ಬ್ರೇಕಿಂಗ್ ನ್ಯೂಸ್
13-11-22 05:01 pm HK News Desk ದೇಶ - ವಿದೇಶ
ನವದೆಹಲಿ, ನ.13: ದೆಹಲಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಟಿಕೆಟ್ ಸಿಕ್ಕಿಲ್ಲವೆಂದು ಆಮ್ ಆದ್ಮಿ ಪಕ್ಷದ ಮಾಜಿ ಕಾರ್ಪೊರೇಟರ್ ಒಬ್ಬ ಹೈಟೆನ್ಶನ್ ವಿದ್ಯುತ್ ತಂತಿ ಹಾದುಹೋಗುವ ಟವರ್ ಏರಿ ಕುಳಿತ ಘಟನೆ ದೆಹಲಿಯಲ್ಲಿ ನಡೆದಿದೆ.
ಹಸೀಬ್ ಉಲ್ ಹಸನ್ ಟವರ್ ಏರಿ ಕುಳಿತ ವ್ಯಕ್ತಿ. ಮುಂದಿನ ಚುನಾವಣೆಯಲ್ಲಿ ಸ್ಪರ್ಧೆಗೆ ಟಿಕೆಟ್ ನಿರಾಕರಿಸಲಾಗಿದೆ. ಅಲ್ಲದೆ, ತನ್ನ ಒರಿಜಿನಲ್ ದಾಖಲೆ ಪ್ರತಿಗಳನ್ನು ತೆಗೆದಿಟ್ಟು ಸ್ವತಂತ್ರ ಸ್ಪರ್ಧೆಗೂ ಅವಕಾಶ ಸಿಗದಂತೆ ಮಾಡಿದ್ದಾರೆ ಎಂದು ಆರೋಪಿಸಿ ಟವರ್ ಏರಿ ಹೈಡ್ರಾಮಾ ನಡೆಸಿದ್ದಾನೆ.
ಅಲ್ಲದೆ, ಆಮ್ ಆದ್ಮಿ ಪಕ್ಷದ ನಾಯಕರಾದ ಆತಿಷಿ, ದುರ್ಗೇಶ್ ಪಾಠಕ್ ಮತ್ತು ಸಂಜಯ್ ಸಿಂಗ್, ತನಗೆ ಟಿಕೆಟ್ ಕೊಡಬೇಕಿದ್ದರೆ ಮೂರು ಕೋಟಿ ರೂಪಾಯಿ ಹಣ ನೀಡಬೇಕೆಂದು ಡಿಮ್ಯಾಂಡ್ ಮಾಡಿದ್ದಾರೆ. ನನ್ನಲ್ಲಿ ಅಷ್ಟು ಕೊಡಲು ಹಣ ಇಲ್ಲ. ನನ್ನ ಬದಲಿಗೆ ದೀಪು ಚೌಧರಿ ಬಳಿ ಮೂರು ಕೋಟಿ ರೂಪಾಯಿ ಹಣ ಪಡೆದು ಟಿಕೆಟ್ ನೀಡಿದ್ದಾರೆ ಎಂದು ಹಸೀಬುಲ್ ಹಸನ್ ಆರೋಪಿಸಿದ್ದಾನೆ.
ಶಾಸ್ತ್ರಿ ಪಾರ್ಕ್ ವೃತ್ತದಲ್ಲಿ ಘಟನೆ ನಡೆದಿದ್ದು, ಪೊಲೀಸರು, ಆಮ್ ಆದ್ಮಿ ಪಕ್ಷದ ಪ್ರತಿನಿಧಿಗಳು ಆಗಮಿಸಿ ಹಸೀಬುಲ್ ನನ್ನು ಮನವೊಲಿಸಿ ಕೆಳಕ್ಕೆ ಇಳಿಸಿದ್ದಾರೆ. ಹೈಟೆನ್ಶನ್ ವಿದ್ಯುತ್ ಹರಿಯುವ ಟವರ್ ಆಗಿದ್ದರಿಂದ ವಿದ್ಯುತ್ ಸಂಪರ್ಕವನ್ನೂ ಕಡಿತ ಮಾಡಲಾಗಿತ್ತು. ಡಿ.4ರಂದು ದೆಹಲಿ ಪಾಲಿಕೆ ಚುನಾವಣೆ ನಡೆಯಲಿದ್ದು, ಆಮ್ ಆದ್ಮಿ ಪಕ್ಷದಿಂದ 117 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. 250 ಸದಸ್ಯ ಬಲದಲ್ಲಿ 117 ಸ್ಥಾನದ ಟಿಕೆಟ್ ಫೈನಲ್ ಮಾಡಲಾಗಿದ್ದು, ಶನಿವಾರ ಪಟ್ಟಿ ಬಿಡುಗಡೆ ಮಾಡಲಾಗಿತ್ತು. ಅದರಲ್ಲಿ ಹಸೀಬುಲ್ ಗೆ ಸ್ಥಾನ ಸಿಗದೇ ಇರುವುದಕ್ಕೆ ಭಾನುವಾರ ಟವರ್ ಏರಿ ಡ್ರಾಮಾ ನಡೆಸಿದ್ದಾನೆ.
Disgruntled over not being given a ticket to the upcoming civic polls, a former councillor of the Aam Aadmi Party (AAP) on Sunday climbed up a transmission tower in Delhi.Former AAP councillor Haseeb-ul-Hasan was reportedly uphappy after he was denied a ticket to the upcoming Municipal Corporation of Delhi (MCD) elections, and climbed a transmission tower Shashtri Park metro station.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm