ಬ್ರೇಕಿಂಗ್ ನ್ಯೂಸ್
06-10-22 01:09 pm HK News Desk ದೇಶ - ವಿದೇಶ
ಕ್ಯಾಲಿಫೋರ್ನಿಯಾ, ಅ. 6: ಅಮೆರಿಕದ ಕ್ಯಾಲಿಫೋರ್ನಿಯಾ ನಗರದಲ್ಲಿ ಅಪಹರಣಕ್ಕೀಡಾಗಿದ್ದ ಭಾರತ ಮೂಲದ ಕುಟುಂಬದ ನಾಲ್ವರು ಸದಸ್ಯರನ್ನು ಕೊಲೆ ಮಾಡಲಾಗಿದ್ದು ಹಣ್ಣಿನ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಎಂಟು ತಿಂಗಳ ಹೆಣ್ಣು ಮಗುವನ್ನೂ ನಿರ್ದಯವಾಗಿ ಕೊಲೆ ಮಾಡಲಾಗಿದೆ.
ಎಂಟು ತಿಂಗಳ ಮಗು ಆರೂಹಿ ಧೇರಿ ಮತ್ತು ಆಕೆಯ ಪೋಷಕರಾದ 27 ವರ್ಷದ ಜಸ್ಲೀನ್ ಕೌರ್ ಮತ್ತು 36 ವರ್ಷದ ಜಸ್ದೀಪ್ ಸಿಂಗ್ ಮತ್ತು ಸಂಬಂಧಿ 39 ವರ್ಷದ ಅಮನದೀಪ್ ಸಿಂಗ್ ಅವರನ್ನು ಉತ್ತರ ಕ್ಯಾಲಿಫೋರ್ನಿಯಾದ ಮರ್ಸಿಡ್ ಕೌಂಟಿಯಲ್ಲಿರುವ ಮನೆಯಿಂದ ಅಪಹರಿಸಲಾಗಿತ್ತು.
ಅ.5ರ ಬುಧವಾರ ಸಂಜೆ ನಾಲ್ವರ ಶವಗಳು ಇಂಡಿಯಾನಾ ರಸ್ತೆ ಮತ್ತು ಹಚಿನ್ಸನ್ ರಸ್ತೆ ಬಳಿಯ ಹಣ್ಣಿನ ತೋಟದಲ್ಲಿ ಪತ್ತೆಯಾಗಿವೆ. ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರು ಶವಗಳನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಅಪಹರಣದ ಬಗ್ಗೆ ಪೊಲೀಸರು ಬಿಡುಗಡೆ ಮಾಡಿದ್ದ ವಿಡಿಯೋದಲ್ಲಿ ಜಸ್ದೀಪ್ ಸಿಂಗ್ ಮತ್ತು ಅಮನದೀಪ್ ಸಿಂಗ್ ಅವರ ಕೈಗಳನ್ನು ಕಟ್ಟಿ ಎಳೆದುಕೊಂಡು ಹೋಗುವ ದೃಶ್ಯಗಳು ಸೆರೆಯಾಗಿದ್ದವು. ಕೆಲವು ಸೆಕೆಂಡುಗಳ ನಂತರ ಮಗು ಮತ್ತು ಆಕೆಯ ತಾಯಿ ಕೂಡ ಕಟ್ಟಡದಿಂದ ಹೊರಬರುವುದು ದೃಶ್ಯದಲ್ಲಿ ಕಂಡಿತ್ತು. ಕುಟುಂಬದ ಎಲ್ಲ ನಾಲ್ಕು ಸದಸ್ಯರನ್ನು ಒಂದು ಟ್ರಕ್ನಲ್ಲಿ ತುಂಬಿಸಿ ಕರೆದೊಯ್ಯಲಾಗಿತ್ತು.
ಕುಟುಂಬವನ್ನು ಅಪಹರಿಸಿದ ಒಂದು ದಿನದ ನಂತರ, ಪೊಲೀಸರು ಶಂಕಿತ ಅಪಹರಣಕಾರ ಎನ್ನಲಾದ 48 ವರ್ಷದ ಜೀಸಸ್ ಮ್ಯಾನುಯೆಲ್ ಸಲ್ಗಾಡೊ ಎಂಬಾತನನ್ನು ಬಂಧಿಸಿದ್ದರು. ಬಂಧನದ ಸಂದರ್ಭದಲ್ಲಿ ಸಲ್ಗಾಡೊ ಆತ್ಮಹತ್ಯೆಗೂ ಪ್ರಯತ್ನಿಸಿದ್ದ. ಪೊಲೀಸರು ಬಳಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆರೋಪಿ ತಾನೇ ಕೊಲೆ ಮಾಡಿದ್ದಾಗಿಯೂ ಒಪ್ಪಿಕೊಂಡಿದ್ದ. ಯಾಕಾಗಿ ಕೊಲೆ ನಡೆಸಿದ್ದಾನೆಂದು ತಿಳಿದುಬಂದಿಲ್ಲ.
A baby girl, her parents and uncle who were kidnapped at gunpoint from their central California business two days ago were found dead Wednesday, the sheriff of Merced County said.“Our worst fears have been confirmed,” Sheriff Vern Warnke told reporters Wednesday night.A farmworker found the bodies close together in a Merced County orchard, he said.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
12-10-25 06:53 pm
Mangalore Correspondent
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
ಅಫ್ಘಾನ್ ಸಚಿವನಿಂದ ಭಾರತದಲ್ಲಿ ಮಹಿಳೆಯರಿಗೆ ಅವಮಾನ ;...
12-10-25 05:02 pm
Girish Mattannavar Mocks Dr. Mahabala Shetty:...
11-10-25 10:24 pm
Malayalam actor Jayakrishnan Arrest, Mangalor...
11-10-25 07:18 pm
12-10-25 03:52 pm
Mangalore Correspondent
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm