ಬ್ರೇಕಿಂಗ್ ನ್ಯೂಸ್
09-10-20 01:36 pm Headline Karnataka News Network ದೇಶ - ವಿದೇಶ
ಬೆಂಗಳೂರು, ಅಕ್ಟೋಬರ್ 09: ರಾಜ್ಯದಲ್ಲಿ ಒಂದೆಡೆ ಶಾಲೆ ಆರಂಭಿಸಲು ತಯಾರಿ ನಡೆಯುತ್ತಿದ್ದರೆ, ಇದೇ ವೇಳೆ ರಾಜ್ಯಾದ್ಯಂತ 100ಕ್ಕೂ ಹೆಚ್ಚು ಶಿಕ್ಷಕರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಹತ್ತು ಮಂದಿ ಶಿಕ್ಷಕರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಬಳ್ಳಾರಿ ನಗರ ಭಾಗದಲ್ಲಿ ಐದು ಮತ್ತು ಗ್ರಾಮಾಂತರ ಭಾಗದಲ್ಲಿ ಐದು ಮಂದಿ ಸೋಂಕಿನಿಂದ ಸಾವು ಕಂಡಿರುವುದನ್ನು ಅಲ್ಲಿನ ಶಿಕ್ಷಣಾಧಿಕಾರಿಗಳು ದೃಢಪಡಿಸಿದ್ದಾರೆ. ಕಳೆದ ಎರಡು ತಿಂಗಳಿನಿಂದ ಬಳ್ಳಾರಿ ಜಿಲ್ಲೆಯಲ್ಲಿ ವಿದ್ಯಾಗಮ ಯೋಜನೆಯಡಿ ಶಿಕ್ಷಣ ಇಲಾಖೆಯಿಂದ ವಠಾರ ಶಾಲೆ ಆರಂಭಿಸಲಾಗಿತ್ತು.
ಇನ್ನು ಬಾಗಲಕೋಟೆ ಜಿಲ್ಲೆಯಲ್ಲೂ 17 ಜನ ಶಿಕ್ಷಕರು ಹೆಮ್ಮಾರಿಗೆ ಬಲಿಯಾಗಿದ್ದಾರೆ. ವಿದ್ಯಾಗಮ ಯೋಜನೆಯಡಿ ವಠಾರ ಶಾಲೆ ಆರಂಭದ ನಂತರ ಆರು ಶಿಕ್ಷಕರು ಬಲಿಯಾಗಿದ್ದಾರೆ. ಯೋಜನೆ ಆರಂಭಕ್ಕೂ ಮುನ್ನ 11 ಜನ ಶಿಕ್ಷಕರು ಬಲಿಯಾಗಿದ್ದಾರೆ. ಐವತ್ತಕ್ಕೂ ಹೆಚ್ಚು ಮಂದಿ ಸೋಂಕಿಗೆ ಒಳಗಾಗಿ ಗುಣಮುಖರಾಗಿದ್ದಾರೆ ಎಂದು ಶಿಕ್ಷಣಾಧಿಕಾರಿ ಮಾಹಿತಿ ನೀಡಿದ್ದಾರೆ.


ಇನ್ನು ಬೆಳಗಾವಿಯಲ್ಲಿ ಕೊರೊನಾ ಸೋಂಕಿನಿಂದ 40ಕ್ಕೂ ಹೆಚ್ಚು ಶಿಕ್ಷಕರು ಬಲಿಯಾಗಿದ್ದಾರೆಂದು ಅಲ್ಲಿನ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ಬೆಳಗಾವಿ ಶೈಕ್ಷಣಿಕ ವಿಭಾಗದಲ್ಲಿ 21 ಹಾಗೂ ಚಿಕ್ಕೋಡಿ ವಿಭಾಗದಲ್ಲಿ 19 ಮಂದಿ ಬಲಿಯಾಗಿದ್ದಾರೆ. ಒಟ್ಟು 120 ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಬಹುಪಾಲು ಶಿಕ್ಷಕರು ಗುಣಮುಖರಾಗಿದ್ದಾರೆ ಎಂದು ಬೆಳಗಾವಿ ಡಿಡಿಪಿಐ ಪುಂಡಲೀಕ್ ಮರಾಠೆ ಮಾಹಿತಿ ನೀಡಿದ್ದಾರೆ. ಇದೇ ವೇಳೆ, ಕಲಬುರಗಿಯಲ್ಲಿ 11 ಶಿಕ್ಷಕರು ಬಲಿಯಾಗಿದ್ದಾರೆಂದು ಶಿಕ್ಷಣ ಇಲಾಖೆಯಿಂದ ಮಾಹಿತಿ ಲಭಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಯಾವುದೇ ಶಿಕ್ಷಕರು ಬಲಿಯಾಗಿಲ್ಲ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ಜಿ. ಮಲ್ಲೇಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಉಡುಪಿಯಲ್ಲಿ ಓರ್ವ ಶಿಕ್ಷಕಿ ಬಲಿಯಾಗಿದ್ದರೆ, ಕೋಲಾರದಲ್ಲಿ ಇಬ್ಬರು ಬಲಿಯಾಗಿದ್ದಾರೆ. ವಿದ್ಯಾಗಮ ಯೋಜನೆಯಡಿ ಶಿಕ್ಷಕರು ಆಸುಪಾಸಿನ ಪ್ರದೇಶಗಳಿಗೆ ತೆರಳಿ, ಪರಿಸರದ ವಿದ್ಯಾರ್ಥಿಗಳನ್ನು ಸೇರಿಸಿ ಪಾಠ ಮಾಡಲು ಸೂಚಿಸಲಾಗಿತ್ತು. ಗ್ರಾಮಾಂತರ ಪ್ರದೇಶದ ಸರಕಾರಿ ಶಾಲೆಗಳಲ್ಲಿ ಇಂಥ ಯೋಜನೆ ಜಾರಿಯಾಗಿತ್ತು. ಇದೇ ಈಗ ಮುಳುವಾಯಿತಾ ಎನ್ನುವ ಲೆಕ್ಕಾಚಾರ ನಡೆದಿದೆ. ಆದರೆ, ಉತ್ತರ ಕರ್ನಾಟಕಕ್ಕೆ ಹೋಲಿಸಿದರೆ ದಕ್ಷಿಣ ಕರ್ನಾಟಕದಲ್ಲಿ ಶಿಕ್ಷಕರು ಬಲಿಯಾಗಿದ್ದು ಕಡಿಮೆ.
100 Teachers have been dead so far after being tested positive to Coronavirus. The death rate is higher in Uttar Karnataka substantiates report.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm