ಬ್ರೇಕಿಂಗ್ ನ್ಯೂಸ್
25-10-22 07:37 pm HK News Desk ದೇಶ - ವಿದೇಶ
ಲಂಡನ್, ಅ.25: ಇಂಗ್ಲೆಂಡಿನ ರಾಜ ಚಾರ್ಲ್ಸ್ ಅವರನ್ನು ಭೇಟಿಯಾದ ನಿಯೋಜಿತ ಪ್ರಧಾನ ಮಂತ್ರಿ ರಿಷಿ ಸುನಕ್, ಕೆಲಹೊತ್ತು ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಅಲ್ಲದೆ, ಸುನಕ್ ಪ್ರಧಾನಿ ಸ್ಥಾನಕ್ಕೇರುವುದಕ್ಕೆ ರಾಜ ಚಾರ್ಲ್ಸ್ ಅಧಿಕೃತ ಮುದ್ರೆ ಹಾಕಿದ್ದಾರೆ. ಆನಂತರ ಮೊದಲ ಬಾರಿಗೆ ದೇಶವನ್ನುದ್ದೇಶಿಸಿ ಮಾತನಾಡಿದ ರಿಷಿ ಸುನಕ್, ದೇಶಕ್ಕೆದುರಾದ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಇದಕ್ಕಾಗಿ ದೇಶ ಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
ಕೊರೊನಾ ನಂತರದ ದಿನಗಳಲ್ಲಿ ಎದುರಾದ ಬಿಕ್ಕಟ್ಟು ಮತ್ತು ರಷ್ಯಾ- ಉಕ್ರೇನ್ ಯುದ್ಧದ ಕಾರಣ ಉಂಟಾಗಿರುವ ಬಿಕ್ಕಟ್ಟಿನ ಪರಿಣಾಮ ದೇಶದ ಮೇಲಾಗಿದೆ. ಯುದ್ಧದ ಕಾರಣ ಪೂರೈಕೆ ಜಾಲದಲ್ಲಿ ವ್ಯತ್ಯಾಸವಾಗಿದೆ ಎಂದು ಹೇಳಿದ ಅವರು, 45 ದಿನಗಳಲ್ಲಿ ಅಧಿಕಾರ ತ್ಯಜಿಸಿದ ಲಿಜ್ ಟ್ರಸ್ ಬಗ್ಗೆಯೂ ಮಾತನಾಡಿದ್ದಾರೆ. ದೇಶಕ್ಕಾಗಿ ಕಠಿಣ ನಿರ್ಧಾರಗಳನ್ನು ತಳೆಯಬೇಕಾಗಿತ್ತು. ಅದರಲ್ಲಿ ಲಿಜ್ ಟ್ರಸ್ ತಪ್ಪು ಮಾಡಿದ್ದಾರೆಂದು ಹೇಳುವುದಿಲ್ಲ. ಸದುದ್ದೇಶದಿಂದಲೇ ಕೆಲವು ನಿರ್ಧಾರಗಳನ್ನು ಕೈಗೊಂಡರು. ಆದರೆ, ಸ್ವಲ್ಪ ಎಡವಟ್ಟು ಆಗಿತ್ತು ಎಂದರು.

ನಿಮ್ಮೆಲ್ಲರ ಪ್ರಧಾನಿಯಾಗಿ ನನ್ನನ್ನು ಆಯ್ಕೆ ಮಾಡಿದ್ದೀರಿ. ದೇಶದ ಪರವಾಗಿ ಶೀಘ್ರ ಕ್ರಮಗಳನ್ನು ಕೈಗೊಳ್ಳುತ್ತೇನೆ. ದೇಶದ ಆರ್ಥಿಕ ಸ್ಥಿತಿ ಮೇಲೆತ್ತಲು ಮತ್ತು ದೇಶದ ಜನರ ಹೃದಯ ಗೆಲ್ಲಲು ಕ್ರಮ ವಹಿಸುತ್ತೇನೆ. ಇದರರ್ಥ, ಭವಿಷ್ಯದಲ್ಲಿ ಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತದೆ ಎಂದು ರಿಷಿ ಸುನಕ್ ಹೇಳಿದ್ದಾರೆ. ಕೊರೊನಾ ಸಂದರ್ಭದಲ್ಲಿ ನಾನು ಕೈಗೊಂಡಿದ್ದ ಕ್ರಮಗಳನ್ನು ನೀವು ನೋಡಿದ್ದೀರಿ. ಹಾಗಂತ, ಈಗಿನ ಸಂದರ್ಭದಲ್ಲಿ ಜನರು ಮತ್ತು ಉದ್ಯಮದ ಪರ ನಿಲ್ಲಲು ಹಣಕಾಸು ನೆರವಿನ ಯೋಜನೆ ಪ್ರಕಟಿಸುವುದು ಸರಿಯಲ್ಲ. ಈಗಿನ ದಿನಗಳನ್ನು ಎದುರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದ್ದೇನೆ. ಭವಿಷ್ಯದಲ್ಲಿ ನಿಮ್ಮ ಮಕ್ಕಳು, ಮುಂದಿನ ತಲೆಮಾರು ಸಾಲ ಭರಿಸುವಂತಹ ಪರಿಸ್ಥಿತಿಯನ್ನು ತಂದೊಡ್ಡುವುದಿಲ್ಲ ಎಂದು ಹೇಳಿದರು.
ನಾನು ದೇಶದ ಜನರನ್ನು ಒಗ್ಗೂಡಿಸುತ್ತೇನೆ. ಕೇವಲ ಮಾತುಗಳಿಂದಲ್ಲ, ಕೆಲಸಗಳಿಂದ ಈ ಕಾರ್ಯ ಮಾಡುತ್ತೇನೆ ಎಂದು ರಿಷಿ ಸುನಕ್ ಹೇಳಿದರು.
Rishi Sunak took charge as the next UK Prime Minister on Tuesday. In his first address as the UK PM, Rishi Sunak said that he will place economic stability and confidence at the heart of his government's agenda. “This will mean difficult decisions to come,” Rishi Sunak said.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am