ಬ್ರೇಕಿಂಗ್ ನ್ಯೂಸ್
12-10-20 02:52 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 12: ಖ್ಯಾತ ನಟಿ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದ ಖುಷ್ಬು ಸುಂದರ್ ಅನಿರೀಕ್ಷಿತ ಬೆಳವಣಿಗೆಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಕಳೆದ ಆರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದ ಖುಷ್ಬೂ ಸುಂದರ್, ರಾಷ್ಟ್ರೀಯ ವಕ್ತಾರೆ ಹುದ್ದೆಯಲ್ಲಿದ್ದರು. ಇದೀಗ ಖುಷ್ಬು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರಾಜಿನಾಮೆ ಪತ್ರ ಬರೆದಿದ್ದು ಪಕ್ಷ ತ್ಯಜಿಸುವುದಕ್ಕೆ ಕಾರಣವನ್ನೂ ಕೊಟ್ಟಿದ್ದಾರೆ. ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿರುವ ಕೆಲವು ವ್ಯಕ್ತಿಗಳ ಕಾರಣದಿಂದ ನಿಸ್ತೇಜನಾಗಿದ್ದೆ. ತಳಮಟ್ಟದಲ್ಲಿ ಕಾರ್ಯಕರ್ತರ ಜೊತೆಗೆ ಸಂಪರ್ಕ ರಹಿತರು, ಸಾರ್ವಜನಿಕ ಜೀವನದಲ್ಲಿ ಇಲ್ಲದೆ ಉನ್ನತ ಸ್ಥಾನದಲ್ಲಿರುವ ಮಂದಿ ಸರ್ವಾಧಿಕಾರಿಯಂತೆ ವರ್ತಿಸುತ್ತಾರೆ. ಸುದೀರ್ಘ ಕಾಲದ ಯೋಚನೆಯ ಬಳಿಕ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಹೇಳಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಖುಷ್ಬು ಬಿಜೆಪಿ ಸೇರಿದ್ದಾರೆ ಎನ್ನಲಾಗುತ್ತಿದೆ. 2019ರಲ್ಲಿ ಲೋಕಸಭಾ ಚುನಾವಣೆಗೆ ಸೀಟು ಸಿಗದ ಬೇಸರವೂ ಖುಷ್ಬುಗೆ ಇತ್ತು. ಬಿಜೆಪಿಯಿಂದ ಮುಂದಿನ ವರ್ಷದ ಚುನಾವಣೆಯಲ್ಲಿ ಟಿಕೆಟ್ ನೀಡುವ ಭರವಸೆ ನೀಡಿದೆ. ಇದೇ ವೇಳೆ, ರಾಷ್ಟ್ರೀಯ ವಕ್ತಾರ ಹುದ್ದೆಯಿಂದ ಖುಷ್ಬು ಅವರನ್ನು ಕಾಂಗ್ರೆಸ್ ಪಕ್ಷ ತೆಗೆದುಹಾಕಿದೆ. ಕಳೆದ ಆರು ತಿಂಗಳಲ್ಲಿ ಖುಷ್ಬು ಪಕ್ಷದ ನಂಬಿಕೆ ಮತ್ತು ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದರು. ಇತ್ತೀಚೆಗೆ ರಾಹುಲ್ ಗಾಂಧಿ ಕುರಿತಾಗಿಯೂ ವಿರೋಧಿಸಿ ಟ್ವೀಟ್ ಮಾಡಿ ವಿವಾದ ಎಳೆದುಕೊಂಡಿದ್ದರು. ಜನರು ಆಕೆಯನ್ನು ನಟಿಯಾಗಿ ನೋಡುತ್ತಾರೆ ವಿನಾ ರಾಜಕಾರಣಿಯಂತಲ್ಲ. ಅವರು ಪಕ್ಷ ಬಿಟ್ಟಿದ್ದರಿಂದ ಪಕ್ಷಕ್ಕೆ ಏನೂ ನಷ್ಟವಿಲ್ಲ ಎಂದು ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಕೆ.ಎಸ್ ಅಳಗಿರಿ ಹೇಳಿದ್ದಾರೆ.
Congress national spokesperson Kushboo Sundar on Monday offered her resignation from the party and joined BJP in the presence of Tamil Nadu State BJP President L. Murugan and BJP National General Secretary C.T. Ravi.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:04 am
Udupi Correspondent
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm