ಬ್ರೇಕಿಂಗ್ ನ್ಯೂಸ್
22-09-22 11:05 pm HK News Desk ದೇಶ - ವಿದೇಶ
ನವದೆಹಲಿ, ಸೆ.22 : ಅಖಿಲ ಭಾರತ ಇಮಾಮ್ ಸಂಘಟನೆ ಮುಖ್ಯಸ್ಥ ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು 'ರಾಷ್ಟ್ರಪಿತ' ಎಂದು ಬಣ್ಣಿಸಿದ್ದಾರೆ. ದೇಶದಲ್ಲಿ ಸೌಹಾರ್ದತೆ ನೆಲೆಸುವ ಪ್ರಯತ್ನದ ಭಾಗವಾಗಿ ಮುಸ್ಲಿಂ ನಾಯಕರನ್ನು ಭೇಟಿ ಮಾಡುತ್ತಿರುವ ಮೋಹನ್ ಭಾಗವತ್, ದೆಹಲಿಯಲ್ಲಿ ಗುರುವಾರ ಪ್ರಮುಖ ಮುಸ್ಲಿಂ ಧಾರ್ಮಿಕ ಮುಖಂಡರನ್ನು ಭೇಟಿ ಮಾಡಿದ್ದಾರೆ.
ಮೋಹನ್ ಭಾಗವತ್ ಅವರು ನನ್ನ ಆಹ್ವಾನದಂತೆ ಇಂದು ಭೇಟಿ ಮಾಡಿದ್ದರು. ಅವರು 'ರಾಷ್ಟ್ರಪಿತ' ಮತ್ತು ರಾಷ್ಟ್ರ ಋಷಿ'. ಅವರ ಭೇಟಿಯಿಂದಾಗಿ ಹೊರಗೆ ಉತ್ತಮ ಸಂದೇಶ ರವಾನೆಯಾಗಲಿದೆ. ನಾವು ದೇವರನ್ನು ಆರಾಧಿಸುವ ಮಾರ್ಗ ಬೇರೆ. ಆದರೆ ಅತಿ ದೊಡ್ಡ ಧರ್ಮವೆಂದರೆ ಅದು ಮಾನವೀಯತೆ. ದೇಶ ಮೊದಲು ಎಂಬುದರಲ್ಲಿ ನಾವು ನಂಬಿಕೆ ಇರಿಸಿದ್ದೇವೆ ಎಂದು ಉಮರ್ ಅಹ್ಮದ್ ಇಲ್ಯಾಸಿ ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ದೆಹಲಿಯಲ್ಲಿ ಮಸೀದಿ ಮತ್ತು ಮದರಸಾಕ್ಕೆ ಭೇಟಿ ನೀಡಿದ ಮೋಹನ್ ಭಾಗವತ್, ಅಖಿಲ ಭಾರತ ಇಮಾಮ್ ಸಂಘಟನೆ ಮುಖ್ಯಸ್ಥರ ಜತೆ ಮಾತುಕತೆ ನಡೆಸಿದರು. ರಾಜಧಾನಿಯ ಕಸ್ತೂರ್ಬಾ ಗಾಂಧಿ ರಸ್ತೆಯಲ್ಲಿನ ಮಸೀದಿಗೆ ತೆರಳಿದ ಅವರು, ನಂತರ ಉತ್ತರ ದಿಲ್ಲಿಯ ಅಜಾದ್ಪುರದಲ್ಲಿನ ಮದರಸ ತಾಜವೀದುಲ್ ಖುರಾನ್ಗೆ ಭೇಟಿ ನೀಡಿದರು. ಕಳೆದ ಒಂದು ತಿಂಗಳಿನಿಂದ ಮುಸ್ಲಿಂ ಬುದ್ದಿಜೀವಿಗಳ ಜತೆ ಆರೆಸ್ಸೆಸ್ ಮುಖ್ಯಸ್ಥರು ನಡೆಸುತ್ತಿರುವ ಎರಡನೇ ಭೇಟಿ ಇದಾಗಿದೆ. ಇದಕ್ಕೂ ಮುನ್ನ ಅವರು ಕೋಮು ಸೌಹಾರ್ದ ಬಲಪಡಿಸುವ ಸಂಬಂಧ ಐವರು ಮುಸ್ಲಿಂ ಬುದ್ದಿಜೀವಿಗಳನ್ನು ಭೇಟಿ ಮಾಡಿದ್ದರು.
Rashtriya Swayamsevak Sangh (RSS) chief Mohan Bhagwat met Imam Umar Ahmed Ilyasi, head of ‘All India Imam Sangathan’, at a mosque in Delhi on Thursday. The assembly befell in a closed room on the Kasturba Gandhi Marg mosque for greater than an hour. The workplace of All India Imam Group is situated right here.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm