ಬ್ರೇಕಿಂಗ್ ನ್ಯೂಸ್
08-10-20 12:14 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 07: ಭಾರತೀಯ ವಾಯುಸೇನೆಯು ಇಂದು 88ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಳ್ಳುತ್ತಿದ್ದು, ಉತ್ತರ ಪ್ರದೇಶದ ಘಾಜಿಯಬಾದ್ನಲ್ಲಿರುವ ಹಿಂಡನ್ ವಾಯುನೆಲೆಯಲ್ಲಿ ವಿಶೇಷ ಪರೇಡ್ ಅನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಸೇನಾ ಮುಖ್ಯಸ್ಥರಾದ ಜನರಲ್ ಮನೋಜ್ ಮುಕುಂದ್ ನರಾವಣೆ ಮತ್ತು ನೌಕಾ ಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬಿರ್ ಸಿಂಗ್ ಅವರು ಭಾಗಿಯಾಗಿದ್ದರು. ವಾಯುಪಡೆಯ ಮುಖ್ಯಸ್ಥರಾದ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಅವರು ಹಿಂಡನ್ ವಾಯುನೆಲೆಯಲ್ಲಿ 88ನೇ ಭಾರತೀಯ ವಾಯುಪಡೆ ದಿನದ ಮೆರವಣಿಗೆಯನ್ನು ಪರಿಶೀಲಿಸಿದರು.

ಇನ್ನು ಈ ವರ್ಷದ ವಿಶೇಷ ಪರೇಡ್ ಪ್ರಮುಖ ಆಕರ್ಷಣೆ ರಫೇಲ್ ಯುದ್ಧ ವಿಮಾನ ಎಂಬುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇದರ ಜೊತೆಗೆ ಸುಕೋಯ್, ತೇಜಸ್, ಅಪಾಚೆ, ಮಿಗ್ ಸೇರಿ ಅನೇಕ ಯುದ್ಧ ವಿಮಾನಗಳು ಶಕ್ತಿ ಪ್ರದರ್ಶನ ಮಾಡಲಿವೆ. ವಿಶೇಷ ಹೆಲಿಕಾಫ್ಟರ್ಗಳು ಸಾಹಸ ಪ್ರದರ್ಶಿಸಲಿವೆ. ಒಟ್ಟಾರೆ 56 ಏರ್ಕ್ರಾಫ್ಟ್ಗಳು, 19 ಫೈಟರ್ ಜೆಟ್ಗಳು, 19 ಹೆಲಿಕಾಫ್ಟರ್ಗಳು ಈ ವರ್ಷದ ಪರೇಡ್ನಲ್ಲಿ ಕಾಣಿಸಿಕೊಳ್ಳಲಿವೆ.

ಭಾರತೀಯ ವಾಯುಸೇನಾ ದಿನವನ್ನು 1932, ಅಕ್ಟೋಬರ್ 8 ರಂದು ಮೊದಲ ಬಾರಿ ಆಚರಿಸಲಾಯಿತು. ಇದಾದ ಬಳಿಕ ಪ್ರತಿವರ್ಷ ಈ ದಿನವನ್ನು ಆಚರಿಸಲಾಗುತ್ತಿದೆ. ನೆರೆ ದೇಶಗಳಾದ ಪಾಕಿಸ್ತಾನ ಮತ್ತು ಚೀನಾದೊಂದಿಗೆ ನಡೆದ ಯುದ್ಧದಲ್ಲಿ ನಮ್ಮ ವಾಯುಪಡೆ ಅತ್ಯಂತ ಮಹತ್ವದ ಪಾತ್ರ ವಹಿಸಿದೆ. ವಾಯುಪಡೆಯು ನಡೆಸಿದ ಸೇನಾ ಕಾರ್ಯಾಚರಣೆಗಳಲ್ಲಿ ಆಪರೇಷನ್ ವಿಜಯ್, ಆಪರೇಷನ್ ಮೇಘದೂತ್, ಆಪರೇಷನ್ ಕ್ಯಾಕ್ಟಸ್, ಆಪರೇಷನ್ ಪೂಮಲೈ, ಆಪರೇಷನ್ ರಾಹತ್ ಇತ್ಯಾದಿಗಳು ಅತ್ಯಂತ ಪ್ರಮುಖವಾಗಿವೆ
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm