ಬ್ರೇಕಿಂಗ್ ನ್ಯೂಸ್
08-10-20 12:14 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 07: ಭಾರತೀಯ ವಾಯುಸೇನೆಯು ಇಂದು 88ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಳ್ಳುತ್ತಿದ್ದು, ಉತ್ತರ ಪ್ರದೇಶದ ಘಾಜಿಯಬಾದ್ನಲ್ಲಿರುವ ಹಿಂಡನ್ ವಾಯುನೆಲೆಯಲ್ಲಿ ವಿಶೇಷ ಪರೇಡ್ ಅನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಸೇನಾ ಮುಖ್ಯಸ್ಥರಾದ ಜನರಲ್ ಮನೋಜ್ ಮುಕುಂದ್ ನರಾವಣೆ ಮತ್ತು ನೌಕಾ ಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬಿರ್ ಸಿಂಗ್ ಅವರು ಭಾಗಿಯಾಗಿದ್ದರು. ವಾಯುಪಡೆಯ ಮುಖ್ಯಸ್ಥರಾದ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಅವರು ಹಿಂಡನ್ ವಾಯುನೆಲೆಯಲ್ಲಿ 88ನೇ ಭಾರತೀಯ ವಾಯುಪಡೆ ದಿನದ ಮೆರವಣಿಗೆಯನ್ನು ಪರಿಶೀಲಿಸಿದರು.
ಇನ್ನು ಈ ವರ್ಷದ ವಿಶೇಷ ಪರೇಡ್ ಪ್ರಮುಖ ಆಕರ್ಷಣೆ ರಫೇಲ್ ಯುದ್ಧ ವಿಮಾನ ಎಂಬುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇದರ ಜೊತೆಗೆ ಸುಕೋಯ್, ತೇಜಸ್, ಅಪಾಚೆ, ಮಿಗ್ ಸೇರಿ ಅನೇಕ ಯುದ್ಧ ವಿಮಾನಗಳು ಶಕ್ತಿ ಪ್ರದರ್ಶನ ಮಾಡಲಿವೆ. ವಿಶೇಷ ಹೆಲಿಕಾಫ್ಟರ್ಗಳು ಸಾಹಸ ಪ್ರದರ್ಶಿಸಲಿವೆ. ಒಟ್ಟಾರೆ 56 ಏರ್ಕ್ರಾಫ್ಟ್ಗಳು, 19 ಫೈಟರ್ ಜೆಟ್ಗಳು, 19 ಹೆಲಿಕಾಫ್ಟರ್ಗಳು ಈ ವರ್ಷದ ಪರೇಡ್ನಲ್ಲಿ ಕಾಣಿಸಿಕೊಳ್ಳಲಿವೆ.
ಭಾರತೀಯ ವಾಯುಸೇನಾ ದಿನವನ್ನು 1932, ಅಕ್ಟೋಬರ್ 8 ರಂದು ಮೊದಲ ಬಾರಿ ಆಚರಿಸಲಾಯಿತು. ಇದಾದ ಬಳಿಕ ಪ್ರತಿವರ್ಷ ಈ ದಿನವನ್ನು ಆಚರಿಸಲಾಗುತ್ತಿದೆ. ನೆರೆ ದೇಶಗಳಾದ ಪಾಕಿಸ್ತಾನ ಮತ್ತು ಚೀನಾದೊಂದಿಗೆ ನಡೆದ ಯುದ್ಧದಲ್ಲಿ ನಮ್ಮ ವಾಯುಪಡೆ ಅತ್ಯಂತ ಮಹತ್ವದ ಪಾತ್ರ ವಹಿಸಿದೆ. ವಾಯುಪಡೆಯು ನಡೆಸಿದ ಸೇನಾ ಕಾರ್ಯಾಚರಣೆಗಳಲ್ಲಿ ಆಪರೇಷನ್ ವಿಜಯ್, ಆಪರೇಷನ್ ಮೇಘದೂತ್, ಆಪರೇಷನ್ ಕ್ಯಾಕ್ಟಸ್, ಆಪರೇಷನ್ ಪೂಮಲೈ, ಆಪರೇಷನ್ ರಾಹತ್ ಇತ್ಯಾದಿಗಳು ಅತ್ಯಂತ ಪ್ರಮುಖವಾಗಿವೆ
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 06:59 pm
HK News Desk
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
05-08-25 08:22 pm
Mangalore Correspondent
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm