ಬ್ರೇಕಿಂಗ್ ನ್ಯೂಸ್
12-10-20 02:52 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 12: ಖ್ಯಾತ ನಟಿ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದ ಖುಷ್ಬು ಸುಂದರ್ ಅನಿರೀಕ್ಷಿತ ಬೆಳವಣಿಗೆಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಕಳೆದ ಆರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದ ಖುಷ್ಬೂ ಸುಂದರ್, ರಾಷ್ಟ್ರೀಯ ವಕ್ತಾರೆ ಹುದ್ದೆಯಲ್ಲಿದ್ದರು. ಇದೀಗ ಖುಷ್ಬು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರಾಜಿನಾಮೆ ಪತ್ರ ಬರೆದಿದ್ದು ಪಕ್ಷ ತ್ಯಜಿಸುವುದಕ್ಕೆ ಕಾರಣವನ್ನೂ ಕೊಟ್ಟಿದ್ದಾರೆ. ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿರುವ ಕೆಲವು ವ್ಯಕ್ತಿಗಳ ಕಾರಣದಿಂದ ನಿಸ್ತೇಜನಾಗಿದ್ದೆ. ತಳಮಟ್ಟದಲ್ಲಿ ಕಾರ್ಯಕರ್ತರ ಜೊತೆಗೆ ಸಂಪರ್ಕ ರಹಿತರು, ಸಾರ್ವಜನಿಕ ಜೀವನದಲ್ಲಿ ಇಲ್ಲದೆ ಉನ್ನತ ಸ್ಥಾನದಲ್ಲಿರುವ ಮಂದಿ ಸರ್ವಾಧಿಕಾರಿಯಂತೆ ವರ್ತಿಸುತ್ತಾರೆ. ಸುದೀರ್ಘ ಕಾಲದ ಯೋಚನೆಯ ಬಳಿಕ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಹೇಳಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಖುಷ್ಬು ಬಿಜೆಪಿ ಸೇರಿದ್ದಾರೆ ಎನ್ನಲಾಗುತ್ತಿದೆ. 2019ರಲ್ಲಿ ಲೋಕಸಭಾ ಚುನಾವಣೆಗೆ ಸೀಟು ಸಿಗದ ಬೇಸರವೂ ಖುಷ್ಬುಗೆ ಇತ್ತು. ಬಿಜೆಪಿಯಿಂದ ಮುಂದಿನ ವರ್ಷದ ಚುನಾವಣೆಯಲ್ಲಿ ಟಿಕೆಟ್ ನೀಡುವ ಭರವಸೆ ನೀಡಿದೆ. ಇದೇ ವೇಳೆ, ರಾಷ್ಟ್ರೀಯ ವಕ್ತಾರ ಹುದ್ದೆಯಿಂದ ಖುಷ್ಬು ಅವರನ್ನು ಕಾಂಗ್ರೆಸ್ ಪಕ್ಷ ತೆಗೆದುಹಾಕಿದೆ. ಕಳೆದ ಆರು ತಿಂಗಳಲ್ಲಿ ಖುಷ್ಬು ಪಕ್ಷದ ನಂಬಿಕೆ ಮತ್ತು ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದರು. ಇತ್ತೀಚೆಗೆ ರಾಹುಲ್ ಗಾಂಧಿ ಕುರಿತಾಗಿಯೂ ವಿರೋಧಿಸಿ ಟ್ವೀಟ್ ಮಾಡಿ ವಿವಾದ ಎಳೆದುಕೊಂಡಿದ್ದರು. ಜನರು ಆಕೆಯನ್ನು ನಟಿಯಾಗಿ ನೋಡುತ್ತಾರೆ ವಿನಾ ರಾಜಕಾರಣಿಯಂತಲ್ಲ. ಅವರು ಪಕ್ಷ ಬಿಟ್ಟಿದ್ದರಿಂದ ಪಕ್ಷಕ್ಕೆ ಏನೂ ನಷ್ಟವಿಲ್ಲ ಎಂದು ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಕೆ.ಎಸ್ ಅಳಗಿರಿ ಹೇಳಿದ್ದಾರೆ.
Congress national spokesperson Kushboo Sundar on Monday offered her resignation from the party and joined BJP in the presence of Tamil Nadu State BJP President L. Murugan and BJP National General Secretary C.T. Ravi.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm