ಬ್ರೇಕಿಂಗ್ ನ್ಯೂಸ್
13-09-22 10:19 pm HK News Desk ದೇಶ - ವಿದೇಶ
ನವದೆಹಲಿ, ಸೆ.13 : ಕ್ಯಾನ್ಸರ್ ಚಿಕಿತ್ಸೆಗೆ ಬಳಕೆ ಮಾಡುವ ಔಷಧಗಳು, ಆ್ಯಂಟಿ ಬಯೋಟಿಕ್ ಲಸಿಕೆಗಳು ಇನ್ನು ಜನರ ಕೈಗೆಟಕುವ ದರದಲ್ಲಿ ಲಭ್ಯವಾಗಲಿವೆ. ಜೊತೆಗೆ ಅಸಿಡಿಟಿ ನಿಯಂತ್ರಣಕ್ಕಾಗಿ ವೈದ್ಯರು ನೀಡುವ ರ್ಯಾಂಟಾಕ್, ಝಿಂಟ್ಯಾಕ್ ಸೇರಿದಂತೆ 26 ಔಷಧಗಳನ್ನು ರಾಷ್ಟ್ರೀಯ ಅಗತ್ಯ ಔಷಧ ಪಟ್ಟಿಯಿಂದ ತೆಗೆಯಲಾಗಿದೆ. ಅವುಗಳ ಬಳಕೆಯಿಂದ ಕ್ಯಾನ್ಸರ್ ಬರಲಿವೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಅಗತ್ಯ ಔಷಧಗಳ ಪಟ್ಟಿಗೆ 34 ಹೊಸ ಔಷಧಗಳನ್ನು ಸೇರಿಸಲಾಗಿದೆ. ಅದರಲ್ಲಿ ಐವರ್ವೆುಕ್ಟಿನ್, ಮ್ಯುಪಿರೋಸಿನ್ ಮತ್ತು ಮೆರೋಪೆನೆಮ್ ಔಷಧಗಳನ್ನು ಸೇರಿಸಲಾಗಿದೆ. ಹೀಗಾಗಿ, ಜನರ ಕೈಗೆ ಎಟಕುವ ದರದಲ್ಲಿ ಲಭ್ಯವಾಗಲಿರುವ ಔಷಧಗಳ ಪಟ್ಟಿ 384ಕ್ಕೆ ಏರಿಕೆಯಾಗಿದೆ.
ವಿವಿಧ ಕ್ಯಾನ್ಸರ್ ಚಿಕಿತ್ಸೆಗೆ ಬಳಕೆ ಮಾಡಲಾಗಿರುವ ನಾಲ್ಕು ಪ್ರಮುಖ ಔಷಧಗಳು ಕೈಗೆಟಕುವ ದರಗಳ ಪಟ್ಟಿಗೆ ಸೇರ್ಪಡೆಯಾಗಿವೆ. ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಮನ್ಸುಖ್ ಮಾಂಡವಿಯಾ “ಕೇಂದ್ರ ಸರ್ಕಾರದ ನಿರ್ಧಾರದಿಂದ ಜನರಿಗೆ ಕೈಗೆಟಕುವ ದರದಲ್ಲಿ ಔಷಧಗಳು ಲಭ್ಯವಾಗಲಿವೆ’ ಎಂದು ಬರೆದುಕೊಂಡಿದ್ದಾರೆ.

ರಾಷ್ಟ್ರೀಯ ಅಗತ್ಯ ಔಷಧಗಳ ಪಟ್ಟಿ (ಎನ್ಎಲ್ಇಎಂ)ಯಲ್ಲಿ 27 ವಿಭಾಗಗಳಿಗೆ ಅನ್ವಯವಾಗುವ 384 ಔಷಧಗಳು, ಏಳು ಆ್ಯಂಟಿ ಬಯಾಟಿಕ್ಸ್ಗಳು, ಲಸಿಕೆಗಳು, ಕ್ಯಾನ್ಸರ್ ಚಿಕಿತ್ಸೆಯಲ್ಲಿ ಬಳಕೆ ಮಾಡಲಾಗುವ ಔಷಧಗಳು ಜನರಿಗೆ ಕಡಿಮೆ ದರದಲ್ಲಿ ಲಭ್ಯವಾಗಲಿವೆ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎಲ್ಲರಿಗೂ ಔಷಧ; ಕಡಿಮೆ ದರದಲ್ಲಿ ಎಂಬ ನಿಲುವಿನ ಆಧಾರದಲ್ಲಿ ಇಂಥ ಕ್ರಮ ಕೈಗೊಂಡಿದೆ ಎಂದು ಸಚಿವ ಮಾಂಡವಿಯಾ ಹೇಳಿದ್ದಾರೆ. ದರ, ಸುರಕ್ಷತೆ, ಪರಿಣಾಮಕಾರಿತ್ವವನ್ನು ಪರಿಗಣಿಸಿ ರಾಷ್ಟ್ರೀಯ ಅಗತ್ಯ ಔಷಧ ಪಟ್ಟಿ ರೂಪಿಸಲಾಗಿದೆ ಎಂದು ಹೇಳಿದ್ದಾರೆ. ಪರಿಷ್ಕೃತ ಆಗಿರುವ ಔಷಧಗಳ ಪಟ್ಟಿಯಲ್ಲಿ ಹೃದಯ ಚಿಕಿತ್ಸೆಗೆ ಸಂಬಂಧಿಸಿದ ಡಬಿಗಟ್ರಾನ್ ಮತ್ತು ಟೆನೆಕ್ಟೆಪ್ಲೇಸ್ಗಳು ಕೂಡ ಸೇರಿವೆ.
Centre has removed the popular antacid salt Ranitidine from the essential medicine list over cancer-causing concerns. 26 medicines have been taken off the list.Ranitidine is popularly sold under the brand names Aciloc, Zinetac, and Rantac, among others, and is commonly prescribed for acidity and stomachache-related issues.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am