ಬ್ರೇಕಿಂಗ್ ನ್ಯೂಸ್
13-10-22 12:11 pm HK News Desk ದೇಶ - ವಿದೇಶ
ನವದೆಹಲಿ, ಅ.13: ಕರ್ನಾಟಕದ ಹಿಜಾಬ್ ವಿವಾದ ಕುರಿತ ವಾದ, ಪ್ರತಿವಾದಗಳನ್ನು ಆಲಿಸಿದ್ದ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ವಿಭಿನ್ನ ತೀರ್ಪು ನೀಡಿ ಗಮನಸೆಳೆದಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ವಿಭಿನ್ನ ತೀರ್ಪು ಪ್ರಕಟಿಸಿದ್ದಾರೆ.
ನ್ಯಾಯಮೂರ್ತಿ ಸುಧಾಂಶು ಧುಲಿಯಾ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವನ್ನು ರದ್ದುಗೊಳಿಸಿದ್ದಾರೆ. ಆದರೆ ಹೇಮಂತ್ ಗುಪ್ತಾ ಮೇಲ್ಮನವಿಗಳನ್ನು ವಜಾಗೊಳಿಸಿದ್ದು ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದಿದ್ದಾರೆ. ಹೀಗಾಗಿ ಅಂತಿಮ ತೀರ್ಪು ನೀಡಲಾಗದೆ, ಮುಂದಿನ ತೀರ್ಮಾನಕ್ಕಾಗಿ ಮುಖ್ಯ ನ್ಯಾಯಮೂರ್ತಿಗಳ ನಿರ್ಣಯಕ್ಕೆ ಬಿಟ್ಟಿದ್ದಾರೆ. ಇದರಿಂದಾಗಿ ತ್ರಿಸದಸ್ಯ ಅಥವಾ ಸಾಂವಿಧಾನಿಕ ಪೀಠಕ್ಕೆ ಹಿಜಾಬ್ ಕುರಿತ ಅರ್ಜಿ ವರ್ಗಾವಣೆಯಾಗುವ ಸಾಧ್ಯತೆಯಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅರ್ಜಿದಾರರ ಪರ ವಕೀಲ ಎಜಾಬ್ ಮಕ್ಬೂಲ್, ಹಿಜಾಬ್ ನಿಷೇಧ ಪ್ರಕರಣವನ್ನು ದೊಡ್ಡ ಪೀಠ ಅಥವಾ ಮುಖ್ಯ ನ್ಯಾಯಮೂರ್ತಿಗಳ ಮುಂದೆ ಇಡಬೇಕು ಎಂದು ಪೀಠ ಹೇಳಿರುವುದಾಗಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಶಾಲೆ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ನಿಷೇಧಿಸಿದ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದು ಹೈಕೋರ್ಟ್ ತೀರ್ಪು ನೀಡಿತ್ತು. ಈ ಆದೇಶದ ವಿರುದ್ಧ ಕೆಲ ವಿದ್ಯಾರ್ಥಿಗಳು ಹಾಗೂ ಮುಸ್ಲಿಂ ಸಂಘಟನೆಗಳು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿಗಳನ್ನು ಸಲ್ಲಿಸಿದ್ದವು. ಸೆಪ್ಟೆಂಬರ್ ತಿಂಗಳಲ್ಲಿ ಹತ್ತು ದಿನಗಳ ಕಾಲ ತುರ್ತು ವಿಚಾರಣೆ ನಡೆಸಿದ್ದ ಕೋರ್ಟ್, ಸೆ.22 ರಂದು ವಿಚಾರಣೆ ಮುಗಿಸಿ ಅಂತಿಮ ತೀರ್ಪು ಕಾಯ್ದಿರಿಸಿತ್ತು.
The Supreme Court Thursday delivered a split verdict in the Karnataka hijab ban case with one of the judges upholding the March 15 high court order validating the ban and the other setting aside the HC ruling and calling wearing of the apparel a “matter of…choice”.
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 03:25 pm
HK News Staffer
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am