ಬ್ರೇಕಿಂಗ್ ನ್ಯೂಸ್
13-10-20 04:06 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 13: ರಾಷ್ಟ್ರೀಯ ಕಾಮಧೇನು ಆಯೋಗದ ಅಧ್ಯಕ್ಷ ವಲ್ಲಭಭಾಯಿ ಕಥರಿಯಾ ಗೋವಿನ ಸೆಗಣಿಯಿಂದ ಮಾಡಿದ ಚಿಪ್ ಅನ್ನು ಹೊರತಂದಿದ್ದಾರೆ. ಮೊಬೈಲ್ ಫೋನ್ ಹೊರಸೂಸುವ ವಿಕಿರಣವನ್ನು ಈ ಚಿಪ್ ತಡೆಯಬಲ್ಲದು. ಆಮೂಲಕ ವಿಕಿರಣ ಸಂಬಂಧಿ ರೋಗಗಳನ್ನು ಈ ಚಿಪ್ ನಿವಾರಿಸಲಿದೆ ಎಂದು ಕಥರಿಯಾ ಹೇಳಿದ್ದಾರೆ.
ಕೇಂದ್ರ ಸರಕಾರದ ಮೀನುಗಾರಿಕೆ ಮತ್ತು ಪಶು ಸಂಗೋಪನೆ ಇಲಾಖೆಯಡಿ ಸ್ಥಾಪಿಸಲಾಗಿರುವ ರಾಷ್ಟ್ರೀಯ ಕಾಮಧೇನು ಆಯೋಗದಿಂದ ಈ ಹೊಸ ಮಾದರಿಯ ಚಿಪ್ ಅನ್ನು ಬಿಡುಗಡೆ ಮಾಡಲಾಗಿದೆ. ಸಗಣಿ ಉತ್ಪನ್ನಗಳ ಪ್ರಚಾರಕ್ಕಾಗಿ ಆಯೋಗದ ವತಿಯಿಂದ ಕಾಮಧೇನು ದೀಪಾವಳಿ ಹೆಸರಲ್ಲಿ ರಾಷ್ಟ್ರ ಮಟ್ಟದ ಅಭಿಯಾನ ಹಮ್ಮಿಕೊಂಡಿದ್ದು, ಕಥರಿಯಾ ದೆಹಲಿಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಗೋವಿನ ಸೆಗಣಿ ವಿಕಿರಣ ವಿರೋಧಿಯಾಗಿದ್ದು, ಎಲ್ಲರನ್ನು ಕಾಪಾಡುತ್ತದೆ. ಇದು ವೈಜ್ಞಾನಿಕವಾಗಿಯೂ ಸಾಬೀತಾಗಿದೆ. ಈ ಚಿಪ್ ಅನ್ನು ಮೊಬೈಲ್ ಫೋನ್ ಗಳಲ್ಲಿ ಬಳಸಬಹುದು. ಇದರಿಂದ ಮೊಬೈಲ್ ವಿಕಿರಣದಿಂದ ಬರುವ ರೋಗಗಳನ್ನು ನಿಯಂತ್ರಿಸಬಹುದು ಎಂದು ಕಥಿರಿಯಾ ಹೇಳಿದ್ದಾರೆ.
ಹೊಸ ಚಿಪ್ ಗೆ ಗೋಸತ್ವ ಕವಚ ಎಂದು ಹೆಸರಿಡಲಾಗಿದ್ದು ಗುಜರಾತಿನ ರಾಜ್ ಕೋಟ್ ಮೂಲದ ಶ್ರೀಜಿ ಗೋಶಾಲೆಯಲ್ಲಿ ಇದನ್ನು ಆವಿಷ್ಕರಿಸಲಾಗಿದೆ. ಈ ಗೋಶಾಲೆಯನ್ನು ಕಾಮಧೇನು ಆಯೋಗದಿಂದಲೇ 2019ರಲ್ಲಿ ರಚಿಸಲಾಗಿದ್ದು ಗೋವಿನ ಉತ್ಪನ್ನಗಳನ್ನು ಅಭಿವೃದ್ಧಿ ಪಡಿಸಲು ಆರಂಭಿಸಲಾಗಿತ್ತು. ಈ ಬಾರಿಯ ದೀಪಾವಳಿ ಸಂದರ್ಭದಲ್ಲಿ ಆಯೋಗದಿಂದ ಗೋವುಗಳ ಉತ್ಪನ್ನದ ಪ್ರಚಾರಕ್ಕಾಗಿ ರಾಷ್ಟ್ರ ಮಟ್ಟದ ಅಭಿಯಾನ ನಡೆಸಲಾಗುತ್ತಿದೆ. ಇದೇ ವೇಳೆ, ಈ ಬಾರಿಯ ಹಬ್ಬದ ವೇಳೆ ಚೀನಾ ನಿರ್ಮಿತ ಪಟಾಕಿಗಳನ್ನು ಸುಡುವ ಬದಲು ಸ್ವದೇಶಿ ಉತ್ಪನ್ನಗಳನ್ನು ಬಳಸುವಂತೆ ಜನರಿಗೆ ಕಥರಿಯಾ ಕರೆ ನೀಡಿದ್ದಾರೆ.
Rashtriya Kamdhenu Aayog (RKA) chairman Vallabhbhai Kathiria unveiled a ''chip'' made of cow dung and declared that it reduces radiation from mobile handsets and it will be a protection against all diseases.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm