ಬ್ರೇಕಿಂಗ್ ನ್ಯೂಸ್
13-10-20 04:06 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 13: ರಾಷ್ಟ್ರೀಯ ಕಾಮಧೇನು ಆಯೋಗದ ಅಧ್ಯಕ್ಷ ವಲ್ಲಭಭಾಯಿ ಕಥರಿಯಾ ಗೋವಿನ ಸೆಗಣಿಯಿಂದ ಮಾಡಿದ ಚಿಪ್ ಅನ್ನು ಹೊರತಂದಿದ್ದಾರೆ. ಮೊಬೈಲ್ ಫೋನ್ ಹೊರಸೂಸುವ ವಿಕಿರಣವನ್ನು ಈ ಚಿಪ್ ತಡೆಯಬಲ್ಲದು. ಆಮೂಲಕ ವಿಕಿರಣ ಸಂಬಂಧಿ ರೋಗಗಳನ್ನು ಈ ಚಿಪ್ ನಿವಾರಿಸಲಿದೆ ಎಂದು ಕಥರಿಯಾ ಹೇಳಿದ್ದಾರೆ.
ಕೇಂದ್ರ ಸರಕಾರದ ಮೀನುಗಾರಿಕೆ ಮತ್ತು ಪಶು ಸಂಗೋಪನೆ ಇಲಾಖೆಯಡಿ ಸ್ಥಾಪಿಸಲಾಗಿರುವ ರಾಷ್ಟ್ರೀಯ ಕಾಮಧೇನು ಆಯೋಗದಿಂದ ಈ ಹೊಸ ಮಾದರಿಯ ಚಿಪ್ ಅನ್ನು ಬಿಡುಗಡೆ ಮಾಡಲಾಗಿದೆ. ಸಗಣಿ ಉತ್ಪನ್ನಗಳ ಪ್ರಚಾರಕ್ಕಾಗಿ ಆಯೋಗದ ವತಿಯಿಂದ ಕಾಮಧೇನು ದೀಪಾವಳಿ ಹೆಸರಲ್ಲಿ ರಾಷ್ಟ್ರ ಮಟ್ಟದ ಅಭಿಯಾನ ಹಮ್ಮಿಕೊಂಡಿದ್ದು, ಕಥರಿಯಾ ದೆಹಲಿಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಗೋವಿನ ಸೆಗಣಿ ವಿಕಿರಣ ವಿರೋಧಿಯಾಗಿದ್ದು, ಎಲ್ಲರನ್ನು ಕಾಪಾಡುತ್ತದೆ. ಇದು ವೈಜ್ಞಾನಿಕವಾಗಿಯೂ ಸಾಬೀತಾಗಿದೆ. ಈ ಚಿಪ್ ಅನ್ನು ಮೊಬೈಲ್ ಫೋನ್ ಗಳಲ್ಲಿ ಬಳಸಬಹುದು. ಇದರಿಂದ ಮೊಬೈಲ್ ವಿಕಿರಣದಿಂದ ಬರುವ ರೋಗಗಳನ್ನು ನಿಯಂತ್ರಿಸಬಹುದು ಎಂದು ಕಥಿರಿಯಾ ಹೇಳಿದ್ದಾರೆ.
ಹೊಸ ಚಿಪ್ ಗೆ ಗೋಸತ್ವ ಕವಚ ಎಂದು ಹೆಸರಿಡಲಾಗಿದ್ದು ಗುಜರಾತಿನ ರಾಜ್ ಕೋಟ್ ಮೂಲದ ಶ್ರೀಜಿ ಗೋಶಾಲೆಯಲ್ಲಿ ಇದನ್ನು ಆವಿಷ್ಕರಿಸಲಾಗಿದೆ. ಈ ಗೋಶಾಲೆಯನ್ನು ಕಾಮಧೇನು ಆಯೋಗದಿಂದಲೇ 2019ರಲ್ಲಿ ರಚಿಸಲಾಗಿದ್ದು ಗೋವಿನ ಉತ್ಪನ್ನಗಳನ್ನು ಅಭಿವೃದ್ಧಿ ಪಡಿಸಲು ಆರಂಭಿಸಲಾಗಿತ್ತು. ಈ ಬಾರಿಯ ದೀಪಾವಳಿ ಸಂದರ್ಭದಲ್ಲಿ ಆಯೋಗದಿಂದ ಗೋವುಗಳ ಉತ್ಪನ್ನದ ಪ್ರಚಾರಕ್ಕಾಗಿ ರಾಷ್ಟ್ರ ಮಟ್ಟದ ಅಭಿಯಾನ ನಡೆಸಲಾಗುತ್ತಿದೆ. ಇದೇ ವೇಳೆ, ಈ ಬಾರಿಯ ಹಬ್ಬದ ವೇಳೆ ಚೀನಾ ನಿರ್ಮಿತ ಪಟಾಕಿಗಳನ್ನು ಸುಡುವ ಬದಲು ಸ್ವದೇಶಿ ಉತ್ಪನ್ನಗಳನ್ನು ಬಳಸುವಂತೆ ಜನರಿಗೆ ಕಥರಿಯಾ ಕರೆ ನೀಡಿದ್ದಾರೆ.
Rashtriya Kamdhenu Aayog (RKA) chairman Vallabhbhai Kathiria unveiled a ''chip'' made of cow dung and declared that it reduces radiation from mobile handsets and it will be a protection against all diseases.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm