ಬ್ರೇಕಿಂಗ್ ನ್ಯೂಸ್
05-11-22 05:56 pm HK News Desk ದೇಶ - ವಿದೇಶ
ಅಹ್ಮದಾಬಾದ್, ನ.5:ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷವು 5 ಸೀಟನ್ನೂ ಗೆಲ್ಲುವುದಿಲ್ಲ. ಈ ಬಗ್ಗೆ ನಾನು ಬರೆದು ಕೊಡುತ್ತೇನೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಇಂಡಿಯಾ ಡುಡೇಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅರವಿಂದ ಕೇಜ್ರಿವಾಲ್ ಈ ಮಾತು ಹೇಳಿದ್ದಾರೆ. ನಾವು ಕಾಂಗ್ರೆಸನ್ನು ಗಂಭೀರವಾಗಿ ಪರಿಗಣಿಸಿಯೇ ಇಲ್ಲ. ಅದು ಹೆಚ್ಚೆಂದರೆ ಐದು ಸೀಟಿಗಿಂತ ಕಡಿಮೆ ಗೆಲ್ಲಬಹುದಷ್ಟೇ ಎಂದು ಹೇಳಿದ್ದಾರೆ. ಗುಜರಾತಿನ ಜನರು ಬದಲಾವಣೆ ಬಯಸಿದ್ದಾರೆ. ಜನ ಬದಲಾವಣೆ ಬಯಸದೇ ಇದ್ದರೆ, ನಮಗೆ ಅಲ್ಲಿ ಜಾಗವೇ ಇರುತ್ತಿರಲಿಲ್ಲ. ನಾವು ಗುಜರಾತಿನಲ್ಲಿ 30 ಶೇಕಡಾ ಮತಗಳನ್ನು ಪಡೆಯುತ್ತೇವೆ. ಪಂಜಾಬ್ ಸರಕಾರ ರಚನೆ ಮಾಡಿದ್ದೇವೆ. ಗುಜರಾತಿನಲ್ಲೂ ಏನೋ ಒಂದು ಹೊಸತು ಆಗಲಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ 5 ಸೀಟಿಗಿಂತ ಹೆಚ್ಚು ಗೆಲ್ಲುವುದಿಲ್ಲ ಅನ್ನುವುದನ್ನು ಕಾಗದದಲ್ಲಿ ಬರೆದುಕೊಡುತ್ತೇನೆ. ನನ್ನ ಮಾತು ದಾಖಲೆ ಆಗಿರುತ್ತದೆ. ನಾವು ಅಲ್ಲಿ ಎರಡನೇ ಸ್ಥಾನದಲ್ಲಿರುತ್ತೇವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಆದರೆ ಆಪ್ ಎಷ್ಟು ಸ್ಥಾನ ಗೆಲ್ಲುತ್ತದೆ ಅನ್ನುವುದನ್ನು ಖಚಿತವಾಗಿ ಹೇಳಿಲ್ಲ. ಎರಡನೇ ಸ್ಥಾನದಲ್ಲಂತೂ ಪಕ್ಷ ಇರಲಿದೆ ಎಂದಿದ್ದಾರೆ.
ಬಿಜೆಪಿ ಹಿಂದಿಗಿಂತ 20 ಶೇಕಡಾ ಮತಗಳನ್ನು ಕಳಕೊಳ್ಳಲಿದೆ. ನಮ್ಮ ಆಂತರಿಕ ಸರ್ವೇಯಲ್ಲಿ ಮತಗಳು ಆಮ್ ಆದ್ಮಿ ಪಾಲಾಗುವುದು ಕಂಡುಬಂದಿದೆ. ಕಾಂಗ್ರೆಸ್ ಪಾಲಿಗೆ ಮತ ಹೋಗಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ತಯಾರಾಗುತ್ತೀರಾ ಎಂಬ ಪ್ರಶ್ನೆಗೆ, ಲೋಕಸಭೆ ಚುನಾವಣೆಗೆ ಇನ್ನೂ ಕಾಲ ಇದೆ, ಈಗ ಗುಜರಾತ್ ಚುನಾವಣೆ ಎದುರಿಸುತ್ತಿದ್ದೇವೆ ಎಂದಿದ್ದಾರೆ.
The Congress will get fewer than five seats in Gujarat, Delhi chief minister Arvind Kejriwal declared Saturday. Speaking at a media conclave hosted by India Today in the national capital, the AAP boss panned his rival's chances ahead of next month's polls and asked 'who takes the Congress seriously'.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm