ಬ್ರೇಕಿಂಗ್ ನ್ಯೂಸ್
15-09-22 10:51 pm HK News Desk ದೇಶ - ವಿದೇಶ
ನವದೆಹಲಿ, ಸೆ.15: ಬ್ಯಾಂಕ್ ಸಿಬಂದಿಯ ಎಡವಟ್ಟಿನಿಂದಾಗಿ ಹುಡುಗಿಯೊಬ್ಬಳು ದಿಢೀರ್ ಆಗಿ ಕೋಟ್ಯಧೀಶೆ ಆಗಿದ್ದು ಬೇಕಾಬಿಟ್ಟಿ ಖರ್ಚು ಮಾಡಲಾರಂಭಿಸಿದ್ದಳು. ಸದ್ದಿಲ್ಲದೇ ಅವಳು ತನ್ನ ಖಾತೆಯಿಂದ 18 ಕೋಟಿ ರೂ. ಹೆಚ್ಚು ಹಣ ಖರ್ಚು ಮಾಡಿದ್ದು ಐಷಾರಾಮಿ ಜೀವನ ನಡೆಸಿಯೇ ಸಿಕ್ಕಿಬಿದ್ದಿದ್ದಾಳೆ.
ಆಸ್ಟ್ರೇಲಿಯಾದ ವೆಸ್ಟ್ಪ್ಯಾಕ್ ಬ್ಯಾಂಕ್ ಆಕಸ್ಮಿಕವಾಗಿ ಮಲೇಷ್ಯಾ ಮೂಲದ 21 ವರ್ಷದ ಕ್ರಿಸ್ಟಿನ್ ಜಿಯಾಕ್ಸಿನ್ ಎಂಬ ವಿದ್ಯಾರ್ಥಿನಿಗೆ ಈ ಓವರ್ಡ್ರಾಫ್ಟ್ ಸೌಲಭ್ಯವನ್ನು ನೀಡಿದ್ದು, ಅದು ಕೂಡ ಅನಿಯಮಿತವಾಗಿತ್ತು! ಕ್ರಿಸ್ಟಿನ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದಲು ಆಸ್ಟ್ರೇಲಿಯಾದ ಸಿಡ್ನಿಗೆ ಹೋಗಿದ್ದಳು.
ವೆಸ್ಟ್ಪ್ಯಾಕ್ ಬ್ಯಾಂಕ್ ತಪ್ಪಾಗಿ ಕ್ರಿಸ್ಟೀನ್ ಖಾತೆಯಲ್ಲಿ ಅನಿಯಮಿತ ಓವರ್ಡ್ರಾಫ್ಟ್ ಸೌಲಭ್ಯವನ್ನು ಅನುಮತಿಸಿತ್ತು. ವಿಷಯ ತಿಳಿದಾಗ, ಅವಳು ಬ್ಯಾಂಕ್ಗೆ ತಿಳಿಸದೆ ಹಣವನ್ನು ಎಗರಿಸಲು ಪ್ರಾರಂಭಿಸಿದ್ದು, ಪಾರ್ಟಿ, ಟ್ರಾವೆಲಿಂಗ್, ಶಾಪಿಂಗ್ , ಚಿನ್ನಾಭರಣ ಸೇರಿ ಐಷಾರಾಮಿ ಜೀವನವನ್ನು ಪ್ರಾರಂಭಿಸಿ ಹಣವನ್ನು ಮನಬಂದಂತೆ ವ್ಯಯಿಸಿದ್ದಾಳೆ. ಅಷ್ಟೇ ಅಲ್ಲ ಕ್ರಿಸ್ಟಿನ್ ದುಬಾರಿ ಅಪಾರ್ಟ್ ಮೆಂಟ್ ಕೂಡ ತೆಗೆದುಕೊಂಡಿದ್ದಾಳೆ. ಇದಲ್ಲದೆ, ಅವಳ ಇನ್ನೊಂದು ಖಾತೆಗೆ ಸುಮಾರು 2.5 ಲಕ್ಷ ರೂ. ಟ್ರಾನ್ಸ್ ಫರ್ ಮಾಡಿಕೊಂಡಿದ್ದಾಳೆ.

ಸುಮಾರು 11 ತಿಂಗಳ ವರೆಗೆ, ಕ್ರಿಸ್ಟಿನ್ ಬ್ಯಾಂಕ್ನಿಂದ ಹಣವನ್ನು ಸುಲಿಗೆ ಮಾಡುತ್ತಲೇ ಇದ್ದಳು. ಕೊನೆಗೆ ಇದು ಬಹಿರಂಗಗೊಳ್ಳುತ್ತಲೇ ಕ್ರಿಸ್ಟಿನ್ ಅನ್ನು ಬಂಧಿಸಲಾಯಿತು. ವಿಷಯ ನ್ಯಾಯಾಲಯದ ಮೆಟ್ಟಿಲೇರಿದಾಗ, ಕ್ರಿಸ್ಟೀನ್ ವಿರುದ್ಧದ ಎಲ್ಲಾ ಆರೋಪಗಳನ್ನು ವಜಾಗೊಳಿಸಿದ್ದು ಅವಳನ್ನು ಬಿಡುಗಡೆ ಮಾಡಲಾಗಿದೆ.
ನನ್ನ ಪೋಷಕರು ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾಯಿಸಿದ್ದಾರೆ ಎಂದು ನಾನು ಭಾವಿಸಿದೆ ಎಂದು ಕ್ರಿಸ್ಟಿನ್ ತನ್ನ ವಿವರಣೆಯಲ್ಲಿ ಹೇಳಿದ್ದಾರೆ. ಅದೇ ಸಮಯದಲ್ಲಿ, ಬ್ಯಾಂಕ್ ತಪ್ಪು ಮಾಡಿದ್ದರಿಂದ ಕ್ರಿಸ್ಟಿನ್ ವಂಚನೆಯಲ್ಲಿ ತಪ್ಪಿತಸ್ಥಳಲ್ಲ ಎಂದು ಅವರ ವಕೀಲರು ವಾದಿಸಿದರು. ಮತ್ತೊಂದೆಡೆ, ಕ್ರಿಸ್ಟಿನ್ ಅವರ ಗೆಳೆಯ ವಿನ್ಸೆಂಟ್ ಕಿಂಗ್ ಅವರು ಕ್ರಿಸ್ಟಿನ್ ಬಳಿಯಿರುವ ಇಷ್ಟು ದೊಡ್ಡ ಪ್ರಮಾಣದ ಹಣದ ಬಗ್ಗೆ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ.
ನಂತರ, ಕ್ರಿಸ್ಟಿನ್ ಸಿಡ್ನಿಯಿಂದ ಮಲೇಷ್ಯಾದ ತನ್ನ ಮನೆಗೆ ಮರಳಿದ್ದಾಳೆ. ಆದಾಗ್ಯೂ, ತನಿಖಾ ಸಂಸ್ಥೆಗಳು ಕ್ರಿಸ್ಟಿನ್ ಳಿಂದ 9 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿವೆ.
A student spent 2 million pound on lavish life style designer hand bag after a bank accidentally gave her unlimited overdraft. Christine jiaxin lee, who was studying in Australia at the time also splashed out on pricey apartment while hiding chuncks of the money by transfering around 2500 pounds into secret bank accounts.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am