ಬ್ರೇಕಿಂಗ್ ನ್ಯೂಸ್
15-09-22 10:51 pm HK News Desk ದೇಶ - ವಿದೇಶ
ನವದೆಹಲಿ, ಸೆ.15: ಬ್ಯಾಂಕ್ ಸಿಬಂದಿಯ ಎಡವಟ್ಟಿನಿಂದಾಗಿ ಹುಡುಗಿಯೊಬ್ಬಳು ದಿಢೀರ್ ಆಗಿ ಕೋಟ್ಯಧೀಶೆ ಆಗಿದ್ದು ಬೇಕಾಬಿಟ್ಟಿ ಖರ್ಚು ಮಾಡಲಾರಂಭಿಸಿದ್ದಳು. ಸದ್ದಿಲ್ಲದೇ ಅವಳು ತನ್ನ ಖಾತೆಯಿಂದ 18 ಕೋಟಿ ರೂ. ಹೆಚ್ಚು ಹಣ ಖರ್ಚು ಮಾಡಿದ್ದು ಐಷಾರಾಮಿ ಜೀವನ ನಡೆಸಿಯೇ ಸಿಕ್ಕಿಬಿದ್ದಿದ್ದಾಳೆ.
ಆಸ್ಟ್ರೇಲಿಯಾದ ವೆಸ್ಟ್ಪ್ಯಾಕ್ ಬ್ಯಾಂಕ್ ಆಕಸ್ಮಿಕವಾಗಿ ಮಲೇಷ್ಯಾ ಮೂಲದ 21 ವರ್ಷದ ಕ್ರಿಸ್ಟಿನ್ ಜಿಯಾಕ್ಸಿನ್ ಎಂಬ ವಿದ್ಯಾರ್ಥಿನಿಗೆ ಈ ಓವರ್ಡ್ರಾಫ್ಟ್ ಸೌಲಭ್ಯವನ್ನು ನೀಡಿದ್ದು, ಅದು ಕೂಡ ಅನಿಯಮಿತವಾಗಿತ್ತು! ಕ್ರಿಸ್ಟಿನ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದಲು ಆಸ್ಟ್ರೇಲಿಯಾದ ಸಿಡ್ನಿಗೆ ಹೋಗಿದ್ದಳು.
ವೆಸ್ಟ್ಪ್ಯಾಕ್ ಬ್ಯಾಂಕ್ ತಪ್ಪಾಗಿ ಕ್ರಿಸ್ಟೀನ್ ಖಾತೆಯಲ್ಲಿ ಅನಿಯಮಿತ ಓವರ್ಡ್ರಾಫ್ಟ್ ಸೌಲಭ್ಯವನ್ನು ಅನುಮತಿಸಿತ್ತು. ವಿಷಯ ತಿಳಿದಾಗ, ಅವಳು ಬ್ಯಾಂಕ್ಗೆ ತಿಳಿಸದೆ ಹಣವನ್ನು ಎಗರಿಸಲು ಪ್ರಾರಂಭಿಸಿದ್ದು, ಪಾರ್ಟಿ, ಟ್ರಾವೆಲಿಂಗ್, ಶಾಪಿಂಗ್ , ಚಿನ್ನಾಭರಣ ಸೇರಿ ಐಷಾರಾಮಿ ಜೀವನವನ್ನು ಪ್ರಾರಂಭಿಸಿ ಹಣವನ್ನು ಮನಬಂದಂತೆ ವ್ಯಯಿಸಿದ್ದಾಳೆ. ಅಷ್ಟೇ ಅಲ್ಲ ಕ್ರಿಸ್ಟಿನ್ ದುಬಾರಿ ಅಪಾರ್ಟ್ ಮೆಂಟ್ ಕೂಡ ತೆಗೆದುಕೊಂಡಿದ್ದಾಳೆ. ಇದಲ್ಲದೆ, ಅವಳ ಇನ್ನೊಂದು ಖಾತೆಗೆ ಸುಮಾರು 2.5 ಲಕ್ಷ ರೂ. ಟ್ರಾನ್ಸ್ ಫರ್ ಮಾಡಿಕೊಂಡಿದ್ದಾಳೆ.

ಸುಮಾರು 11 ತಿಂಗಳ ವರೆಗೆ, ಕ್ರಿಸ್ಟಿನ್ ಬ್ಯಾಂಕ್ನಿಂದ ಹಣವನ್ನು ಸುಲಿಗೆ ಮಾಡುತ್ತಲೇ ಇದ್ದಳು. ಕೊನೆಗೆ ಇದು ಬಹಿರಂಗಗೊಳ್ಳುತ್ತಲೇ ಕ್ರಿಸ್ಟಿನ್ ಅನ್ನು ಬಂಧಿಸಲಾಯಿತು. ವಿಷಯ ನ್ಯಾಯಾಲಯದ ಮೆಟ್ಟಿಲೇರಿದಾಗ, ಕ್ರಿಸ್ಟೀನ್ ವಿರುದ್ಧದ ಎಲ್ಲಾ ಆರೋಪಗಳನ್ನು ವಜಾಗೊಳಿಸಿದ್ದು ಅವಳನ್ನು ಬಿಡುಗಡೆ ಮಾಡಲಾಗಿದೆ.
ನನ್ನ ಪೋಷಕರು ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾಯಿಸಿದ್ದಾರೆ ಎಂದು ನಾನು ಭಾವಿಸಿದೆ ಎಂದು ಕ್ರಿಸ್ಟಿನ್ ತನ್ನ ವಿವರಣೆಯಲ್ಲಿ ಹೇಳಿದ್ದಾರೆ. ಅದೇ ಸಮಯದಲ್ಲಿ, ಬ್ಯಾಂಕ್ ತಪ್ಪು ಮಾಡಿದ್ದರಿಂದ ಕ್ರಿಸ್ಟಿನ್ ವಂಚನೆಯಲ್ಲಿ ತಪ್ಪಿತಸ್ಥಳಲ್ಲ ಎಂದು ಅವರ ವಕೀಲರು ವಾದಿಸಿದರು. ಮತ್ತೊಂದೆಡೆ, ಕ್ರಿಸ್ಟಿನ್ ಅವರ ಗೆಳೆಯ ವಿನ್ಸೆಂಟ್ ಕಿಂಗ್ ಅವರು ಕ್ರಿಸ್ಟಿನ್ ಬಳಿಯಿರುವ ಇಷ್ಟು ದೊಡ್ಡ ಪ್ರಮಾಣದ ಹಣದ ಬಗ್ಗೆ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ.
ನಂತರ, ಕ್ರಿಸ್ಟಿನ್ ಸಿಡ್ನಿಯಿಂದ ಮಲೇಷ್ಯಾದ ತನ್ನ ಮನೆಗೆ ಮರಳಿದ್ದಾಳೆ. ಆದಾಗ್ಯೂ, ತನಿಖಾ ಸಂಸ್ಥೆಗಳು ಕ್ರಿಸ್ಟಿನ್ ಳಿಂದ 9 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿವೆ.
A student spent 2 million pound on lavish life style designer hand bag after a bank accidentally gave her unlimited overdraft. Christine jiaxin lee, who was studying in Australia at the time also splashed out on pricey apartment while hiding chuncks of the money by transfering around 2500 pounds into secret bank accounts.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm