ಬ್ರೇಕಿಂಗ್ ನ್ಯೂಸ್
06-11-22 11:43 am HK News Desk ದೇಶ - ವಿದೇಶ
ಅಹ್ಮದಾಬಾದ್, ನ.6: 135 ಜನರ ಸಾವಿಗೆ ಕಾರಣವಾದ ಮೋರ್ಬಿ ಸೇತುವೆ ದುರಂತಕ್ಕೆ ದುರಸ್ತಿ ಕಾರ್ಯ ಕೈಗೊಂಡಿದ್ದ ಅಜಂತಾ ಒರೆವಾ ಕಂಪನಿಯ ಭ್ರಷ್ಟಾಚಾರವೇ ಕಾರಣ ಎನ್ನುವ ಅಂಶ ತನಿಖೆಯಲ್ಲಿ ತಿಳಿದುಬಂದಿದೆ.
ಕಳೆದ ಮಾರ್ಚ್ ತಿಂಗಳಲ್ಲಿ ತೂಗು ಸೇತುವೆಯನ್ನು ಸಾರ್ವಜನಿಕ ಸಂಚಾರ ನಿಷೇಧಿಸಿ ದುರಸ್ತಿ ಕಾರ್ಯ ಕೈಗೊಳ್ಳಲು ಅಜಂತಾ ಒರೆವಾ ಕಂಪನಿಗೆ ವಹಿಸಲಾಗಿತ್ತು. ಆದರೆ ತೂಗು ಸೇತುವೆ ದುರಸ್ತಿ ಅನುಭವ ಹೊಂದಿಲ್ಲದ ಒರೆವಾ ಕಂಪನಿ ಬೇರೊಂದು ಕಂಪನಿಗೆ ಉಪ ಗುತ್ತಿಗೆ ನೀಡಿತ್ತು. ಇದಕ್ಕಾಗಿ ಮೋರ್ಬಿ ನಗರ ಪಾಲಿಕೆಯು ಖಾಸಗಿ ಕಂಪನಿಗೆ ಎರಡು ಕೋಟಿ ರೂಪಾಯಿ ನೀಡಿತ್ತು. ಆದರೆ ಕಂಪನಿಯು ಎರಡು ಕೋಟಿ ಮೊತ್ತದಲ್ಲಿ ಏಳು ತಿಂಗಳ ಅವಧಿಯಲ್ಲಿ ಕೇವಲ 12 ಲಕ್ಷ ರೂಪಾಯಿ ಮೊತ್ತವನ್ನು ಮಾತ್ರ ದುರಸ್ತಿ ಕಾರ್ಯಕ್ಕೆ ವಹಿಸಿತ್ತು. ಅಂದರೆ ಕೇವಲ ಆರು ಶೇಕಡಾ ಮೊತ್ತವನ್ನು ಮಾತ್ರ ವ್ಯಯಿಸಿತ್ತು ಎನ್ನುವ ಮಾಹಿತಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.


ಹೀಗಾಗಿ ಓರೆವಾ ಕಂಪನಿಯ ಭ್ರಷ್ಟಾಚಾರದಿಂದಲೇ ತೂಗು ಸೇತುವೆ ಕುಸಿದು ಬೀಳುವಂತಾಗಿದೆ. ಉಪ ಗುತ್ತಿಗೆ ಪಡೆದಿದ್ದ ದೇವಪ್ರಕಾಶ್ ಸೊಲ್ಯುಷನ್ಸ್ ಕಂಪನಿಯಿಂದ ದುರಸ್ತಿ ಕಾರ್ಯಕ್ಕೆ ವ್ಯಯಿಸಿದ್ದ ಮೊತ್ತದ ಕುರಿತು ದಾಖಲೆಗಳನ್ನು ಪೊಲೀಸರು ಪಡೆದಿದ್ದಾರೆ. ಈ ವೇಳೆ, ಕೇವಲ 12 ಲಕ್ಷ ರೂ. ಮೊತ್ತವನ್ನಷ್ಟೇ ಖರ್ಚು ಮಾಡಿರುವುದು ತಿಳಿದುಬಂದಿದೆ. ಹೀಗಿದ್ದರೂ ಗುಜರಾತಿನ ಹೊಸ ವರ್ಷ ಅಕ್ಟೋಬರ್ 24 ಮತ್ತು ದೀಪಾವಳಿ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆಂದು ತರಾತುರಿಯಲ್ಲಿ ಸೇತುವೆಯನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತ ಮಾಡಲಾಗಿತ್ತು. ಆದರೆ ಅತಿಯಾದ ಜನ ದಟ್ಟಣೆಯಿಂದಾಗಿ ಸೇತುವೆ ಕುಸಿದು ಬಿದ್ದಿತ್ತು. ಇದಕ್ಕೆ ಅಜಂತಾ ಒರೆವಾ ಕಂಪನಿಯೇ ಹೊಣೆಯೆಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
)

ಕಳೆದ ಮಾರ್ಚ್ ತಿಂಗಳಲ್ಲಿ ಅಹ್ಮದಾಬಾದ್ ಮೂಲದ ಅಜಂತಾ ಓರೆವಾ ಕಂಪನಿಗೆ ತೂಗು ಸೇತುವೆಯ ನಿರ್ವಹಣಾ ಗುತ್ತಿಗೆಯನ್ನು 15 ವರ್ಷಕ್ಕೆ ನೀಡಲಾಗಿತ್ತು. ಕಂಪನಿಯ ಅಧ್ಯಕ್ಷ ಜಯಸುಖ್ ಪಟೇಲ್ ಈ ಗುತ್ತಿಗೆಯನ್ನು ಪಡೆದಿದ್ದರು. ಮೇಲ್ನೋಟಕ್ಕೆ ತೂಗು ಸೇತುವೆ ಹೆಸರಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವುದು ಕಂಡುಬಂದಿದ್ದು ಮೋರ್ಬಿ ನಗರ ಪಾಲಿಕೆಯ ಅಧಿಕಾರಿಗಳನ್ನೂ ದುರಂತಕ್ಕೆ ಹೊಣೆ ಮಾಡಲಾಗಿದೆ. ಎರಡು ದಿನಗಳ ಹಿಂದೆ ಮೋರ್ಬಿ ಸೇತುವೆಯ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಮೋರ್ಬಿ ಪುರಸಭೆಯ ಮುಖ್ಯಾಧಿಕಾರಿಯನ್ನು ಅಮಾನತು ಮಾಡಲಾಗಿತ್ತು.
The shocking collapse of the 143-year-old Morbi suspension footbridge in Gujarat can be termed one of the most tragic events in the recent past. The mishap that occurred on October 30 claimed 135 lives.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am