ಬ್ರೇಕಿಂಗ್ ನ್ಯೂಸ್
15-10-22 03:27 pm HK News Desk ದೇಶ - ವಿದೇಶ
ವಾಷಿಂಗ್ಟನ್, ಅ.15: ಪಾಕಿಸ್ತಾನವು ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಒಂದು ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ಪಾಕಿಸ್ತಾನದ ವಿರುದ್ಧ ಅಮೆರಿಕದ ನಾಯಕರೊಬ್ಬರು ಈ ರೀತಿಯ ಬಹಿರಂಗ ಹೇಳಿಕೆ ನೀಡಿರುವುದು ಅಪರೂಪದ ಸನ್ನಿವೇಶವಾಗಿದ್ದು, ಪಾಕಿಸ್ತಾನದ ವಿರುದ್ಧ ಜಾಗತಿಕ ಮಟ್ಟದಲ್ಲಿ ಭಾರತದ ನಿಲುವಿಗೆ ಶಕ್ತಿ ಬಂದಂತಾಗಿದೆ.
ಲಾಸ್ ಏಂಜಲೀಸ್ನಲ್ಲಿ ನಡೆದ ಡೆಮಾಕ್ರಟಿಕ್ ಕಾಂಗ್ರೆಸ್ಸನಲ್ ಕಾಂಪೈನ್ ಕಮಿಟಿ ರಿಸೆಪ್ಷನ್ ಕಾರ್ಯಕ್ರಮದಲ್ಲಿ ಬೈಡನ್, ರಷ್ಯಾ ಮತ್ತು ಚೀನಾ ವಿರುದ್ಧ ಕಿಡಿಕಾರುವ ವೇಳೆ ಈ ಹೇಳಿಕೆ ನೀಡಿದ್ದಾರೆ.
ಚೀನಾ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಸಂಬಂಧಿಸಿದಂತೆ ಅಮೆರಿಕದ ನೀತಿಗಳ ಕುರಿತು ಮಾತನಾಡಿದ ಬೈಡನ್, ಜಗತ್ತಿನಲ್ಲಿನ ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಒಂದು ಎಂದು ಪಾಕಿಸ್ತಾನವನ್ನು ತಾವು ಪರಿಗಣಿಸಿರುವುದಾಗಿ ಹೇಳಿದ್ದಾರೆ.

"ಇಲ್ಲೊಬ್ಬ ವ್ಯಕ್ತಿ (ಕ್ಸಿ ಜಿನ್ಪಿಂಗ್) ತನಗೆ ಏನು ಬೇಕು ಎಂದು ಅರ್ಥಮಾಡಿಕೊಳ್ಳುತ್ತಾನೆ. ಆದರೆ ಆತ ವಿಪರೀತ ಸಮಸ್ಯೆಗಳ ಪಟ್ಟಿಯನ್ನೇ ಹೊಂದಿದ್ದಾನೆ. ಅದನ್ನು ನಾವು ಹೇಗೆ ನಿಭಾಯಿಸುವುದು? ರಷ್ಯಾದಲ್ಲಿ ನಡೆಯುತ್ತಿರುವುದಕ್ಕೆ ಸಂಬಂಧಿಸಿರುವ ಅದನ್ನು ನಾವು ಹೇಗೆ ನಿಭಾಯಿಸುವುದು? ಹಾಗೆಯೇ, ನನ್ನ ಪ್ರಕಾರ ಜಗತ್ತಿನ ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಇದೂ ಒಂದು: ಪಾಕಿಸ್ತಾನ. ಯಾವುದೇ ಸಹಮತಗಳಿಲ್ಲದೆ ಪರಮಾಣ ಅಸ್ತ್ರಗಳನ್ನು ಹೊಂದಿದೆ" ಎಂದು ಬೈಡನ್ ಹೇಳಿದ್ದಾರೆ.

ಅಮೆರಿಕದ ಜತೆಗಿನ ಸಂಬಂಧವನ್ನು ಮತ್ತೆ ಸರಿಪಡಿಸಿಕೊಳ್ಳುವ ಪ್ರಯತ್ನ ನಡೆಸುತ್ತಿರುವ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರ ಸರ್ಕಾರಕ್ಕೆ, ಬೈಡನ್ ಅವರ ಹೇಳಿಕೆಯು ತೀವ್ರ ಹಿನ್ನಡೆ ಉಂಟುಮಾಡಲಿದೆ ಎಂದು ಹೇಳಲಾಗಿದೆ.
21ನೇ ಶತಮಾನದ ಎರಡನೇ ಭಾಗದಲ್ಲಿ ಅಮೆರಿಕವನ್ನು ಕ್ರಿಯಾತ್ಮಕವಾಗಿ ಬದಲಿಸಲು ಸಾಕಷ್ಟು ಅವಕಾಶಗಳಿವೆ ಎಂದು ಬೈಡನ್ ಅವರು ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಅನೇಕ ಸಂಗತಿಗಳು ನಡೆಯುತ್ತಿವೆ. ಸಾಕಷ್ಟು ಸಂಭವಿಸುತ್ತಿವೆ. ಆದರೆ 21ನೇ ಶತಮಾನದ ಎರಡನೇ ಅವಧಿಯಲ್ಲಿ ಕ್ರಿಯಾತ್ಮಕವಾಗಿ ಬದಲಾಗಲು ಅಮೆರಿಕಕ್ಕೆ ಬಹಳಷ್ಟು ಅವಕಾಶಗಳಿವೆ" ಎಂದು ಅಭಿಪ್ರಾಯಪಟ್ಟಿದ್ದಾರೆ.
ಬೈಡನ್ ಆಡಳಿತವು ಕಾಂಗ್ರೆಸ್ ಅನುಮೋದಿತ ಪ್ರಮುಖ ನೀತಿ ದಾಖಲೆಯನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ ಚೀನಾ ಮತ್ತು ರಷ್ಯಾ ದೇಶಗಳು ಸೃಷ್ಟಿಸಿರುವ ಅಪಾಯಗಳನ್ನು ಒತ್ತಿ ಹೇಳಲಾಗಿತ್ತು.
United States President Joe Biden deemed Pakistan one of the most dangerous nations in the world. The White House statement quoted the president's address at the Democratic Congressional Campaign Committee Reception on Friday.Biden said, "What I think is maybe one of the most dangerous nations in the world, Pakistan. Nuclear weapons without any cohesion."
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm