ಬ್ರೇಕಿಂಗ್ ನ್ಯೂಸ್
09-10-20 01:36 pm Headline Karnataka News Network ದೇಶ - ವಿದೇಶ
ಬೆಂಗಳೂರು, ಅಕ್ಟೋಬರ್ 09: ರಾಜ್ಯದಲ್ಲಿ ಒಂದೆಡೆ ಶಾಲೆ ಆರಂಭಿಸಲು ತಯಾರಿ ನಡೆಯುತ್ತಿದ್ದರೆ, ಇದೇ ವೇಳೆ ರಾಜ್ಯಾದ್ಯಂತ 100ಕ್ಕೂ ಹೆಚ್ಚು ಶಿಕ್ಷಕರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಹತ್ತು ಮಂದಿ ಶಿಕ್ಷಕರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಬಳ್ಳಾರಿ ನಗರ ಭಾಗದಲ್ಲಿ ಐದು ಮತ್ತು ಗ್ರಾಮಾಂತರ ಭಾಗದಲ್ಲಿ ಐದು ಮಂದಿ ಸೋಂಕಿನಿಂದ ಸಾವು ಕಂಡಿರುವುದನ್ನು ಅಲ್ಲಿನ ಶಿಕ್ಷಣಾಧಿಕಾರಿಗಳು ದೃಢಪಡಿಸಿದ್ದಾರೆ. ಕಳೆದ ಎರಡು ತಿಂಗಳಿನಿಂದ ಬಳ್ಳಾರಿ ಜಿಲ್ಲೆಯಲ್ಲಿ ವಿದ್ಯಾಗಮ ಯೋಜನೆಯಡಿ ಶಿಕ್ಷಣ ಇಲಾಖೆಯಿಂದ ವಠಾರ ಶಾಲೆ ಆರಂಭಿಸಲಾಗಿತ್ತು.
ಇನ್ನು ಬಾಗಲಕೋಟೆ ಜಿಲ್ಲೆಯಲ್ಲೂ 17 ಜನ ಶಿಕ್ಷಕರು ಹೆಮ್ಮಾರಿಗೆ ಬಲಿಯಾಗಿದ್ದಾರೆ. ವಿದ್ಯಾಗಮ ಯೋಜನೆಯಡಿ ವಠಾರ ಶಾಲೆ ಆರಂಭದ ನಂತರ ಆರು ಶಿಕ್ಷಕರು ಬಲಿಯಾಗಿದ್ದಾರೆ. ಯೋಜನೆ ಆರಂಭಕ್ಕೂ ಮುನ್ನ 11 ಜನ ಶಿಕ್ಷಕರು ಬಲಿಯಾಗಿದ್ದಾರೆ. ಐವತ್ತಕ್ಕೂ ಹೆಚ್ಚು ಮಂದಿ ಸೋಂಕಿಗೆ ಒಳಗಾಗಿ ಗುಣಮುಖರಾಗಿದ್ದಾರೆ ಎಂದು ಶಿಕ್ಷಣಾಧಿಕಾರಿ ಮಾಹಿತಿ ನೀಡಿದ್ದಾರೆ.


ಇನ್ನು ಬೆಳಗಾವಿಯಲ್ಲಿ ಕೊರೊನಾ ಸೋಂಕಿನಿಂದ 40ಕ್ಕೂ ಹೆಚ್ಚು ಶಿಕ್ಷಕರು ಬಲಿಯಾಗಿದ್ದಾರೆಂದು ಅಲ್ಲಿನ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ಬೆಳಗಾವಿ ಶೈಕ್ಷಣಿಕ ವಿಭಾಗದಲ್ಲಿ 21 ಹಾಗೂ ಚಿಕ್ಕೋಡಿ ವಿಭಾಗದಲ್ಲಿ 19 ಮಂದಿ ಬಲಿಯಾಗಿದ್ದಾರೆ. ಒಟ್ಟು 120 ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಬಹುಪಾಲು ಶಿಕ್ಷಕರು ಗುಣಮುಖರಾಗಿದ್ದಾರೆ ಎಂದು ಬೆಳಗಾವಿ ಡಿಡಿಪಿಐ ಪುಂಡಲೀಕ್ ಮರಾಠೆ ಮಾಹಿತಿ ನೀಡಿದ್ದಾರೆ. ಇದೇ ವೇಳೆ, ಕಲಬುರಗಿಯಲ್ಲಿ 11 ಶಿಕ್ಷಕರು ಬಲಿಯಾಗಿದ್ದಾರೆಂದು ಶಿಕ್ಷಣ ಇಲಾಖೆಯಿಂದ ಮಾಹಿತಿ ಲಭಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಯಾವುದೇ ಶಿಕ್ಷಕರು ಬಲಿಯಾಗಿಲ್ಲ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ಜಿ. ಮಲ್ಲೇಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಉಡುಪಿಯಲ್ಲಿ ಓರ್ವ ಶಿಕ್ಷಕಿ ಬಲಿಯಾಗಿದ್ದರೆ, ಕೋಲಾರದಲ್ಲಿ ಇಬ್ಬರು ಬಲಿಯಾಗಿದ್ದಾರೆ. ವಿದ್ಯಾಗಮ ಯೋಜನೆಯಡಿ ಶಿಕ್ಷಕರು ಆಸುಪಾಸಿನ ಪ್ರದೇಶಗಳಿಗೆ ತೆರಳಿ, ಪರಿಸರದ ವಿದ್ಯಾರ್ಥಿಗಳನ್ನು ಸೇರಿಸಿ ಪಾಠ ಮಾಡಲು ಸೂಚಿಸಲಾಗಿತ್ತು. ಗ್ರಾಮಾಂತರ ಪ್ರದೇಶದ ಸರಕಾರಿ ಶಾಲೆಗಳಲ್ಲಿ ಇಂಥ ಯೋಜನೆ ಜಾರಿಯಾಗಿತ್ತು. ಇದೇ ಈಗ ಮುಳುವಾಯಿತಾ ಎನ್ನುವ ಲೆಕ್ಕಾಚಾರ ನಡೆದಿದೆ. ಆದರೆ, ಉತ್ತರ ಕರ್ನಾಟಕಕ್ಕೆ ಹೋಲಿಸಿದರೆ ದಕ್ಷಿಣ ಕರ್ನಾಟಕದಲ್ಲಿ ಶಿಕ್ಷಕರು ಬಲಿಯಾಗಿದ್ದು ಕಡಿಮೆ.
100 Teachers have been dead so far after being tested positive to Coronavirus. The death rate is higher in Uttar Karnataka substantiates report.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm