ಬ್ರೇಕಿಂಗ್ ನ್ಯೂಸ್
08-10-20 06:18 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 08: ಶಾಲೆಯಲ್ಲಿ ಕಲಿಸಿದ ಗುರುಗುಳು ದೊಡ್ಡವರಾದ ಮೇಲೆ ಕೆಲವರಿಗೆ ಗುರುತು ಸಿಗುವುದೇ ಕಷ್ಟ. ಅಂಥದರಲ್ಲಿ ಇಲ್ಲೊಬ್ಬ ತಾನು ಶಾಲೆಯಲ್ಲಿ ಕಷ್ಟದಲ್ಲಿದ್ದಾಗ, 500 ರೂಪಾಯಿ ನೀಡಿ ಯಾವುದೋ ಇಂಟರ್ವ್ಯೂಗೆ ಕಳಿಸಿದ್ದ ಶಿಕ್ಷಕರನ್ನು ಸ್ಮರಿಸಿ, ಅವರಿಗೆ 30 ಲಕ್ಷ ರೂಪಾಯಿ ಗುರುದಕ್ಷಿಣೆ ನೀಡಿದ್ದಾನೆ.
ಐಡಿಎಫ್ ಸಿ ಬ್ಯಾಂಕಿನ ಎಂಡಿ ಮತ್ತು ಸಿಇಓ ಆಗಿರುವ ವಿ.ವೈದ್ಯನಾಥನ್ ಎಂಬವರೇ ಹೀಗೆ ದೊಡ್ಡ ಗಿಫ್ಟ್ ನೀಡಿ ಸುದ್ದಿಯಾದವರು. ಹೈಸ್ಕೂಲಿನಲ್ಲಿ ಗಣಿತ ಮೇಷ್ಟ್ರು ಆಗಿದ್ದ ಗುರುದಯಾಲ್ ಸ್ವರೂಪ್ ಸೈನಿ ಅವರನ್ನು ಗುರುತಿಸಿ ತನ್ನ 30 ಲಕ್ಷ ರೂಪಾಯಿ ಮೌಲ್ಯದ ಒಂದು ಲಕ್ಷ ಈಕ್ವಿಟಿ ಶೇರನ್ನು ಗುರುವಿನ ಖಾತೆಗೆ ವರ್ಗಾಯಿಸಿದ್ದಾರೆ. ತಾನು ಸಣ್ಣಂದಿನಲ್ಲಿ ಕಷ್ಟಪಟ್ಟಿದ್ದಾಗ 500 ರೂಪಾಯಿ ನೀಡಿದ್ದನ್ನು ನೆನಪಲ್ಲಿ ಇಟ್ಟುಕೊಂಡಿದ್ದ ವೈದ್ಯನಾಥನ್, ಈಗ ಗುರುವಿಗೆ ಮರಳಿ ಕಾಣಿಕೆ ನೀಡಿದ್ದಾರೆ.


ಆಗ್ರಾದಲ್ಲಿರುವ ಸೈನಿಯ ಖಾತೆಗೆ ಇಷ್ಟೊಂದು ದೊಡ್ಡ ಮೊತ್ತ ವರ್ಗಾಯಿಸಲ್ಪಟ್ಟಿರುವುದನ್ನು ಬ್ಯಾಂಕ್ ಅಧಿಕಾರಿಗಳು ಸೈನಿಗೆ ತಿಳಿಸಿದ್ದಾರೆ. ಈ ವಿಚಾರ ಫೇಸ್ಬುಕ್ ನಲ್ಲಿ ವೈರಲ್ ಆಗುತ್ತಿದ್ದಂತೆ ವೈದ್ಯನಾಥನ್ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಅದ್ಭುತ, ಈ ಕಾಲದಲ್ಲಿ ಹೀಗೆ ಕಲಿಸಿದ ಗುರುವನ್ನು ನೆನಪಲ್ಲಿ ಇಟ್ಕೊಳ್ಳೋರು ಇದ್ದಾರೆ, ವೈದ್ಯನಾಥನ್ ದೊಡ್ಡ ಕಾಣಿಕೆ ನೀಡಿದ್ದಾರೆ ಎಂದು ನೆಟ್ಟಿಗರು ಶಹಭಾಷ್ ಹೇಳಿದ್ದಾರೆ. ನಿಜವಾದ ಗುರು- ಶಿಷ್ಯ ಸಂಬಂಧ ಎಂದರೆ ಇದು. ಈಗಿನ ಕಾಲದಲ್ಲಿ ಇಂಥ ಸಂಬಂಧ ಕಾಣಸಿಗುವುದು ತುಂಬ ವಿರಳ ಎಂದು ಕೆಲವರು ಹೇಳಿದರೆ, ಇನ್ನು ಕೆಲವರು, ಹೆಚ್ಚಿನ ವಿದ್ಯಾರ್ಥಿಗಳಿಗೆ ಕಷ್ಟಕಾಲದಲ್ಲಿ ನೆರವಾಗುವ ಶಿಕ್ಷಕರು ಸಿಗುವುದಿಲ್ಲ. ಹಾಗೆಯೇ ಹೆಚ್ಚಿನ ವಿದ್ಯಾರ್ಥಿಗಳು ತಾವು ದೊಡ್ಡವರಾದ ಬಳಿಕ ಗುರುಗಳನ್ನು ನೆನಪಲ್ಲಿ ಇಟ್ಟುಕೊಳ್ಳುವುದೂ ಇಲ್ಲ ಎಂದಿದ್ದಾರೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm