ಬ್ರೇಕಿಂಗ್ ನ್ಯೂಸ್
14-10-22 04:13 pm HK News Desk ದೇಶ - ವಿದೇಶ
ನವದೆಹಲಿ, ಅ.14 : ಜ್ಞಾನವಾಪಿ ಮಸೀದಿ ಮತ್ತು ಶೃಂಗಾರ ಗೌರಿಗೆ ಪೂಜೆ ಸಲ್ಲಿಸುವ ಪ್ರಕರಣಕ್ಕೆ ಸಂಬಂಧಿಸಿ ವಾರಣಾಸಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ಜ್ಞಾನವಾಪಿಯಲ್ಲಿ ಪತ್ತೆಯಾದ ಶಿವಲಿಂಗದ ಕಾರ್ಬನ್ ಡೇಟಿಂಗ್ ಬೇಡಿಕೆಯನ್ನು ಕೋರ್ಟ್ ತಿರಸ್ಕರಿಸಿದೆ.
ಶಿವಲಿಂಗದ ಕಾರ್ಬನ್ ಡೇಟಿಂಗ್ ನಡೆಸಲು ಅವಕಾಶ ನೀಡುವಂತೆ ಕೋರಿ ವಾರಣಾಸಿ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ಸಂಬಂಧ ತೀರ್ಪು ನೀಡಿದ ವಾರಣಾಸಿ ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ವಿಶ್ವೇಶ್, ಹಿಂದೂಗಳ ಕಡೆಯ ಅರ್ಜಿಯನ್ನು ತಿರಸ್ಕರಿಸಿದ್ದಾರೆ.
ಶಿವಲಿಂಗದ ಕಾರ್ಬನ್ ಡೇಟಿಂಗ್ ಮತ್ತು ವೈಜ್ಞಾನಿಕ ಪರೀಕ್ಷೆಯ ವಿಷಯದಲ್ಲಿ ಚರ್ಚೆಗಳು ಪೂರ್ಣಗೊಂಡ ನಂತರ ತೀರ್ಪು ಪ್ರಕಟಿಸಲಾಯಿತು. ಶಿವಲಿಂಗದ ಕಾರ್ಬನ್ ಡೇಟಿಂಗ್ ಅರ್ಜಿಯ ಕುರಿತು ಜಿಲ್ಲಾ ನ್ಯಾಯಾಧೀಶ ಡಾ ಅಜಯ್ ಕೃಷ್ಣ ವಿಶ್ವೇಶ್ ಅವರ ಪೀಠದಲ್ಲಿ ಅಕ್ಟೋಬರ್ 12ರಂದು ವಿಚಾರಣೆ ನಡೆದಿತ್ತು. ವಿಚಾರಣೆ ನಂತರ, ತೀರ್ಪು ಕಾದಿರಿಸಲಾಗಿತ್ತು.
ಅಂಜುಮನ್ ಮಸೀದಿ ಪರವಾಗಿ ವಾದ ಮಂಡಿಸಿದ್ದ ವಕೀಲರು, ಕೇವಲ ಶೃಂಗಾರ ಗೌರಿ ಪೂಜೆ ಮತ್ತು ದರ್ಶನಕ್ಕಾಗಿ ಪ್ರಕರಣ ದಾಖಲಿಸಲಾಗಿತ್ತು. ಮೇ 17ರಂದು ಕಂಡುಬಂದ ಆಕೃತಿಯನ್ನು ರಕ್ಷಿಸಲು ಮತ್ತು ಸಂರಕ್ಷಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಕಾರ್ಬನ್ ಡೇಟಿಂಗ್ ಜೀವಿಗಳು ಮತ್ತು ಪ್ರಾಣಿಗಳ ಮೇಲೆ ನಡೆಸಬೇಕು. ಅದು ಕಲ್ಲಿನ ಮೇಲೆ ನಡೆಸುವುದು ಸಾಧ್ಯವಿಲ್ಲ. ಏಕೆಂದರೆ ಕಲ್ಲು ಇಂಗಾಲಕ್ಕೆ ಹೊಂದಿಕೊಳ್ಳುವುದಿಲ್ಲ. ಪ್ರಕರಣವನ್ನು ಬಲಪಡಿಸಲು ಮತ್ತು ಪುರಾವೆಗಳನ್ನು ಸಂಗ್ರಹಿಸಲು ಕಾರ್ಬನ್ ಡೇಟಿಂಗ್ ಮಾಡಲಾಗುತ್ತದೆ. ಹೀಗಾಗಿ ಕಾರ್ಬನ್ ಡೇಟಿಂಗ್ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ವಾದಿಸಿದ್ದರು.
A Varanasi district court on Friday (October 14) rejected the demand for carbon dating of a "Shivling", claimed to be found on the Gyanvapi mosque premises. Hindu petitioners demanded the scientific test to establish the age of the alleged 'Shivling' but the court did not find legal merit in their demand.The claim was disputed by the Muslim side, which said the object was part of a "fountain".
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
12-10-25 05:46 pm
Mangalore Correspondent
ಅಫ್ಘಾನ್ ಸಚಿವನಿಂದ ಭಾರತದಲ್ಲಿ ಮಹಿಳೆಯರಿಗೆ ಅವಮಾನ ;...
12-10-25 05:02 pm
Girish Mattannavar Mocks Dr. Mahabala Shetty:...
11-10-25 10:24 pm
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
12-10-25 03:52 pm
Mangalore Correspondent
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm