ಬ್ರೇಕಿಂಗ್ ನ್ಯೂಸ್
19-09-22 01:41 pm HK News Desk ದೇಶ - ವಿದೇಶ
ಮುಂಬೈ, ಸೆ.19: ಭಾರತೀಯ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಮೆರೆದಿರುವ 'ಜಾನ್ಸನ್ ಆಂಡ್ ಜಾನ್ಸನ್' ಬೇಬಿ ಪೌಡರ್ಗೆ ಮಹಾರಾಷ್ಟ್ರ ಸರ್ಕಾರ ನಿಷೇಧ ಹೇರಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದಾಗಿ ಮಹಾರಾಷ್ಟ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಜಾನ್ಸನ್ ಆಂಡ್ ಜಾನ್ಸನ್ ಬೇಬಿ ಪೌಡರ್ನಿಂದ ಮಕ್ಕಳ ಚರ್ಮದ ಮೇಲಾಗುವ ಪರಿಣಾಮಗಳ ಬಗ್ಗೆ ದೂರುಗಳು ಕೇಳಿ ಬಂದಿತ್ತು. ಹೀಗಾಗಿ ಅವುಗಳ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಪ್ರಯೋಗಾಲಯದಿಂದ ಬಂದ ಫಲಿತಾಂಶದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕೋಲ್ಕತ್ತಾದ ಕೇಂದ್ರ ಔಷಧೀಯ ಪ್ರಯೋಗಾಲಯದ ವರದಿ ಕೂಡ, ಜಾನ್ಸನ್ ಆಂಡ್ ಜಾನ್ಸನ್ ಬೇಬಿ ಪೌಡರ್ ಶಿಶುಗಳ ಆರೋಗ್ಯಕ್ಕೆ ಒಳ್ಳೆಯದಲ್ಲ ಎನ್ನುವ ವರದಿ ನೀಡಿತ್ತು. ಇದಾದ ಬಳಿಕ ಮಹಾರಾಷ್ಟ್ರ ಸರ್ಕಾರ ಇಂಥಹದ್ದೊಂದು ನಿರ್ಧಾರ ತೆಗೆದುಕೊಂಡಿದೆ.
ನಿಷೇಧ ಹೇರುವುದಕ್ಕೂ ಮುನ್ನ ಮಹಾರಾಷ್ಟ್ರ ಆಹಾರ ಹಾಗೂ ಔಷಧ ಆಡಳಿತವು ಜಾನ್ಸನ್ ಆಂಡ್ ಜಾನ್ಸನ್ ಬೇಬಿ ಪೌಡರ್ನ ಸ್ಯಾಂಪಲ್ಗಳನ್ನು ಪುಣೆ ಹಾಗೂ ನಾಸಿಕ್ನಲ್ಲಿರುವ ಪ್ರಯೋಗಾಲಯಕ್ಕೆ ಕಳುಹಿಸಿ ಪರೀಕ್ಷೆಗೆ ಒಳಪಡಿಸಿತ್ತು. ಅಲ್ಲಿಂದ ಬಂದ ವರದಿಯನ್ವಯ ಇದೀಗ ಲೈಸೆನ್ಸ್ ರದ್ದು ಮಾಡುವ ನಿರ್ಧಾರ ಕೈಗೊಂಡಿದೆ.
ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾದ ಸ್ಯಾಂಪಲ್ಗಳು 'ಪ್ರಾಮಾಣಿತ ಗುಣಮಟ್ಟ'ದಲ್ಲಿ ಇಲ್ಲ. IS 5339:2004 ಹೇಳಲಾದ ಗುಣಮಟ್ಟದಲ್ಲಿ ಇಲ್ಲ ಎಂದು ಪರೀಕ್ಷೆಯಲ್ಲಿ ಗೊತ್ತಾಗಿದೆ.
ಹೀಗಾಗಿ ಡ್ರಗ್ಸ್ ಕಾಸ್ಮೆಟಿಕ್ಸ್ ಕಾಯ್ದೆ 1940 ರ ಅನ್ವಯ ಜಾನ್ಸನ್ ಆಂಡ್ ಜಾನ್ಸನ್ ಕಂಪನಿಗೆ ಮಹಾರಾಷ್ಟ್ರ ಆಹಾರ ಹಾಗೂ ಔಷಧ ಆಡಳಿತ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಅಲ್ಲದೇ ಮಾರುಕಟ್ಟೆಯಲ್ಲಿ ಇರುವ ಉತ್ಪನ್ನಗಳನ್ನು ಹಿಂಪಡೆಯಬೇಕು ಎಂದು ನಿರ್ದೇಶನ ನೀಡಿದೆ.
ಇನ್ನು ಮಹಾರಾಷ್ಟ್ರ ಆಹಾರ ಹಾಗೂ ಔಷಧ ಆಡಳಿತ ನೀಡಿರುವ ನೊಟಿಸ್ಗೆ ಕಂಪನಿ ಪ್ರತಿಕ್ರಿಯೆ ನೀಡಿದ್ದು, ಇದರ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದಾಗಿ ತಿಳಿಸಿದೆ.
Maharashtra's Food and Drugs Administration (FDA) on Friday cancelled the baby powder manufacturing licence of Johnson & Johnson Pvt Ltd "in the interest of public health at large". In a release, the state government agency said the company's product, Johnson's Baby Powder, may affect the skin of newborn babies.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm