ಬ್ರೇಕಿಂಗ್ ನ್ಯೂಸ್
12-10-20 03:31 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 12: ಈ ದೇಶದಲ್ಲಿ ಪ್ರಧಾನಿ ಮೋದಿಗೆ, ರಾಹುಲ್ ಗಾಂಧಿಗೆ ಭಕ್ತರಿದ್ದಾರೆ. ಚಿತ್ರ ನಟ - ನಟಿಯರನ್ನು ಆರಾಧಿಸುವ ಅಭಿಮಾನಿಗಳೂ ಇದ್ದಾರೆ. ಆದರೆ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರವಾಗಿ ಪ್ರಾಣ ಕೊಡುವ ಮಂದಿಯ ಬಗ್ಗೆ ಕೇಳಿದ್ದೀರಾ...? ಕೊರೊನಾ ಸೋಂಕಿಗೆ ಒಳಗಾಗಿರುವ ಡೊನಾಲ್ಡ್ ಟ್ರಂಪ್ ಚೇತರಿಸಲು ಉಪವಾಸ ಕುಳಿತಿದ್ದ ವ್ಯಕ್ತಿಯೊಬ್ಬ ಪ್ರಾಣ ಬಿಟ್ಟ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಹೀಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನೂ ಪಡೆದಿದ್ದರು. ಆದರೆ, ತೆಲಂಗಾಣದ ಅಭಿಮಾನಿಯೊಬ್ಬ ಟ್ರಂಪ್ ಚೇತರಿಕೆಗಾಗಿ ವ್ರತ ಆಚರಿಸಿ ಉಪವಾಸ ಕುಳಿತಿದ್ದ ಕಾರಣ ಹೃದಯಾಘಾಕ್ಕೀಡಾಗಿ ಮೃತಪಟ್ಟಿದ್ದಾನೆ ಎನ್ನಲಾಗ್ತಿದೆ. ಟ್ರಂಪ್ ಗಾಗಿ ಪ್ರಾಣ ಬಿಟ್ಟ ಸುದ್ದಿ ಇದೀಗ ರಾಷ್ಟ್ರ ಮಟ್ಟದಲ್ಲಿ ಭಾರೀ ಸದ್ದು ಮಾಡುತ್ತಿದೆ.



ತೆಲಂಗಾಣದ ಮೇದಕ್ನ ನಿವಾಸಿಯಾದ ರೈತ ಬುಸ್ಸಾ ಕೃಷ್ಣರಾಜು ಮೃತ ದುರ್ದೈವಿ. ಈತ ಟ್ರಂಪ್ಗೆ ಕೊರೋನಾ ಸೋಂಕು ತಗುಲಿದ ನಂತರ ಆಘಾತಕ್ಕೊಳಗಾಗಿದ್ದ. ಅವರಿಗಾಗಿ ಮೌನ ವ್ರತ, ಪೂಜೆಯೊಂದಿಗೆ ಉಪವಾಸ ಸಹ ಆರಂಭಿಸಿದ್ದರು. ಇದೇ ಕಾರಣಕ್ಕೆ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಈ ವ್ಯಕ್ತಿ ಹಿಂದೊಮ್ಮೆ ಆರು ಅಡಿ ಎತ್ತರದ ಡೋನಾಲ್ಡ್ ಟ್ರಂಪ್ ಪ್ರತಿಮೆ ಸ್ಥಾಪಿಸಿ ನಿತ್ಯ ಪೂಜೆ ಮಾಡುವುದಾಗಿ ಹೇಳಿ ಗಮನಸೆಳೆದಿದ್ದರು. ಟ್ರಂಪ್ ಅಪ್ಪಟ ಭಕ್ತ, ಅಭಿಮಾನಿಯಾಗಿದ್ದ ರಾಜು, ಕಳೆದ ನಾಲ್ಕು ದಿನಗಳಿಂದ ಯಾರೊಂದಿಗೂ ಮಾತನಾಡದೇ, ಆಹಾರ ಸೇವಿಸದೆ ಪ್ರಾರ್ಥನೆಯಲ್ಲಿ ನಿರತರಾಗಿದ್ದರು. ಭಾನುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
A farmer from Telangana Bussu Krishna who "spent sleepless nights, starving and praying" for US President Donald Trump's recovery from Coronavirus died of cardiac arrest on Sunday.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm