ಬ್ರೇಕಿಂಗ್ ನ್ಯೂಸ್
14-10-20 09:34 am Headline Karnataka News Network ದೇಶ - ವಿದೇಶ
ವಿಶಾಖಪಟ್ಟಣಂ, ಅಕ್ಟೋಬರ್ .14: ಬಂಗಾಳಕೊಲ್ಲಿಯಲ್ಲಿ ಉಂಟಾದ ತೀವ್ರ ವಾಯುಭಾರ ಕುಸಿತದ ಪರಿಣಾಮ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ವಾಯುಭಾರ ಕುಸಿತ ಮಂಗಳವಾರ ಬೆಳಿಗ್ಗೆ ಕಾಕಿನಾಡ ಕರಾವಳಿಯ ಮೂಲಕ ಆಂಧ್ರಪ್ರದೇಶವನ್ನು ದಾಟಿದೆ ಎಂದು ವಿಶಾಖಪಟ್ಟಣಂನ ಚಂಡಮಾರುತ ಎಚ್ಚರಿಕೆ ಕೇಂದ್ರ ಮಾಹಿತಿ ನೀಡಿದೆ.


ಪೂರ್ವ ಗೋದಾವರಿ ಜಿಲ್ಲೆಯ ತುನಿ ಮತ್ತು ವಿಶಾಖಪಟ್ಟಣಂನ ನರಸಿಪಟ್ಟಣಂ ಸಂಪರ್ಕ ರಸ್ತೆಯ ಮೇಲೆ ನದಿ ನೀರು ಉಕ್ಕಿಹರಿದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಪ್ರವಾಹದಲ್ಲಿ ಕೊಚ್ಚಿಹೋಗಿದೆ. ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ಕಾರಿನಲ್ಲಿದ್ದ ದಂಪತಿಯನ್ನು ರಕ್ಷಿಸಿದರೂ, ಜತೆಗಿದ್ದ ಹಿರಿಯ ಮಹಿಳೆ ನೀರಿನಲ್ಲಿ ಮುಳುಗಿ ಮೃತಪಟ್ಟರು. ಸೋಮವಾರ ರಾತ್ರಿ ವಿಶಾಖಪಟ್ಟಣಂನಲ್ಲಿ ಕಲ್ಲು ಬಂಡೆಯೊಂದು ಮನೆಯ ಮೇಲೆ ಉರುಳಿಬಿದ್ದು 3 ವರ್ಷದ ಮಗು ಮತ್ತು ಮಗುವಿನ ತಾಯಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಮಧ್ಯೆ, ವಿಶಾಖಪಟ್ಟಣಂ ಬಂದರಿನಲ್ಲಿ ಲಂಗರು ಹಾಕಲು ಸಜ್ಜಾಗಿದ್ದ ‘ಮಾ ಆಫ್ ಬಾಂಗ್ಲಾದೇಶ್’ ಎಂಬ ಹೆಸರಿನ ಹಡಗು ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಸಿಲುಕಿ ಉತ್ತರದತ್ತ ಚಲಿಸಿ ಬೀಚ್ ರಸ್ತೆಯ ತೆನ್ನೆಟಿ ಪಾರ್ಕ್ನ ಬಳಿ ದಡ ಸೇರಿದೆ. ಮಂಗಳವಾರ ಬೆಳಗ್ಗಿನವರೆಗಿನ 24 ಗಂಟೆಗಳ ಅವಧಿಯಲ್ಲಿ ಯನಾಮ್ನಲ್ಲಿ 25 ಸೆ.ಮೀ ಮಳೆಯಾಗಿದ್ದರೆ, ಅಮಲಾಪುರಂನಲ್ಲಿ 18 ಸೆ.ಮೀ, ತಡೆಪಲ್ಲೆಗುಡ್ಡಂ ಮತ್ತು ನುವಿಡ್ನಲ್ಲಿ ತಲಾ 18 ಸೆ.ಮೀ, ವಿಶಾಖಪಟ್ಟಣಂನಲ್ಲಿ 8 ಸೆ.ಮೀ ಮಳೆಯಾಗಿದೆ ಎಂದು ವರದಿಯಾಗಿದೆ.
48 ಗಂಟೆಗಳ ಕಾಲ ಸುರಿದ ನಿರಂತರ ಮಳೆಯಲ್ಲಿ ಆಂಧ್ರ ಪ್ರದೇಶ ಮೂಲದ ಮೂವರು ಹಾಗೂ ತೆಲಂಗಾಣ ಮೂಲದ ಮೂವರು ಮೃತಪಟ್ಟಿದ್ದಾರೆ.
At least six people have died, three in Andhra Pradesh and three in Telangana after continuous rain in the last 48 hours.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm