ಬ್ರೇಕಿಂಗ್ ನ್ಯೂಸ್
09-10-20 01:36 pm Headline Karnataka News Network ದೇಶ - ವಿದೇಶ
ಬೆಂಗಳೂರು, ಅಕ್ಟೋಬರ್ 09: ರಾಜ್ಯದಲ್ಲಿ ಒಂದೆಡೆ ಶಾಲೆ ಆರಂಭಿಸಲು ತಯಾರಿ ನಡೆಯುತ್ತಿದ್ದರೆ, ಇದೇ ವೇಳೆ ರಾಜ್ಯಾದ್ಯಂತ 100ಕ್ಕೂ ಹೆಚ್ಚು ಶಿಕ್ಷಕರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಹತ್ತು ಮಂದಿ ಶಿಕ್ಷಕರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಬಳ್ಳಾರಿ ನಗರ ಭಾಗದಲ್ಲಿ ಐದು ಮತ್ತು ಗ್ರಾಮಾಂತರ ಭಾಗದಲ್ಲಿ ಐದು ಮಂದಿ ಸೋಂಕಿನಿಂದ ಸಾವು ಕಂಡಿರುವುದನ್ನು ಅಲ್ಲಿನ ಶಿಕ್ಷಣಾಧಿಕಾರಿಗಳು ದೃಢಪಡಿಸಿದ್ದಾರೆ. ಕಳೆದ ಎರಡು ತಿಂಗಳಿನಿಂದ ಬಳ್ಳಾರಿ ಜಿಲ್ಲೆಯಲ್ಲಿ ವಿದ್ಯಾಗಮ ಯೋಜನೆಯಡಿ ಶಿಕ್ಷಣ ಇಲಾಖೆಯಿಂದ ವಠಾರ ಶಾಲೆ ಆರಂಭಿಸಲಾಗಿತ್ತು.
ಇನ್ನು ಬಾಗಲಕೋಟೆ ಜಿಲ್ಲೆಯಲ್ಲೂ 17 ಜನ ಶಿಕ್ಷಕರು ಹೆಮ್ಮಾರಿಗೆ ಬಲಿಯಾಗಿದ್ದಾರೆ. ವಿದ್ಯಾಗಮ ಯೋಜನೆಯಡಿ ವಠಾರ ಶಾಲೆ ಆರಂಭದ ನಂತರ ಆರು ಶಿಕ್ಷಕರು ಬಲಿಯಾಗಿದ್ದಾರೆ. ಯೋಜನೆ ಆರಂಭಕ್ಕೂ ಮುನ್ನ 11 ಜನ ಶಿಕ್ಷಕರು ಬಲಿಯಾಗಿದ್ದಾರೆ. ಐವತ್ತಕ್ಕೂ ಹೆಚ್ಚು ಮಂದಿ ಸೋಂಕಿಗೆ ಒಳಗಾಗಿ ಗುಣಮುಖರಾಗಿದ್ದಾರೆ ಎಂದು ಶಿಕ್ಷಣಾಧಿಕಾರಿ ಮಾಹಿತಿ ನೀಡಿದ್ದಾರೆ.
ಇನ್ನು ಬೆಳಗಾವಿಯಲ್ಲಿ ಕೊರೊನಾ ಸೋಂಕಿನಿಂದ 40ಕ್ಕೂ ಹೆಚ್ಚು ಶಿಕ್ಷಕರು ಬಲಿಯಾಗಿದ್ದಾರೆಂದು ಅಲ್ಲಿನ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ಬೆಳಗಾವಿ ಶೈಕ್ಷಣಿಕ ವಿಭಾಗದಲ್ಲಿ 21 ಹಾಗೂ ಚಿಕ್ಕೋಡಿ ವಿಭಾಗದಲ್ಲಿ 19 ಮಂದಿ ಬಲಿಯಾಗಿದ್ದಾರೆ. ಒಟ್ಟು 120 ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಬಹುಪಾಲು ಶಿಕ್ಷಕರು ಗುಣಮುಖರಾಗಿದ್ದಾರೆ ಎಂದು ಬೆಳಗಾವಿ ಡಿಡಿಪಿಐ ಪುಂಡಲೀಕ್ ಮರಾಠೆ ಮಾಹಿತಿ ನೀಡಿದ್ದಾರೆ. ಇದೇ ವೇಳೆ, ಕಲಬುರಗಿಯಲ್ಲಿ 11 ಶಿಕ್ಷಕರು ಬಲಿಯಾಗಿದ್ದಾರೆಂದು ಶಿಕ್ಷಣ ಇಲಾಖೆಯಿಂದ ಮಾಹಿತಿ ಲಭಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಯಾವುದೇ ಶಿಕ್ಷಕರು ಬಲಿಯಾಗಿಲ್ಲ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ಜಿ. ಮಲ್ಲೇಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಉಡುಪಿಯಲ್ಲಿ ಓರ್ವ ಶಿಕ್ಷಕಿ ಬಲಿಯಾಗಿದ್ದರೆ, ಕೋಲಾರದಲ್ಲಿ ಇಬ್ಬರು ಬಲಿಯಾಗಿದ್ದಾರೆ. ವಿದ್ಯಾಗಮ ಯೋಜನೆಯಡಿ ಶಿಕ್ಷಕರು ಆಸುಪಾಸಿನ ಪ್ರದೇಶಗಳಿಗೆ ತೆರಳಿ, ಪರಿಸರದ ವಿದ್ಯಾರ್ಥಿಗಳನ್ನು ಸೇರಿಸಿ ಪಾಠ ಮಾಡಲು ಸೂಚಿಸಲಾಗಿತ್ತು. ಗ್ರಾಮಾಂತರ ಪ್ರದೇಶದ ಸರಕಾರಿ ಶಾಲೆಗಳಲ್ಲಿ ಇಂಥ ಯೋಜನೆ ಜಾರಿಯಾಗಿತ್ತು. ಇದೇ ಈಗ ಮುಳುವಾಯಿತಾ ಎನ್ನುವ ಲೆಕ್ಕಾಚಾರ ನಡೆದಿದೆ. ಆದರೆ, ಉತ್ತರ ಕರ್ನಾಟಕಕ್ಕೆ ಹೋಲಿಸಿದರೆ ದಕ್ಷಿಣ ಕರ್ನಾಟಕದಲ್ಲಿ ಶಿಕ್ಷಕರು ಬಲಿಯಾಗಿದ್ದು ಕಡಿಮೆ.
100 Teachers have been dead so far after being tested positive to Coronavirus. The death rate is higher in Uttar Karnataka substantiates report.
02-05-25 01:40 pm
Bangalore Correspondent
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 03:10 pm
Mangalore Correspondent
Udupi crime, Attempt, Suhas Shetty Murder: ಉಡ...
02-05-25 12:44 pm
Suhas Shetty Murder, Liquor Ban: ಸುಹಾಸ್ ಶೆಟ್ಟ...
02-05-25 12:23 pm
Suhas Shetty Murder, Bajpe, Mangalore: ಟಾರ್ಗೆ...
02-05-25 03:52 am
Suhas Shetty murder, Mangalore Bandh: ಸುಹಾಸ್...
02-05-25 03:29 am
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm