ಬ್ರೇಕಿಂಗ್ ನ್ಯೂಸ್
21-09-22 07:25 pm HK News Desk ದೇಶ - ವಿದೇಶ
ಶ್ರೀನಗರ, ಸೆ.21: ಜಮ್ಮು ಕಾಶ್ಮೀರದಲ್ಲಿ ಶಾಲೆಗಳಲ್ಲಿ ಭಜನೆ ಹಾಡುವುದಕ್ಕೆ ಅಲ್ಲಿನ ಸರಕಾರ ಆದೇಶ ಮಾಡಿರುವುದನ್ನು ಪಿಡಿಪಿ ನಾಯಕರು ಆಕ್ಷೇಪಿಸಿದ್ದರೆ, ನ್ಯಾಶನಲ್ ಕಾನ್ಫರೆನ್ಸ್ ನಾಯಕರು ಅದರಲ್ಲೇನು ತಪ್ಪಿದೆ ಎಂದು ಪ್ರಶ್ನೆ ಮಾಡಿದ್ದಾರೆ.
ನ್ಯಾಶನಲ್ ಕಾನ್ಫರೆನ್ಸ್ ಪಕ್ಷದ ಹಿರಿಯ ನಾಯಕ ಫಾರೂಕ್ ಅಬ್ದುಲ್ಲಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಾನು ಎರಡು ದೇಶದ ಥಿಯರಿಯನ್ನು ಒಪ್ಪುವುದಿಲ್ಲ. ಭಾರತ ಜಾತ್ಯತೀತ ದೇಶ, ಕಮ್ಯುನಲ್ ದೇಶ ಅಲ್ಲ. ನಾನು ಭಜನೆ ಮಾಡುತ್ತೇನೆ. ಭಜನೆ ಮಾಡುವುದರಿಂದ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ಹಿಂದುವೊಬ್ಬ ಅಜ್ಮೀರ್ ದರ್ಗಾಕ್ಕೆ ಬಂದಲ್ಲಿ ಆತ ಮುಸ್ಲಿಂ ಆಗುತ್ತಾನೆಯೇ ಎಂದು ಕೇಳಿದ್ದಾರೆ.

ಪಿಡಿಪಿ ಅಧ್ಯಕ್ಷೆ ಮೆಹಬೂಬ ಮುಫ್ತಿ ಜಮ್ಮು ಕಾಶ್ಮೀರ ಸರಕಾರದ ಕ್ರಮವನ್ನು ಆಕ್ಷೇಪಿಸಿದ್ದು ಅಲ್ಲಿನ ಶಾಲೆಯೊಂದರಲ್ಲಿ ರಘುಪತಿ ರಾಘವ ರಾಜಾ ರಾಮ್ ಎನ್ನುವ ಗಾಂಧೀಜಿ ಹಾಡುತ್ತಿದ್ದ ಪ್ರೀತಿಯ ಭಜನೆಯನ್ನು ಶಾಲಾ ಮಕ್ಕಳು ಮತ್ತು ಶಿಕ್ಷಕ ವರ್ಗ ಹಾಡುವ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಧಾರ್ಮಿಕ ಗುರುಗಳನ್ನು ಜೈಲಿಗಟ್ಟಿ ಜಾಮಿಯಾ ಮಸೀದಿಯನ್ನು ಮುಚ್ಚಿ ಶಾಲೆಯಲ್ಲಿ ಹಿಂದುಗಳ ಭಜನೆ ಹಾಡಿ ಎಂದು ಹೇಳುವುದು ಜಮ್ಮು ಕಾಶ್ಮೀರದ ಹಿಂದುತ್ವದ ಅಜೆಂಡಾ ಹೇರಿಕೆ ಎಂದು ಟೀಕಿಸಿದ್ದಾರೆ.
ಮಹಾತ್ಮ ಗಾಂಧೀಜಿಯ 153ನೇ ಜನ್ಮ ದಿನಾಚರಣೆಯ ಪ್ರಯುಕ್ತ ಜಮ್ಮು ಕಾಶ್ಮೀರ ಸರಕಾರ ಶಾಲೆಗಳಲ್ಲಿ ಸರಣಿ ಕಾರ್ಯಕ್ರಮ ಹಮ್ಮಿಕೊಳ್ಳಲು ಆದೇಶ ಮಾಡಿದೆ. ಅದರಂತೆ, ಶಾಲೆಗಳಲ್ಲಿ ಗಾಂಧೀಜಿ ಹಾಡುತ್ತಿದ್ದ ರಘುಪತಿ ರಾಘವ ರಾಜಾರಾಮ್ ಭಜನೆಯನ್ನೂ ಮಕ್ಕಳಿಗೆ ಹಾಡಿಸಲಾಗುತ್ತಿದೆ. ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಏರ್ಪಾಡು ಮಾಡಲಾಗಿದೆ. ಭಜನೆ ಹಾಡುವುದು ಗಾಂಧೀಜಿ ಜನ್ಮ ದಿನಾಚರಣೆಯ ಒಂದು ಭಾಗವಷ್ಟೇ ಆಗಿದೆ.

ಮೆಹಬೂಬ ಮುಫ್ತಿ ಹೇಳಿಕೆಯ ಬಗ್ಗೆ ಬಿಜೆಪಿ ಖಾರವಾಗಿ ಪ್ರತಿಕ್ರಿಯಿಸಿದ್ದು, ಯುವ ಜನರ ಮೆದುಳಿಗೆ ವಿಷ ತುಂಬುವ ಪ್ರಯತ್ನವನ್ನು ಮಾಡುತ್ತಿದ್ದಾರೆಂದು ಕಿಡಿಕಾರಿದೆ. ಜಮ್ಮು ಕಾಶ್ಮೀರ ಬಿಜೆಪಿ ಘಟಕದ ಅಧ್ಯಕ್ಷ ರವೀಂದರ್ ರೈನಾ ಹೇಳಿಕೆ ನೀಡಿದ್ದು, ಮೆಹಬೂಬ ಮುಫ್ತಿಯನ್ನು ಕಣಿವೆ ಜನರು ತಿರಸ್ಕರಿಸಿದ್ದಾರೆ. ಹೀಗಾಗಿ ಈ ರೀತಿಯ ಹೀನ ರಾಜಕೀಯ ಮಾಡಿ ಮತ್ತೆ ಅಧಿಕಾರಕ್ಕೇರಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
After PDP president Mehbooba Mufti slammed the BJP government in Jammu and Kashmir over its order of singing bhajans in schools, National Conference chief Farooq Abdullah has begged to differ.“We didn’t believe in two-nation theory. India is not communal and India is secular. I am chanting bhajan. If I am chanting bhajan, is it wrong?” Farooq Abdullah said as quoted by news agency ANI.“If a Hindu visits Ajmer Dargah, then will he or she be transformed into a Muslim?" he parried.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am