಸಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹೋಟೆಲ್ ನಲ್ಲಿ ಸಿಲುಕಿರುವವರನ್ನು ರಕ್ಷಣೆ ಮಾಡಿದ್ದು ಬೆಂಕಿ ನಂದಿಸಲು ಗಂಟೆಗಳ ಕಾಲ ಹರಸಾಹಸ ಪಡಬೇಕಾಯಿತು.
Eight people staying in a hotel were killed in a fire accident that originated from an electric bike showroom in the Secunderabad area on the night of Monday and Tuesday. Five others were injured, police said. Officials said the fire and smoke from the showroom engulfed a lodge above the showroom, killing the victims. About 25 to 30 people were said to be staying in the hotel at the time of the incident.
12-10-25 08:59 pm
Bangalore Correspondent
D.K. Shivakumar, MLA Munirathna, RSS: ಮುನಿರತ್...
12-10-25 08:05 pm
ಯಾವ ಸಂಪುಟ ವಿಸ್ತರಣೆಯೂ ಇಲ್ಲ, ಎಲ್ಲ ಗಾಳಿ ಸುದ್ದಿ ಅ...
11-10-25 11:03 pm
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
12-10-25 10:19 pm
HK News Desk
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
12-10-25 09:53 pm
Mangalore Correspondent
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
ಅಫ್ಘಾನ್ ಸಚಿವನಿಂದ ಭಾರತದಲ್ಲಿ ಮಹಿಳೆಯರಿಗೆ ಅವಮಾನ ;...
12-10-25 05:02 pm
Girish Mattannavar Mocks Dr. Mahabala Shetty:...
11-10-25 10:24 pm
12-10-25 03:52 pm
Mangalore Correspondent
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm