ಬ್ರೇಕಿಂಗ್ ನ್ಯೂಸ್
04-10-22 05:55 pm HK News Desk ದೇಶ - ವಿದೇಶ
ನವದೆಹಲಿ, ಅ.4: ಉತ್ತರಾಖಂಡದಲ್ಲಿ ದಿಢೀರ್ ಹಿಮಾಪಾತ ಉಂಟಾಗಿದ್ದು ಹತ್ತು ಮಂದಿ ಪರ್ವತಾರೋಹಿಗಳು ಸಾವು ಕಂಡಿದ್ದಾರೆ. ಉತ್ತರಾಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯ ದ್ರೌಪದಿ ಕಾ ದಂಡ್ ಎನ್ನುವ ಶಿಖರದಲ್ಲಿ ಘಟನೆ ಸಂಭವಿಸಿದೆ.
ಪರ್ವತಾರೋಹಣದ ಬಗ್ಗೆ ತರಬೇತಿ ನೀಡುವ ಉತ್ತರಾಖಂಡದ ನೆಹರು ಇನ್ ಸ್ಟಿಟ್ಯೂಟ್ ಕೇಂದ್ರಕ್ಕೆ ಸೇರಿದ 34 ಮಂದಿ ಶಿಬರಾರ್ಥಿಗಳು ಮತ್ತು ಏಳು ಮಂದಿ ಶಿಕ್ಷಕರು ಸೇರಿ ತರಬೇತಿಗಾಗಿ ತೆರಳಿದ್ದರು. ಸೋಮವಾರ ಬೆಳಗ್ಗೆ ದಿಢೀರ್ ಹಿಮಪಾತ ಉಂಟಾಗಿದ್ದು, ಹತ್ತಕ್ಕೂ ಹೆಚ್ಚು ಮಂದಿ ಕೊಚ್ಚಿ ಹೋಗಿದ್ದಾರೆ. ಈ ಪೈಕಿ ನಾಲ್ಕು ಮಂದಿಯ ಶವ ಸಿಕ್ಕಿದೆ ಎಂದು ನೆಹರು ಇನ್ ಸ್ಟಿಟ್ಯೂಟ್ ಕೇಂದ್ರದ ಪ್ರಿನ್ಸಿಪಾಲ್ ಕರ್ನಲ್ ಅಮಿತ್ ಬಿಷ್ತ್ ತಿಳಿಸಿದ್ದಾರೆ.

ಕರ್ನಾಟಕದ ನಿವಾಸಿಗಳು ಸೇರಿದಂತೆ ವಿವಿಧ ರಾಜ್ಯಗಳ ಯುವ ಪರ್ವತಾರೋಹಿಗಳು ಚಾರಣದಲ್ಲಿದ್ದರು. 29 ಮಂದಿ ಹಿಮದ ನಡುವೆ ಸಿಕ್ಕಿಬಿದ್ದಿದ್ದಾರೆ ಎನ್ನಲಾಗುತ್ತಿದೆ. ಮೃತಪಟ್ಟವರು ಯಾರು, ಎಲ್ಲಿಯವರು ಅನ್ನೋದು ತಿಳಿದುಬಂದಿಲ್ಲ. ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. 13 ಸಾವಿರ ಅಡಿ ಎತ್ತರದಲ್ಲಿ ಘಟನೆ ಸಂಭವಿಸಿದ್ದು, ಗಾಯಾಳು ಮತ್ತು ಮೃತರನ್ನು ಹೆಲಿಕಾಪ್ಟರ್ ಮೂಲಕ ಮೈಥಿಲಿ ಹೆಲಿಪ್ಯಾಡ್ ತರಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜೊತೆಗೆ ಮಾತನಾಡಿದ್ದು ಸೇನೆಯ ನೆರವು ಕೇಳಿದ್ದಾರೆ. ಇಂಡೋ ಟಿಬೆಟ್ ಫೋರ್ಸ್ ಮತ್ತು ಎನ್ ಡಿಆರ್ ಎಫ್ ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ ಎಂದು ಧಾಮಿ ತಿಳಿಸಿದ್ದಾರೆ.
Bodies of four mountaineers were found in an avalanche at Mount Draupadi Ka Danda – II peak in Uttarakhand’s Uttarkashi district on Tuesday, NIM Principal Colonel Amit Bisht said. A team of 34 trainee mountaineers and seven instructors from the Nehru Institute of Mountaineering (NIM) was caught in an avalanche while returning, NIM Principal
11-03-26 11:48 am
HK News Staffer
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 11:54 am
HK News Staffer
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am