ಬ್ರೇಕಿಂಗ್ ನ್ಯೂಸ್
16-10-22 10:21 pm HK News Desk ದೇಶ - ವಿದೇಶ
ನವದೆಹಲಿ, ಅ.16 : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಅ.17ರಂದು ಚುನಾವಣೆ ನಡೆಯಲಿದೆ. ಕರ್ನಾಟಕದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರು ನಡುವೆ ನೇರ ಸ್ಪರ್ಧೆ ಇದ್ದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯ ನಡುವೆ ಅಧ್ಯಕ್ಷ ಸ್ಥಾನಕ್ಕೆ ಮತದಾನ ನಡೆಯಲಿದೆ.
ಈ ಬಗ್ಗೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ, ಸೋಮವಾರ ಬೆಳಗ್ಗೆ 10 ರಿಂದ ಸಂಜೆ 4 ರ ನಡುವೆ, ಎಲ್ಲಾ ರಾಜ್ಯ ಘಟಕದ ಪ್ರತಿನಿಧಿಗಳು ತಾವು ಬೆಂಬಲಿಸುವ ಅಭ್ಯರ್ಥಿಗೆ ಮತ ಚಲಾಯಿಸಲಿದ್ದಾರೆ. ಸುಗಮ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಒಂಬತ್ತು ಸಾವಿರಕ್ಕೂ ಹೆಚ್ಚು ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಪ್ರತಿನಿಧಿಗಳು ಮತದಾನ ಮಾಡಲಿದ್ದು, ಪಕ್ಷದ ಮುಖ್ಯಸ್ಥರನ್ನು ಆಯ್ಕೆ ಮಾಡಲಿದ್ದಾರೆ ಎಂದವರು ಹೇಳಿದ್ದಾರೆ.
ಗಾಂಧಿ ಕುಟುಂಬಕ್ಕೆ ಆಪ್ತರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಅಧಿಕೃತ ಅಭ್ಯರ್ಥಿ ಎನ್ನುವಂತೆ ಪರಿಗಣಿಸಲಾಗಿದೆ. ಪ್ರತಿಸ್ಪರ್ಧಿ ಶಶಿ ತರೂರ್, ಗಾಂಧಿ ಕುಟುಂಬ ಹೊರತಾದ ಬದಲಾವಣೆಯ ಹರಿಕಾರ ಎಂಬ ರೀತಿ ಬಿಂಬಿಸಲಾಗಿದೆ. ತರೂರ್ ತಮ್ಮನ್ನು ಪಕ್ಷದಲ್ಲಿ ಬದಲಾವಣೆ ತರುವುದಕ್ಕಾಗಿ ಬೆಂಬಲಿಸುವಂತೆ ಕೇಳಿಕೊಂಡಿದ್ದಾರೆ.

ಈ ನಡುವೆ, ಬಳ್ಳಾರಿಯಲ್ಲಿ ಯಾತ್ರೆ ನಡೆಸುತ್ತಿರುವ ರಾಹುಲ್ ಗಾಂಧಿ ಮತ್ತಿತರ ರಾಜ್ಯ ನಾಯಕರು ಪಕ್ಷದ ನಾಯಕನ ಸ್ಥಾನಕ್ಕೆ ಅಲ್ಲಿಂದಲೇ ಮತ ಚಲಾಯಿಸಲು ವ್ಯವಸ್ಥೆ ಮಾಡಲಾಗಿದೆ. ರಾಹುಲ್ ಸಂಗನಕಲ್ಲು ಮತಗಟ್ಟೆಯಲ್ಲಿ ಮತದಾನ ಮಾಡಲಿದ್ದಾರೆಂದು ರಾಜ್ಯಸಭೆ ಸದಸ್ಯ ಜೈರಾಮ್ ರಮೇಶ್ ತಿಳಿಸಿದ್ದಾರೆ. ರಾಹುಲ್ ಗಾಂಧಿ ಪಾದಯಾತ್ರೆ ಕಾರಣ ಎಲ್ಲಿಂದ ಮತ ಚಲಾಯಿಸುತ್ತಾರೆಂದು ಹಲವರು ಜಾಲತಾಣದಲ್ಲಿ ಪ್ರಶ್ನೆ ಮಾಡಿದ್ದರು. ಬ್ಯಾಲೆಟ್ ಪೇಪರಿನಲ್ಲಿ ನಡೆಯುವ ಚುನಾವಣೆಯ ಫಲಿತಾಂಶ 19 ರಂದು ಹೊರ ಬೀಳಲಿದೆ.
The Congress is all set to vote to elect its next president on Monday (October 17) with senior party leaders Mallikarjun Kharge and Shashi Tharoor are pitted against each other. This will be the sixth time in its nearly 137-year-old history that an electoral contest would decide who would take up the mantle of the party’s president. The voting will be done between 10 am and 4 pm, with the results likely to be declared on October 19.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm