ಬ್ರೇಕಿಂಗ್ ನ್ಯೂಸ್
28-09-22 08:32 am HK News Desk ದೇಶ - ವಿದೇಶ
ನವದೆಹಲಿ, ಸೆ.28: ದೇಶಾದ್ಯಂತ ಎನ್ ಐಎ ಅಧಿಕಾರಿಗಳ ದಾಳಿ ಬೆನ್ನಲ್ಲೇ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ ಸೇರಿ ಎಂಟು ಸಹವರ್ತಿ ಸಂಘಟನೆಗಳನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಪಿಎಫ್ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆಗಳೆಂದು ಘೋಷಿಸಿದೆ.
ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ, ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಕೋಟ್ಯಂತರ ದೇಣಿಗೆ ಸಂಗ್ರಹ ಆರೋಪದಡಿ ದೇಶವ್ಯಾಪಿ ಎನ್ಐಎ ದಾಳಿ ನಡೆಸಿತ್ತು. ದಾಳಿ ಸಂದರ್ಭದಲ್ಲಿ ದೇಶದ್ರೋಹಿ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದು ಸಾಬೀತಾಗಿದ್ದರಿಂದ ಯುಎಪಿಎ ಕಾಯ್ದೆಯಡಿ ಸಂಘಟನೆಗಳ ವಿರುದ್ಧ ಪ್ರಕರಣ ದಾಖಲಿಸಿತ್ತು.
ಪಾಪ್ಯುಲರ್ ಫ್ರಂಟ್ ಸಹವರ್ತಿ ಸಂಸ್ಥೆಗಳಾದ ರಿಹಾಬ್ ಇಂಡಿಯಾ ಫೌಂಡೇಶನ್(RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ(CFI), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್(AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್(NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್, ಕೇರಳ ಇವುಗಳನ್ನು ನಿಷೇಧಿಸಲಾಗಿದೆ.
ಪಿಎಫ್ಐ ನಿಷೇಧಕ್ಕಾಗಿ ಒತ್ತಾಯಿಸಿ ರಾಜ್ಯಗಳಿಂದ ಬಂದಿದ್ದ ಶಿಫಾರಸು, ಕೇಂದ್ರೀಯ ತನಿಖಾ ಸಂಸ್ಥೆಗಳ ವರದಿ ಆಧರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸೆಪ್ಟೆಂಬರ್ 22 ಮತ್ತು ಸೆಪ್ಟೆಂಬರ್ 27 ರಂದು ರಾಷ್ಟ್ರೀಯ ತನಿಖಾ ಸಂಸ್ಥೆ(NIA), ಜಾರಿ ನಿರ್ದೇಶನಾಲಯ(ED) ಮತ್ತು ರಾಜ್ಯ ಪೊಲೀಸರು PFI ಕಚೇರಿ ಮತ್ತು ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿದ್ದರು. ಮೊದಲ ಸುತ್ತಿನಲ್ಲಿ 106 ಮಂದಿ ಪ್ರಮುಖ ನಾಯಕರನ್ನು ಬಂಧಿಸಲಾಗಿತ್ತು. ಎರಡನೇ ಹಂತದಲ್ಲಿ 247 ಮಂದಿಯನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಲಾಗಿತ್ತು.
The Centre banned PFI and several other associated organisations for five years. In the notification, the Union home ministry said some PFI activists joined theIslamic State of Iraq and Syria and took part in terror activities there. In India, it engaged in violent acts like chopping off limb of a college professor, the MHA said.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
17-01-26 01:47 pm
HK News Desk
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm