ಬ್ರೇಕಿಂಗ್ ನ್ಯೂಸ್
02-10-22 05:42 pm HK News Desk ದೇಶ - ವಿದೇಶ
ಕಾಸರಗೋಡು, ಅ.2: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾಸರಗೋಡು ಜಿಲ್ಲಾ ಘಟಕದ ಹೆಸರಲ್ಲಿ ಕಾರ್ಯಾಚರಿಸುತ್ತಿದ್ದ ನಾಯಮ್ಮಾರಮೂಲೆಯಲ್ಲಿದ್ದ ಕಚೇರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬೀಗ ಜಡಿದು ಮೊಹರು ಹಾಕಿದ್ದಾರೆ. ಅಲ್ಲದೆ, ಪಿಎಫ್ಐ ನಾಯಕರು ಸಹಿತ ಜಿಲ್ಲೆಯ ಹಲವಾರು ಮಂದಿ ಸದಸ್ಯರಾಗಿದ್ದ ನೀರಂ ಚಾರಿಟೇಬಲ್ ಟ್ರಸ್ಟಿಗೆ ಸೇರಿದ ಕಚೇರಿಗೂ ಬೀಗ ಹಾಕಲಾಗಿದೆ.
ಕಾಸರಗೋಡು ನಗರ ಹೊರವಲಯದ ಚೆಂಗಳ ಪಂಚಾಯತ್ ಏರಿಯಾದ ಪೆರುಂಬಳ ಕಡವು ಸುತುವೆ ಬಳಿಯಿದ್ದ ಚಂದ್ರಗಿರಿ ಚಾರಿಟೇಬಲ್ ಟ್ರಸ್ಟ್ ಹೆಸರಿನ ಪಿಎಫ್ಐ ಕಚೇರಿಗೂ ಬೀಗ ಹಾಕಿ ಮೊಹರು ಹಾಕಲಾಗಿದೆ. ಇದಲ್ಲದೆ, ಕೇಂದ್ರ ಸರಕಾರ ಇತ್ತೀಚೆಗೆ ನಿಷೇಧಿಸಿರುವ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳ ಬಗ್ಗೆ ಮಾಹಿತಿಗಳಿದ್ದ ನೋಟೀಸನ್ನು ಕಚೇರಿಯ ಬಾಗಿಲಿಗೆ ಅಂಟಿಸಲಾಗಿದೆ.
ಎನ್ಐಎ ಕೊಚ್ಚಿ ಘಟಕದ ಎಸ್ಪಿ ಉಮೇಶ್ ರಾಯ್ ನೇತೃತ್ವದ ತಂಡ ಇಲ್ಲಿಗೆ ಆಗಮಿಸಿದ್ದು, ನೋಟೀಸ್ ಅಂಟಿಸಿ ಕಚೇರಿಗೆ ಬೀಗ ಹಾಕಿದೆ. ಈ ವೇಳೆ, ಇಬ್ಬರು ತಹಸೀಲ್ದಾರರು, ಡಿವೈಎಸ್ಪಿ ವಿವಿ ಮನೋಜ್, ವಿದ್ಯಾನಗರ ಪೊಲೀಸ್ ಇನ್ಸ್ ಪೆಕ್ಟರ್ ಅನೂಪ್ ಕುಮಾರ್ ಉಪಸ್ಥಿತರಿದ್ದರು. ಎನ್ಐಎ ಸೂಚನೆಯಂತೆ ಹೊಸದುರ್ಗ ಡಿವೈಎಸ್ಪಿ ಬಾಲಕೃಷ್ಣನ್ ನಾಯರ್, ಚಂದೇರ ಪೊಲೀಸ್ ಇನ್ ಸ್ಪೆಕ್ಟರ್ ಪಿ. ನಾರಾಯಣನ್ ನೇತೃತ್ವದ ಪೊಲೀಸರು ಪಡನ್ನ ಎಂಬಲ್ಲಿದ್ದ ನೀರಂ ಚಾರಿಟೇಬಲ್ ಟ್ರಸ್ಟಿಗೂ ಬೀಗ ಹಾಕಿದ್ದಾರೆ. ಪಡನ್ನ ಹೈಸ್ಕೂಲ್ ಸಮೀಪದ ಕಟ್ಟಡದಲ್ಲಿ ನಾಮಫಲಕ ಇಲ್ಲದೆ ನೀರ ಚಾರಿಟೇಬಲ್ ಟ್ರಸ್ಟ್ ಕಚೇರಿ ಕಾರ್ಯಾಚರಿಸುತ್ತಿತ್ತು. ಎನ್ಐಎ ಬಂಧಿಸಿರುವ ಪಿಎಫ್ಐ ಜಿಲ್ಲಾಧ್ಯಕ್ಷ ತೃಕ್ಕರಿಪುರ ಮೂಲದ ಸಿಟಿ ಸುಲೇಮಾನ್ ಸೇರಿ ಕಾಸರಗೋಡಿನ ಹಲವು ಪ್ರಮುಖರು ಟ್ರಸ್ಟಿನಲ್ಲಿ ಸದಸ್ಯರಾಗಿದ್ದರೆಂದು ಪೊಲೀಸರು ತಿಳಿಸಿದ್ದಾರೆ.
Following the Central government order to ban Popular Front of India, offices were closed and sealed in Kannur and Kasaragod district.
12-10-25 08:05 pm
Bangalore Correspondent
ಯಾವ ಸಂಪುಟ ವಿಸ್ತರಣೆಯೂ ಇಲ್ಲ, ಎಲ್ಲ ಗಾಳಿ ಸುದ್ದಿ ಅ...
11-10-25 11:03 pm
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
12-10-25 06:53 pm
Mangalore Correspondent
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
ಅಫ್ಘಾನ್ ಸಚಿವನಿಂದ ಭಾರತದಲ್ಲಿ ಮಹಿಳೆಯರಿಗೆ ಅವಮಾನ ;...
12-10-25 05:02 pm
Girish Mattannavar Mocks Dr. Mahabala Shetty:...
11-10-25 10:24 pm
Malayalam actor Jayakrishnan Arrest, Mangalor...
11-10-25 07:18 pm
12-10-25 03:52 pm
Mangalore Correspondent
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm