ಬ್ರೇಕಿಂಗ್ ನ್ಯೂಸ್
08-10-20 07:31 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 8: ಸುಶಾಂತ್ ಸಿಂಗ್ ಸಾವಿನ ಬಗ್ಗೆ ಆತ್ಮಹತ್ಯೆಯಲ್ಲ, ಕೊಲೆಯೆಂದು ಸುದ್ದಿ ಮಾಡಿ ಮುಖಭಂಗಕ್ಕೀಡಾಗಿರುವ ರಿಪಬ್ಲಿಕ್ ಟಿವಿ ವಿರುದ್ಧ ಮುಂಬೈ ಪೊಲೀಸರೇ ತಿರುಗಿ ಬಿದ್ದಿದ್ದಾರೆ. ರಿಪಬ್ಲಿಕ್ ಸೇರಿದಂತೆ ಮೂರು ಟಿವಿ ವಾಹಿನಿಗಳು ಟಿಆರ್ ಪಿ ಹೆಚ್ಚಿಸಿಕೊಂಡು ಆದಾಯ ಪಡೆದುಕೊಳ್ಳುವುದಕ್ಕಾಗಿ ತಂತ್ರ ಹೂಡಿದ್ದರು. ಮೋಸದ ಜಾಲದ ಮೂಲಕ ಮನೆ, ಮನೆಗೆ ತಮ್ಮ ಎಕ್ಸಿಕ್ಯೂಟಿವ್ ಗಳನ್ನು ಕಳಿಸಿ ಬಡವರಿಗೆ ಹಣಕೊಟ್ಟು ಟಿಆರ್ ಪಿ ಹೆಚ್ಚಿಸಿಕೊಳ್ಳುತ್ತಿದ್ದರು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಮುಂಬೈ ಪೊಲೀಸ್ ಕಮಿಷನರ್ ಪರಮ್ ವೀರ್ ಸಿಂಗ್, ಅರ್ನಾಬ್ ಗೋಸ್ವಾಮಿ ಒಡೆತನದ ರಿಪಬ್ಲಿಕ್ ಟಿವಿ, ಮರಾಠಿ ಭಾಷೆಯ ಫ್ಯಾಕ್ಟ್ ಮರಾಠಿ ಮತ್ತು ಬಾಕ್ಸ್ ಸಿನಿಮಾ ವಾಹಿನಿಗಳ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಮರಾಠಿ ಟಿವಿ ವಾಹಿನಿಗಳ ಇಬ್ಬರು ಮಾಲೀಕರನ್ನು ಬಂಧಿಸಲಾಗಿದೆ. ರಿಪಬ್ಲಿಕ್ ಟಿವಿ ಡೈರೆಕ್ಟರ್ ಒಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಸುಳ್ಳು ಸುದ್ದಿಗಳನ್ನು ಪ್ರಚಾರ ನೀಡುವುದಕ್ಕಾಗಿ ಮತ್ತು ತಮ್ಮದೇ ಚಾನೆಲ್ ಹಾಕುವಂತೆ ಬಡ ಮನೆಗಳ ಮಂದಿಗೆ ಹಣ ಕೊಟ್ಟು ಪ್ರೇರಿಸುತ್ತಿದ್ದರು. ಈ ಮೂಲಕ ಟಿಆರ್ ಪಿ ಹೆಚ್ಚಿರುವುದಾಗಿ ತೋರಿಸಿಕೊಂಡು ಹೆಚ್ಚು ಆದಾಯ ಬರುವ ಜಾಹೀರಾತು ಪಡೆಯುತ್ತಿದ್ದರು. ಈ ಮೂಲಕ ಹೆಚ್ಚು ಪಡೆದಿದ್ದು ತನಿಖೆಯಲ್ಲಿ ದೃಢ ಪಟ್ಟರೆ ವಾಹಿನಿಗಳ ಖಾತೆಯನ್ನು ಸೀಝ್ ಮಾಡುವುದಾಗಿ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ, ಮುಂಬೈ ಪೊಲೀಸ್ ಕಮಿಷನರ್ ಸುಳ್ಳು ಮಾಹಿತಿಗಳನ್ನು ಹೇಳುತ್ತಿದ್ದಾರೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ.
Fake TRP racket busted! Names republic TV as one of the 3 channels under scanner. People paid off to manipulate viewership numbers. 2 Accused arrested
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm