ಬ್ರೇಕಿಂಗ್ ನ್ಯೂಸ್
13-10-20 04:06 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 13: ರಾಷ್ಟ್ರೀಯ ಕಾಮಧೇನು ಆಯೋಗದ ಅಧ್ಯಕ್ಷ ವಲ್ಲಭಭಾಯಿ ಕಥರಿಯಾ ಗೋವಿನ ಸೆಗಣಿಯಿಂದ ಮಾಡಿದ ಚಿಪ್ ಅನ್ನು ಹೊರತಂದಿದ್ದಾರೆ. ಮೊಬೈಲ್ ಫೋನ್ ಹೊರಸೂಸುವ ವಿಕಿರಣವನ್ನು ಈ ಚಿಪ್ ತಡೆಯಬಲ್ಲದು. ಆಮೂಲಕ ವಿಕಿರಣ ಸಂಬಂಧಿ ರೋಗಗಳನ್ನು ಈ ಚಿಪ್ ನಿವಾರಿಸಲಿದೆ ಎಂದು ಕಥರಿಯಾ ಹೇಳಿದ್ದಾರೆ.
ಕೇಂದ್ರ ಸರಕಾರದ ಮೀನುಗಾರಿಕೆ ಮತ್ತು ಪಶು ಸಂಗೋಪನೆ ಇಲಾಖೆಯಡಿ ಸ್ಥಾಪಿಸಲಾಗಿರುವ ರಾಷ್ಟ್ರೀಯ ಕಾಮಧೇನು ಆಯೋಗದಿಂದ ಈ ಹೊಸ ಮಾದರಿಯ ಚಿಪ್ ಅನ್ನು ಬಿಡುಗಡೆ ಮಾಡಲಾಗಿದೆ. ಸಗಣಿ ಉತ್ಪನ್ನಗಳ ಪ್ರಚಾರಕ್ಕಾಗಿ ಆಯೋಗದ ವತಿಯಿಂದ ಕಾಮಧೇನು ದೀಪಾವಳಿ ಹೆಸರಲ್ಲಿ ರಾಷ್ಟ್ರ ಮಟ್ಟದ ಅಭಿಯಾನ ಹಮ್ಮಿಕೊಂಡಿದ್ದು, ಕಥರಿಯಾ ದೆಹಲಿಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಗೋವಿನ ಸೆಗಣಿ ವಿಕಿರಣ ವಿರೋಧಿಯಾಗಿದ್ದು, ಎಲ್ಲರನ್ನು ಕಾಪಾಡುತ್ತದೆ. ಇದು ವೈಜ್ಞಾನಿಕವಾಗಿಯೂ ಸಾಬೀತಾಗಿದೆ. ಈ ಚಿಪ್ ಅನ್ನು ಮೊಬೈಲ್ ಫೋನ್ ಗಳಲ್ಲಿ ಬಳಸಬಹುದು. ಇದರಿಂದ ಮೊಬೈಲ್ ವಿಕಿರಣದಿಂದ ಬರುವ ರೋಗಗಳನ್ನು ನಿಯಂತ್ರಿಸಬಹುದು ಎಂದು ಕಥಿರಿಯಾ ಹೇಳಿದ್ದಾರೆ.
ಹೊಸ ಚಿಪ್ ಗೆ ಗೋಸತ್ವ ಕವಚ ಎಂದು ಹೆಸರಿಡಲಾಗಿದ್ದು ಗುಜರಾತಿನ ರಾಜ್ ಕೋಟ್ ಮೂಲದ ಶ್ರೀಜಿ ಗೋಶಾಲೆಯಲ್ಲಿ ಇದನ್ನು ಆವಿಷ್ಕರಿಸಲಾಗಿದೆ. ಈ ಗೋಶಾಲೆಯನ್ನು ಕಾಮಧೇನು ಆಯೋಗದಿಂದಲೇ 2019ರಲ್ಲಿ ರಚಿಸಲಾಗಿದ್ದು ಗೋವಿನ ಉತ್ಪನ್ನಗಳನ್ನು ಅಭಿವೃದ್ಧಿ ಪಡಿಸಲು ಆರಂಭಿಸಲಾಗಿತ್ತು. ಈ ಬಾರಿಯ ದೀಪಾವಳಿ ಸಂದರ್ಭದಲ್ಲಿ ಆಯೋಗದಿಂದ ಗೋವುಗಳ ಉತ್ಪನ್ನದ ಪ್ರಚಾರಕ್ಕಾಗಿ ರಾಷ್ಟ್ರ ಮಟ್ಟದ ಅಭಿಯಾನ ನಡೆಸಲಾಗುತ್ತಿದೆ. ಇದೇ ವೇಳೆ, ಈ ಬಾರಿಯ ಹಬ್ಬದ ವೇಳೆ ಚೀನಾ ನಿರ್ಮಿತ ಪಟಾಕಿಗಳನ್ನು ಸುಡುವ ಬದಲು ಸ್ವದೇಶಿ ಉತ್ಪನ್ನಗಳನ್ನು ಬಳಸುವಂತೆ ಜನರಿಗೆ ಕಥರಿಯಾ ಕರೆ ನೀಡಿದ್ದಾರೆ.
Rashtriya Kamdhenu Aayog (RKA) chairman Vallabhbhai Kathiria unveiled a ''chip'' made of cow dung and declared that it reduces radiation from mobile handsets and it will be a protection against all diseases.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm