ಬ್ರೇಕಿಂಗ್ ನ್ಯೂಸ್
05-11-22 05:56 pm HK News Desk ದೇಶ - ವಿದೇಶ
ಅಹ್ಮದಾಬಾದ್, ನ.5:ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷವು 5 ಸೀಟನ್ನೂ ಗೆಲ್ಲುವುದಿಲ್ಲ. ಈ ಬಗ್ಗೆ ನಾನು ಬರೆದು ಕೊಡುತ್ತೇನೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಇಂಡಿಯಾ ಡುಡೇಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅರವಿಂದ ಕೇಜ್ರಿವಾಲ್ ಈ ಮಾತು ಹೇಳಿದ್ದಾರೆ. ನಾವು ಕಾಂಗ್ರೆಸನ್ನು ಗಂಭೀರವಾಗಿ ಪರಿಗಣಿಸಿಯೇ ಇಲ್ಲ. ಅದು ಹೆಚ್ಚೆಂದರೆ ಐದು ಸೀಟಿಗಿಂತ ಕಡಿಮೆ ಗೆಲ್ಲಬಹುದಷ್ಟೇ ಎಂದು ಹೇಳಿದ್ದಾರೆ. ಗುಜರಾತಿನ ಜನರು ಬದಲಾವಣೆ ಬಯಸಿದ್ದಾರೆ. ಜನ ಬದಲಾವಣೆ ಬಯಸದೇ ಇದ್ದರೆ, ನಮಗೆ ಅಲ್ಲಿ ಜಾಗವೇ ಇರುತ್ತಿರಲಿಲ್ಲ. ನಾವು ಗುಜರಾತಿನಲ್ಲಿ 30 ಶೇಕಡಾ ಮತಗಳನ್ನು ಪಡೆಯುತ್ತೇವೆ. ಪಂಜಾಬ್ ಸರಕಾರ ರಚನೆ ಮಾಡಿದ್ದೇವೆ. ಗುಜರಾತಿನಲ್ಲೂ ಏನೋ ಒಂದು ಹೊಸತು ಆಗಲಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ 5 ಸೀಟಿಗಿಂತ ಹೆಚ್ಚು ಗೆಲ್ಲುವುದಿಲ್ಲ ಅನ್ನುವುದನ್ನು ಕಾಗದದಲ್ಲಿ ಬರೆದುಕೊಡುತ್ತೇನೆ. ನನ್ನ ಮಾತು ದಾಖಲೆ ಆಗಿರುತ್ತದೆ. ನಾವು ಅಲ್ಲಿ ಎರಡನೇ ಸ್ಥಾನದಲ್ಲಿರುತ್ತೇವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಆದರೆ ಆಪ್ ಎಷ್ಟು ಸ್ಥಾನ ಗೆಲ್ಲುತ್ತದೆ ಅನ್ನುವುದನ್ನು ಖಚಿತವಾಗಿ ಹೇಳಿಲ್ಲ. ಎರಡನೇ ಸ್ಥಾನದಲ್ಲಂತೂ ಪಕ್ಷ ಇರಲಿದೆ ಎಂದಿದ್ದಾರೆ.
ಬಿಜೆಪಿ ಹಿಂದಿಗಿಂತ 20 ಶೇಕಡಾ ಮತಗಳನ್ನು ಕಳಕೊಳ್ಳಲಿದೆ. ನಮ್ಮ ಆಂತರಿಕ ಸರ್ವೇಯಲ್ಲಿ ಮತಗಳು ಆಮ್ ಆದ್ಮಿ ಪಾಲಾಗುವುದು ಕಂಡುಬಂದಿದೆ. ಕಾಂಗ್ರೆಸ್ ಪಾಲಿಗೆ ಮತ ಹೋಗಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ತಯಾರಾಗುತ್ತೀರಾ ಎಂಬ ಪ್ರಶ್ನೆಗೆ, ಲೋಕಸಭೆ ಚುನಾವಣೆಗೆ ಇನ್ನೂ ಕಾಲ ಇದೆ, ಈಗ ಗುಜರಾತ್ ಚುನಾವಣೆ ಎದುರಿಸುತ್ತಿದ್ದೇವೆ ಎಂದಿದ್ದಾರೆ.
The Congress will get fewer than five seats in Gujarat, Delhi chief minister Arvind Kejriwal declared Saturday. Speaking at a media conclave hosted by India Today in the national capital, the AAP boss panned his rival's chances ahead of next month's polls and asked 'who takes the Congress seriously'.
11-03-26 06:14 pm
HK News Staffer
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 06:26 pm
HK News Staffer
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am