ಬ್ರೇಕಿಂಗ್ ನ್ಯೂಸ್
09-10-20 10:26 am Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್.09 : ಏಳು ಮಂದಿ ಭಾರತೀಯ ಪ್ರಜೆಗಳನ್ನು ಆಫ್ರಿಕನ್ ದೇಶದ ಲಿಬಿಯಾದಲ್ಲಿ ಅಪಹರಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಅಪಹರಣ ಆಗಿರುವುದನ್ನು ತಿಂಗಳ ಬಳಿಕ ಭಾರತೀಯ ವಿದೇಶಾಂಗ ಇಲಾಖೆ ದೃಢಪಡಿಸಿದೆ.
ಆಂಧ್ರ ಪ್ರದೇಶ, ಬಿಹಾರ, ಗುಜರಾತ್ ಮತ್ತು ಉತ್ತರ ಪ್ರದೇಶಕ್ಕೆ ಸೇರಿದ ಏಳು ಮಂದಿ ಕಳೆದ ತಿಂಗಳು ಅಪಹರಣಕ್ಕೆ ಒಳಗಾಗಿದ್ದರು. ಈ ಕುರಿತು ಭಾರತ ಸರ್ಕಾರ ಲಿಬಿಯಾ ಸರಕಾರದ ಜೊತೆ ನಿರಂತರ ಸಂಪರ್ಕದಲ್ಲಿರುವುದಾಗಿ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಮಾಹಿತಿ ನೀಡಿದ್ದಾರೆ.
ಕಳೆದ ಸೆಪ್ಟೆಂಬರ್ 14 ರಂದು ಭಾರತಕ್ಕೆ ಬರುವುದಕ್ಕಾಗಿ ಏಳು ಮಂದಿ ಟ್ರಿಪೊಲಿ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ಈ ವೇಳೆ, ಅಶ್ವೆರಿಫ್ ಎಂಬ ಸ್ಥಳದಲ್ಲಿ ಭಾರತೀಯ ಪ್ರಜೆಗಳನ್ನು ಅಪಹರಿಸಲಾಗಿದೆ.
ಭಾರತೀಯ ಪ್ರಜೆಗಳು ನಿರ್ಮಾಣ ಮತ್ತು ತೈಲ ಪೂರೈಕೆ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದರು. ಅಪಹರಣಕ್ಕೀಡಾದ ಯುವಕರ ಕುಟುಂಬ ಸದಸ್ಯರು ಮಾಹಿತಿ ತಿಳಿದು ವಿದೇಶಾಂಗ ಇಲಾಖೆಯನ್ನು ಸಂಪರ್ಕಿಸಿದ್ದರು. ಲಿಬಿಯಾ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿ, ಶೀಘ್ರದಲ್ಲಿ ಭಾರತೀಯರ ಬಿಡುಗಡೆಗೆ ಶ್ರಮಿಸುತ್ತೇವೆ ಎಂದು ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm