ಬ್ರೇಕಿಂಗ್ ನ್ಯೂಸ್
29-10-22 07:31 pm HK News Desk ದೇಶ - ವಿದೇಶ
ಇಂದೋರ್, ಅ.29 : ಪ್ರಿಯಕರ ಕಾಣಲು ಸಿಕ್ಕಿಲ್ಲ, ಫೋನ್ ರಿಸೀವ್ ಮಾಡಿಲ್ಲ ಎಂದು ನೊಂದುಕೊಂಡ 16 ವರ್ಷದ ವಿದ್ಯಾರ್ಥಿನಿ ತನ್ನ ಗೆಳತಿಯರ ಜೊತೆ ಸೇರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದೋರ್ ನಗರದಲ್ಲಿ ನಡೆದಿದೆ.
ಶಾಲೆಗೆ ಚಕ್ಕರ್ ಹೊಡೆದ 16 ವರ್ಷದ ಮೂವರು ಬಾಲಕಿಯರು ಒಟ್ಟಿಗೆ ವಿಷ ಸೇವಿಸಿದ್ದಾರೆ. ಈ ಪೈಕಿ ಇಬ್ಬರು ಸಾವನ್ನಪ್ಪಿದ್ದು, ಒಬ್ಬಳ ಸ್ಥಿತಿ ಗಂಭೀರವಾಗಿದೆ. ಸೆಹೋರ್ ಜಿಲ್ಲೆಯ ಅಷ್ಟಾ ಪಟ್ಟಣದಲ್ಲಿ ಒಂದೇ ಶಾಲೆಯಲ್ಲಿ ಓದುತ್ತಿದ್ದ ಮೂವರು ಬಾಲಕಿಯರು ಶುಕ್ರವಾರ ಶಾಲೆಗೆ ರಜೆ ಹಾಕಿ 120 ಕಿ.ಮೀ ದೂರದ ಇಂದೋರ್ ಗೆ ಬಸ್ ನಲ್ಲಿ ಪ್ರಯಾಣಿಸಿದ್ದರು. ಅಲ್ಲಿ ವಿಷದ ಬಾಟಲ್ ಖರೀದಿಸಿ ನಿರ್ಜನ ಪ್ರದೇಶಕ್ಕೆ ತೆರಳಿ ವಿಷ ಸೇವನೆ ಮಾಡಿದ್ದಾರೆ. ಈ ಪೈಕಿ ಇಬ್ಬರು ನಿನ್ನೆ ರಾತ್ರಿ ಸಾವನ್ನಪ್ಪಿದ್ದರೆ, ಮತ್ತೊಬ್ಬಳು ಸಾವು ಬದುಕಿನ ನಡುವೆ ಆಸ್ಪತ್ರೆಯಲ್ಲಿ ಹೋರಾಡುತ್ತಿದ್ದಾಳೆ. ಹದಿಹರೆಯದ ಹುಡುಗಿಯರು ವಿಷ ಸೇವಿಸಿರುವುದಕ್ಕೆ ಕಾರಣ ತಿಳಿದು ಪೊಲೀಸರು ಶಾಕ್ ಆಗಿದ್ದಾರೆ.
ಈ ಪೈಕಿ ಒಬ್ಬಳು ಹುಡುಗಿಗೆ ಇಂದೋರ್ ನಗರದ ಯುವಕನ ಜೊತೆಗೆ ಪ್ರೀತಿ ಇತ್ತು. ಆತ ಫೋನ್ ರಿಸೀವ್ ಮಾಡುತ್ತಿಲ್ಲ ಎಂದು ತನ್ನ ಗೆಳತಿಯರ ಜೊತೆಗೆ ಬಸ್ಸಿನಲ್ಲಿ ಹುಡುಗಿ ಬಂದಿದ್ದಳು. ಫೋನ್ ರಿಸೀವ್ ಮಾಡದೇ ಇದ್ದರೆ ಸಾಯುತ್ತೇನೆಂದು ಅಲ್ಲಿಯೇ ವಿಷ ಖರೀದಿಸಿ ಪಾರ್ಕ್ ಒಂದಕ್ಕೆ ಜೊತೆಯಾಗಿ ತೆರಳಿದ್ದರು. ಆ ಹುಡುಗಿ, ಪ್ರಿಯಕರ ಫೋನ್ ತೆಗೆಯುತ್ತಿಲ್ಲ ಎಂದು ಕಾರಣವೊಡ್ಡಿ ವಿಷ ಕುಡಿದಿದ್ದಾಳೆ. ಆಕೆಯ ಕ್ಲೋಸ್ ಫ್ರೆಂಡ್ ಆಗಿದ್ದ ಇನ್ನೊಬ್ಬ ಹುಡುಗಿ ತನ್ನ ಗೆಳತಿ ಸಾಯುತ್ತಿದ್ದಾಳೆ, ಆಕೆಯನ್ನು ಬಿಟ್ಟಿರಲಾರೆ ಎಂದು ನೊಂದು ತಾನೂ ವಿಷ ಕುಡಿದಿದ್ದಾಳೆ. ಇದನ್ನು ನೋಡಿದ ಮತ್ತೊಬ್ಬ ಹುಡುಗಿ, ತನ್ನ ಮನೆಯಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ನಾನು ಕೂಡ ಸಾಯ್ತೀನಿ ಅಂತ ವಿಷ ಸೇವನೆ ಮಾಡಿದ್ದಾಳೆ. ಪಾರ್ಕಿನಲ್ಲಿ ವಿಷ ಸೇವಿಸಿ ನರಳಾಡುತ್ತಿದ್ದವರನ್ನು ಸ್ಥಳೀಯರು ಗಮನಿಸಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಇಬ್ಬರು ಸಾವು ಕಂಡಿದ್ದು ಈ ವೇಳೆ ಜೀವನ್ಮರಣ ಹೋರಾಟ ನಡೆಸುತ್ತಿರುವ ಹುಡುಗಿ ನಿಜ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದಾಳೆ.
Two 16-year-old girls studying in a school died and their classmate is in a critical condition after they allegedly consumed poison together for different reasons in Indore district of Madhya Pradesh, police said on Saturday. The incident took place on Friday after the girls bunked the class of their school in Ashta town of Sehore district, and reached Indore, more than 100 kms away, in a bus to meet the boyfriend of one of the deceased girls as he had stopped taking her calls.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am